Homeಮುಖಪುಟಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

- Advertisement -
- Advertisement -

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ ಮೂಲಕ ಮಿಯಾಮಿಯಿಂದ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ನೀಲಿ ಮತ್ತು ಬಿಳಿ ಜೆರ್ಸಿಗಳನ್ನು ತೊಟ್ಟ ಸಾವಿರಾರು ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ಮೆಸ್ಸಿ ಬರುವುದು ತಡವಾದ ಕಾರಣ ಕಾಯುತ್ತಿದ್ದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಆದರೆ, ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಹತ್ತಿ ಧ್ವಜ ಬೀಸಿದರು. ವಿಶ್ವಕಪ್ ವಿಜೇತ ನಾಯಕನ ಹೆಸರನ್ನು ಜಪಿಸಿದರು. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳುತ್ತಿದ್ದು, ನಗರದಾದ್ಯಂತ ಸಂತಸದ ವಾತಾವರಣ ಉಂಟುಮಾಡಿದೆ.

“ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದಾರೆ ಎಂಬ ಸಂತೋಷದ ವಾತಾವರಣವಿದೆ” ಎಂದು ಪ್ರವಾಸ ಸಂಘಟಕ ಸತಾದ್ರು ದತ್ತಾ ಹೇಳಿದರು. “ಭಾರತದೊಂದಿಗೆ ಫುಟ್‌ಬಾಲ್ ಸಂಪರ್ಕ ಮತ್ತೆ ಬೆಳೆಯುತ್ತಿದೆ. ಭಾರತೀಯ ಫುಟ್‌ಬಾಲ್‌ಗೆ ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಬಂದಿಲ್ಲ” ಎಂದರು.

ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾದ ಅಭಿಮಾನಿಗಳು ಆಗಮನವನ್ನು ಅವಾಸ್ತವಿಕ ಎಂದು ಬಣ್ಣಿಸಿದರು. “ನಾವು ಎರಡು ಗಂಟೆಗಳಿಂದ ಕಾಯುತ್ತಿದ್ದೇವೆ. ಅಗತ್ಯವಿದ್ದರೆ, ನಾವು ನಾಲ್ಕು ಗಂಟೆಗಳಾದರೂ ಕಾಯುತ್ತೇವೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಈ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು” ಎಂದು ಅಭಿಮಾನಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು. ಮತ್ತೊಬ್ಬ ಅಭಿಮಾನಿ ಮೆಸ್ಸಿಯನ್ನು “ಜಾದೂಗಾರ” ಎಂದು ಕರೆದರು.

ಕೋಲ್ಕತ್ತಾದ ಬಳಿಕ ಫುಟ್ಬಾಲ್ ದಂತಕಥೆ ಮೆಸ್ಸಿ ಅವರು ಹೈದರಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಮೆಸ್ಸಿ ಅವರ ಕೋಲ್ಕತ್ತಾದ ವೇಳಾಪಟ್ಟಿ ಇಂದು ಬೆಳಿಗ್ಗೆ 9:30 ರಿಂದ 10:30 ರ ನಡುವೆ ಆಯ್ದ ಅತಿಥಿಗಳಿಗಾಗಿ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗುತ್ತದೆ. ನಂತರ ಅವರ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ.

ನಂತರ. ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಸ್ನೇಹಪರ ಪಂದ್ಯ ನಡೆಯಲಿದೆ. ಅಲ್ಲಿ ಮೆಸ್ಸಿ ಅವರು ಅಭಿಮಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ಬೇಗನೆ ಹೊರಟ ಮೆಸ್ಸಿ

ಲಿಯೋನೆಲ್ ಮೆಸ್ಸಿ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರು ಕೋಲ್ಕತ್ತಾ ತಲುಪಿದ್ದಾರೆ. ಅವರು ಸೌರವ್ ಗಂಗೂಲಿ ಮತ್ತು ಶಾರುಖ್ ಖಾನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳನ್ನು ಭೇಟಿಯಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿಯನ್ನು ಸನ್ಮಾನಿಸಲಿದ್ದಾರೆ.

ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಮೂರು ದಿನಗಳ ಭಾರತ ಭೇಟಿಗಾಗಿ ಕೋಲ್ಕತ್ತಾ ತಲುಪಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಬರಮಾಡಿಕೊಂಡರು. ಅಭಿಮಾನಿಗಳು ಹೋಟೆಲ್‌ವರೆಗೂ ಬಂದರು. ವಿಶ್ವಕಪ್ ವಿಜೇತ ರೊಡ್ರಿಗೋ ಡಿ ಪಾಲ್ ಮತ್ತು ಮೆಸ್ಸಿಯ ಇಂಟರ್ ಮಿಯಾಮಿ ತಂಡದ ಸಹ ಆಟಗಾರ ಲೂಯಿಸ್ ಸುವಾರೆಜ್ ಕೂಡ ಪ್ರವಾಸದ ಭಾಗವಾಗಿ ಭಾರತಕ್ಕೆ ಪ್ರಯಾಣಿಸಿದ ತಂಡದಲ್ಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಿಂದ ಲಿಯೋನೆಲ್ ಮೆಸ್ಸಿ ಬೇಗನೆ ಹೊರಟಿದ್ದರಿಂದ ಕೋಪಗೊಂಡ ಹಾಜರಿದ್ದ ಅಭಿಮಾನಿಗಳು ಆಸನಗಳನ್ನು ಮುರಿದರು ಎಂದು ಸಾಮಾಜಿಕ ಮಾಧ್ಯಮದಲ್ಲಿವೀಡಿಯೊ ವೈರಲ್ ಆಗಿದೆ. ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ನೀರಿ ಬಾಟಲಿಗಳನ್ನು ಎಸೆದಿದ್ದಾರೆ. ಜಿತೆಗೆ ದೊಡ್ಡ ಗದ್ದಲದ ಶಬ್ದಗಳು ಕೇಳಿಬಂದಿದೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳನ್ನು ಸ್ವಾಗತಿಸಿದ ಮೆಸ್ಸಿ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳನ್ನು ಸ್ವಾಗತಿಸಿದ ಲಿಯೋನೆಲ್ ಮೆಸ್ಸಿ. ಅವರು ಮೋಹನ್ ಬಗಾನ್ ಕಾರ್ಯದರ್ಶಿ ಶ್ರೀಂಜಯ್ ಬೋಸ್ ಅವರನ್ನು ಭೇಟಿ ಮಾಡಿ ತಮ್ಮ ಕೋಟ್‌ಗೆ ಸಹಿ ಹಾಕಿದರು. ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಕೂಡ ಈ ಕಾರ್ಯಕ್ರಮದ ಭಾಗವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...