Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...