Homeಮುಖಪುಟಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

ಪ್ರತಾಪ್‌‌ಸಿಂಹ ವಿರುದ್ಧ ತಿರುಗಿಬಿದ್ದ ಲಿಂಗಾಯತರು: ತನ್ನದಲ್ಲದ ಕ್ಷೇತ್ರಕ್ಕೆ ಸಂಸದರು ಕಾಲಿಡುತ್ತಿರುವುದೇಕೆ?

- Advertisement -
- Advertisement -

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ ಅವರ ವಿರುದ್ಧ ಲಿಂಗಾಯತ ಸಮುದಾಯ ತಿರುಗಿ ಬಿದ್ದಿದೆ. ದೇವಾಲಯ ತೆರವು ಪ್ರಕರಣವನ್ನು ತನ್ನ ವರ್ಚಸ್ಸು ವೃದ್ಧಿಸಿಕೊಳ್ಳಲು ಪ್ರತಾಪ್‌ ಸಿಂಹ ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಸ್ಥಳೀಯ ಲಿಂಗಾಯತ ಮುಖಂಡರು ಪ್ರತಾಪ್‌ಸಿಂಹ ಅವರು ಪ್ರಕರಣದಲ್ಲಿ ಭಾಗಿಯಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಹುಚ್ಚುಗಣಿ ಮಹದೇವಮ್ಮನ ದೇವಾಲಯ ನೆಲಸಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅಧಿಕಾರಿಯನ್ನು ವರ್ಗಾಯಿಸಿರುವುದರಿಂದ ವೀರಶೈವ ಲಿಂಗಾಯತರು ಬೇಸರವಾಗಿದ್ದು, “ಪ್ರತಾಪ್‌ಸಿಂಹ ಲಿಂಗಾಯತ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟಂಬರ್ 28 ರಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭೆಯ ನೇತೃತ್ವದಲ್ಲಿ ನಂಜನಗೂಡು ಮಿನಿ ವಿಧಾನಸೌಧದ ಎದುರು ಜಮಾಯಿಸಿದ ವೀರಶೈವ-ಲಿಂಗಾಯತ ಸಮಾಜದ ನಾಯಕರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತ ಸಂಘಟಗಳ ಒಕ್ಕೂಟ, ರಾಜ್ಯ ರೈತ ಸಂಘವು ಇದಕ್ಕೆ ಬೆಂಬಲಿಸಿವೆ.

“ಮೈಸೂರು-ಕೊಡಗು ಸಂಸದರಿಗೆ, ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನಲ್ಲೇನು ಕೆಲಸ? ಹುಚ್ಚುಗಣಿ ಪ್ರಕರಣಕ್ಕೆ ತಲೆ ಹಾಕಿದ್ದು ಯಾಕ್ಕೆ? ಮೇಲಧಿಕಾರಿಗಳ ಆದೇಶವನ್ನು ಪಾಲಿಸಿದ್ದೇ ತಹಸೀಲ್ದಾರ್‌‌ ಅವರ ತಪ್ಪಾಯಿತೆ? ಮೇಲಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ? ಪ್ರತಾಪ್‌ಸಿಂಹ ಅವರಿಗೆ ಲಿಂಗಾಯತ ಸಮುದಾಯದ ಮೂರು ಲಕ್ಷ ಮತಗಳು ಕಳೆದ ಚುನಾವಣೆಯಲ್ಲಿ ಬಂದಿವೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಮೈಸೂರು ದೇವಾಲಯ ಧ್ವಂಸ – ತಹಶೀಲ್ದಾರ್‌ ತಲೆದಂಡ!

“ನಮ್ಮ ಸಂಸದರು ವಿ.ಶ್ರೀನಿವಾಸ ಪ್ರಸಾದ್. ನಾವು ಅವರೊಂದಿಗೆ ಮಾತನಾಡುತ್ತೇವೆ. ಪ್ರತಾಪ್‌ಸಿಂಹ ಅವರು ಲಿಂಗಾಯತರ ಮೇಲೆ ಯಾಕೆ ಪ್ರಭಾವ ಬೀರುತ್ತಿದ್ದಾರೆಂದು ತಿಳಿಯದು. ಪ್ರತಾಪ್‌ ಸಿಂಹ ಲಿಂಗಾಯತರ ವಿರೋಧಿಯಾಗಿದ್ದಾರೆ. ಮಹಿಳಾ ವಿರೋಧಿಯಾಗಿದ್ದಾರೆ” ಎಂದು ನಂಜನಗೂಡು ತಾಲ್ಲೂಕು ವೀರಶೈವ ಮಹಾಸಭಾ ಘಟಕದ ಉಪಾಧ್ಯಕ್ಷರಾದ ಮಂಜುಳಾ ಮಧು ಗುಡುಗಿದ್ದಾರೆ.

ವಿಡಿಯೋ ನೋಡಿ:

“ಮೋಹನಕುಮಾರಿಯವರು ಲಿಂಗಾಯತರು, ಅಬಲೆ; ಅವರನ್ನು ವರ್ಗಾಯಿಸಿದರೆ ಯಾರೂ ಕೇಳುವುದಿಲ್ಲ ಎಂದು ನೀವು ತಿಳಿದುಕೊಂಡಿದ್ದರೆ, ಮಹಿಳೆಯರೇ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಷ್ಟ ಹೇಳಲು ಕರೆ ಮಾಡಿದ ಮಹಿಳೆಗೆ ‘ನಿನ್ನ ಕಂತೆ, ಪುರಾಣ ಹೇಳಲು ಪೋನ್‌ ಮಾಡಿದ್ದೀಯಾ, ಇಡಮ್ಮ ಪೋನ್‌’ ಎಂದು ಹೇಳಿದ್ದೀರಿ. ಲಿಂಗಾಯತ ಮಹಿಳೆ ಆಗಿರಲಿ, ಮತ್ಯಾರೇ ಮಹಿಳೆಯರಾಗಿರಲಿ, ಮಾತನಾಡುವಾಗ ಎಚ್ಚರಿಕೆ ಇರಲಿ. ರೋಹಿಣಿ ಸಿಂಧೂರಿಯವರ ಮೇಲೆ ಟಾರ್ಗೇಟ್ ಮಾಡಿದಿರಿ. ನೀವು ಹೀಗೆ ದಬ್ಬಾಳಿಕೆ ಮುಂದುವರಿಸಿದರೆ ಯಾವ ಮಹಿಳೆಯೂ ಅಧಿಕಾರಿಯಾಗಲೂ, ಕೊನೆಯ ಪಕ್ಷ ಕಾನ್‌ಸ್ಟೆಬಲ್‌ ಆಗಲೂ ಇಷ್ಟಪಡುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರನ್ನೂ ತರಾಟೆಗೆ ಕೊಂಡಿರುವ ಅವರು, “ಬಿ.ಎಸ್.ಯಡಿಯೂರಪ್ಪನವರಿಂದಾಗಿ ನೀವು ಅಧಿಕಾರಕ್ಕೆ ಬಂದಿದ್ದೀರಿ, ಅವರಿಂದಾಗಿ ಸಚಿವರಾಗಿದ್ದೀರಿ. ಲಿಂಗಾಯತರೆಲ್ಲ ಒಂದಾಗದೆ ಇದ್ದಿದ್ದರೆ, ಇಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುತ್ತಿರಲಿಲ್ಲ. ನಮ್ಮ ತಾಲ್ಲೂಕಿನಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ತಿಳಿಸಿಕೊಡುತ್ತೇವೆ. ತಹಸೀಲ್ದಾರ್‌ ವರ್ಗಾವಣೆಯನ್ನು ರದ್ದುಗೊಳಿಸಬೇಕು” ಎಂದು ಕೂಗು ಕೇಳಿಬಂದಿದೆ.

ಲಿಂಗಾಯತರು ವಿರೋಧಿಸಿಲ್ಲ

ಮೋಹನ್‌ಕುಮಾರಿ ವಿರುದ್ಧದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ಇರಲಿಲ್ಲ. ಹೇಳಬೇಕೆಂದರೆ ಗಲಾಟೆ ಮಾಡುವಂತಹ ಪ್ರಕರಣವೇನೂ ಇದು ಆಗಿರಲಿಲ್ಲ. ಪ್ರತಾಪ್‌ಸಿಂಹ ಅವರು ಹಿಂದುತ್ವ ರಾಜಕಾರಣ ಮಾಡುವ ಮೂಲಕ ನಂಜನಗೂಡಿನಲ್ಲಿ ಪ್ರಬಲರಾಗಲು ಯತ್ನಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ನಂಜನಗೂಡಿನ ಸ್ಥಳೀಯ ಮುಖಂಡರು ಆರೋಪಿಸುತ್ತಾರೆ.

ಬೇರೆಯವರು ನಿಷ್ಕ್ರಿಯರೆಂದು ಬಿಂಬಿಸಲು ಯತ್ನ

ನಂಜನಗೂಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದೆ. ಹಿರಿಯ ದಲಿತ ನಾಯಕ, ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಅಳಿಯ ಹರ್ಷವರ್ಧನ್‌‌ ಅವರು ನಂಜನಗೂಡಿನ ಶಾಸಕರಾಗಿದ್ದಾರೆ. ಹರ್ಷವರ್ಧನ್‌ ಹಾಗೂ ಪ್ರತಾಪ್ ಸಿಂಹ ನಡುವೆ ‘ಜುಬಿಲಿಯಂಟ್‌’ ಕಾರ್ಖಾನೆ ವಿಚಾರವಾಗಿ ಭಿನ್ನಾಭಿಪ್ರಾಯ ಮೂಡಿತ್ತು. ಹರ್ಷವರ್ಧನ್‌ ಅವರನ್ನು ಕಡೆಗಣಿಸಿ, ತಾನೇ ಡಾಮಿನೇಟ್‌ ಆಗಬೇಕೆಂದು ನಂಜನಗೂಡಿನ ದೇವಾಲಯ ಪ್ರಕರಣದಲ್ಲಿ ಪ್ರತಾಪ್‌ಸಿಂಹ ಮೂಗು ತೂರಿಸಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸುತ್ತಾರೆ.

ನಂಜನಗೂಡಿನ ಜುಬಿಲಿಯಂಟ್‌ ಕಾರ್ಖಾನೆಯಲ್ಲಿ ಕೊರೊನಾ ಉಲ್ಬಣವಾದಾಗ ಶಾಸಕ ಬಿ.ಹರ್ಷವರ್ಧನ್‌ ಅವರು ಕಾರ್ಖಾನೆಗೆ ಬೀಗ ಹಾಕಿಸಿದ್ದರು. ಮುಂದಿನ ದಿನಗಳಲ್ಲಿ ಪ್ರತಾಪ್‌ ಸಿಂಹ ಕಾರ್ಖಾನೆಯ ಪರ ನಿಂತು ಬಾಗಿಲು ತೆರೆಸಿದ್ದರು. ಬೇರೆ ಶಾಸಕರನ್ನು ನಿಷ್ಕ್ರಿಯರು ಎಂದು ಬಿಂಬಿಸಲು ಪ್ರತಾಪ್‌ಸಿಂಹ ಯತ್ನಿಸುತ್ತಿದ್ದಾರೆ. ತನಗೆ ಸಂಬಂಧಪಡದ ಕ್ಷೇತ್ರಕ್ಕೂ ಪ್ರವೇಶಿಸುತ್ತಿದ್ದಾರೆ ಎಂದು ಟೀಕಿಸುತ್ತಾರೆ ಮುಖಂಡರು.

ಇದನ್ನೂ ಓದಿರಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...