Homeಮುಖಪುಟ‘ಲಿಂಗಾಯತ ಧರ್ಮ ಹಿಂದೆಯೂ ಇತ್ತು, ಇಂದೂ ಇದೆ, ಮುಂದೆಯೂ ಇರುತ್ತದೆ’

‘ಲಿಂಗಾಯತ ಧರ್ಮ ಹಿಂದೆಯೂ ಇತ್ತು, ಇಂದೂ ಇದೆ, ಮುಂದೆಯೂ ಇರುತ್ತದೆ’

- Advertisement -
- Advertisement -

ಗದುಗಿನ ತೋಂಟದಾರ್ಯ ಮಠದಲ್ಲಿ ಸಿದ್ಧಲಿಂಗ ಶ್ರೀಗಳ ಮೂರನೇ ವರ್ಷದ ಸ್ಮರಣೆ ‘ಮರಣವೇ ಮಹಾನವಮಿ’ ಕಾರ್ಯಕ್ರಮ ಶನಿವಾರ ನಡೆದಿದ್ದು, ಲಿಂಗಾಯತ ಧರ್ಮದ ವಿಚಾರ ಮುನ್ನೆಲೆಗೆ ಬಂದಿದೆ.

ಸನ್ಮಾನ ಸ್ವೀಕರಿಸಿದ ಮಾತನಾಡಿದ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು, “ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆಯಾಗಿಲ್ಲ” ಎಂದು ಪ್ರತಿಪಾದಿಸಿದ್ದಾರೆ.

“ಲಿಂಗಾಯತ ಧರ್ಮ ಎಂದೆಂದಿಗೂ ಸ್ವತಂತ್ರ ಧರ್ಮ. ಹಿಂದೆಯೂ ಇತ್ತು. ಇಂದೂ ಇದೆ. ಹಾಗೆಯೇ, ಮುಂದೆಯೂ ಇರುತ್ತದೆ. ಆದರೆ, ಅದಕ್ಕೆ ಸರ್ಕಾರದ ಮಾನ್ಯತೆ ಬೇಕಿತ್ತು. ಅದಕ್ಕೆ ಪೂರಕವಾಗಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ಅವರು ಐತಿಹಾಸಿಕ ದಾಖಲೆಗಳನ್ನು ಸರ್ಕಾರಕ್ಕೆ ಒದಗಿಸಿಕೊಟ್ಟಿದ್ದಾರೆ” ಎಂದು ತಿಳಿಸಿದರು.

“ಲಿಂಗಾಯತ ಧರ್ಮ ಎಲ್ಲೂ ವಿಂಗಡಣೆ ಆಗಿಲ್ಲ. ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹಿನ್ನಡೆಯೂ ಆಗಿಲ್ಲ. ಲಿಂಗಾಯತ ಧರ್ಮ ಮತ್ತೊಮ್ಮೆ ಬೆಳಗಲಿದೆ. ತೋಂಟದ ಸಿದ್ಧರಾಮ ಶ್ರೀಗಳ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಪ್ರಯತ್ನಿಸಬೇಕು” ಎಂದು ಹೇಳಿದರು.

ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಸ್ಟೀಸ್‌ ನಾಗಮೋಹನ್‌ದಾಸ್‌ ಅವರ ನೇತೃತ್ವದಲ್ಲಿ ಸಮಿತಿಯನ್ನು ನೇಮಕ ಮಾಡಿದರು. ಅದರಂತೆ ಈ ವಿಷಯದಲ್ಲಿ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತಹ ವರದಿಯನ್ನು ನಾಗಮೋಹನ್‌ದಾಸ್‌ ನೀಡಿದ್ದಾರೆ’ ಎಂದರು.

ತೋಂಟದ ಸಿದ್ಧಲಿಂಗ ಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ಜಸ್ಟೀಸ್ ಎಚ್‌.ಎನ್.ನಾಗಮೋಹನ ದಾಸ್ ಅವರಿಗೆ ಪ್ರಧಾನ ಮಾಡಲಾಯಿತು. ಪ್ರಶಸ್ತಿಯು ಐದು ಲಕ್ಷ ರೂ. ನಗದನ್ನು ಒಳಗೊಂಡಿದ್ದು, ‘ಸಂವಿಧಾನ ಓದು’ ಅಭಿಯಾನಕ್ಕೆ ಈ ಹಣವನ್ನು ಬಳಸುವುದಾಗಿ ನಾಗಮೋಹನದಾಸ್‌ ತಿಳಿಸಿದ್ದಾರೆ.

ಮುಂಡರಗಿ- ಬೈಲೂರು ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ. ಮೌಲ್ವಿ, ಹಿರಿಯ ರಾಜಕಾರಣಿ ಎಸ್‌.ಎಸ್‌.ಪಾಟೀಲ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ಶಿರೋಳ ಮಠದ ಗುರುಬಸವ ಸ್ವಾಮೀಜಿ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್‌.ಎಸ್‌.ಪಟ್ಟಣಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ‘ತೋಂಟದ ಶ್ರೀ ಪ್ರಶಸ್ತಿಯ 5 ಲಕ್ಷ ರೂ.ಗಳನ್ನೂ ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...