Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...