Homeಮುಖಪುಟ‘ಲಿಂಗಾಯತ ಧರ್ಮ ಹಿಂದೆಯೂ ಇತ್ತು, ಇಂದೂ ಇದೆ, ಮುಂದೆಯೂ ಇರುತ್ತದೆ’

‘ಲಿಂಗಾಯತ ಧರ್ಮ ಹಿಂದೆಯೂ ಇತ್ತು, ಇಂದೂ ಇದೆ, ಮುಂದೆಯೂ ಇರುತ್ತದೆ’

- Advertisement -
- Advertisement -

ಗದುಗಿನ ತೋಂಟದಾರ್ಯ ಮಠದಲ್ಲಿ ಸಿದ್ಧಲಿಂಗ ಶ್ರೀಗಳ ಮೂರನೇ ವರ್ಷದ ಸ್ಮರಣೆ ‘ಮರಣವೇ ಮಹಾನವಮಿ’ ಕಾರ್ಯಕ್ರಮ ಶನಿವಾರ ನಡೆದಿದ್ದು, ಲಿಂಗಾಯತ ಧರ್ಮದ ವಿಚಾರ ಮುನ್ನೆಲೆಗೆ ಬಂದಿದೆ.

ಸನ್ಮಾನ ಸ್ವೀಕರಿಸಿದ ಮಾತನಾಡಿದ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು, “ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆಯಾಗಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಲಿಂಗಾಯತ ಧರ್ಮ ಎಂದೆಂದಿಗೂ ಸ್ವತಂತ್ರ ಧರ್ಮ. ಹಿಂದೆಯೂ ಇತ್ತು. ಇಂದೂ ಇದೆ. ಹಾಗೆಯೇ, ಮುಂದೆಯೂ ಇರುತ್ತದೆ. ಆದರೆ, ಅದಕ್ಕೆ ಸರ್ಕಾರದ ಮಾನ್ಯತೆ ಬೇಕಿತ್ತು. ಅದಕ್ಕೆ ಪೂರಕವಾಗಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ಅವರು ಐತಿಹಾಸಿಕ ದಾಖಲೆಗಳನ್ನು ಸರ್ಕಾರಕ್ಕೆ ಒದಗಿಸಿಕೊಟ್ಟಿದ್ದಾರೆ” ಎಂದು ತಿಳಿಸಿದರು.

“ಲಿಂಗಾಯತ ಧರ್ಮ ಎಲ್ಲೂ ವಿಂಗಡಣೆ ಆಗಿಲ್ಲ. ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆಯೂ ಆಗಿಲ್ಲ. ಲಿಂಗಾಯತ ಧರ್ಮ ಮತ್ತೊಮ್ಮೆ ಬೆಳಗಲಿದೆ. ತೋಂಟದ ಸಿದ್ಧರಾಮ ಶ್ರೀಗಳ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಪ್ರಯತ್ನಿಸಬೇಕು” ಎಂದು ಹೇಳಿದರು.

ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಸ್ಟೀಸ್‌ ನಾಗಮೋಹನ್‌ದಾಸ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಕ ಮಾಡಿದರು. ಅದರಂತೆ ಈ ವಿಷಯದಲ್ಲಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತಹ ವರದಿಯನ್ನು ನಾಗಮೋಹನ್‌ದಾಸ್‌ ನೀಡಿದ್ದಾರೆ’ ಎಂದರು.

ತೋಂಟದ ಸಿದ್ಧಲಿಂಗ ಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಜಸ್ಟೀಸ್ ಎಚ್‌.ಎನ್.ನಾಗಮೋಹನ ದಾಸ್ ಅವರಿಗೆ ಪ್ರಧಾನ ಮಾಡಲಾಯಿತು. ಪ್ರಶಸ್ತಿಯು ಐದು ಲಕ್ಷ ರೂ. ನಗದನ್ನು ಒಳಗೊಂಡಿದ್ದು, ‘ಸಂವಿಧಾನ ಓದು’ ಅಭಿಯಾನಕ್ಕೆ ಈ ಹಣವನ್ನು ಬಳಸುವುದಾಗಿ ನಾಗಮೋಹನದಾಸ್‌ ತಿಳಿಸಿದ್ದಾರೆ.

ಮುಂಡರಗಿ- ಬೈಲೂರು ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮೌಲ್ವಿ, ಹಿರಿಯ ರಾಜಕಾರಣಿ ಎಸ್‌.ಎಸ್‌.ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಶಿರೋಳ ಮಠದ ಗುರುಬಸವ ಸ್ವಾಮೀಜಿ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....