Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...