Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...