Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...