Homeಮುಖಪುಟಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

- Advertisement -
- Advertisement -

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ ಮೂಲಕ ಮಿಯಾಮಿಯಿಂದ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ನೀಲಿ ಮತ್ತು ಬಿಳಿ ಜೆರ್ಸಿಗಳನ್ನು ತೊಟ್ಟ ಸಾವಿರಾರು ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ಮೆಸ್ಸಿ ಬರುವುದು ತಡವಾದ ಕಾರಣ ಕಾಯುತ್ತಿದ್ದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಆದರೆ, ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಹತ್ತಿ ಧ್ವಜ ಬೀಸಿದರು. ವಿಶ್ವಕಪ್ ವಿಜೇತ ನಾಯಕನ ಹೆಸರನ್ನು ಜಪಿಸಿದರು. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳುತ್ತಿದ್ದು, ನಗರದಾದ್ಯಂತ ಸಂತಸದ ವಾತಾವರಣ ಉಂಟುಮಾಡಿದೆ.

“ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದಾರೆ ಎಂಬ ಸಂತೋಷದ ವಾತಾವರಣವಿದೆ” ಎಂದು ಪ್ರವಾಸ ಸಂಘಟಕ ಸತಾದ್ರು ದತ್ತಾ ಹೇಳಿದರು. “ಭಾರತದೊಂದಿಗೆ ಫುಟ್‌ಬಾಲ್ ಸಂಪರ್ಕ ಮತ್ತೆ ಬೆಳೆಯುತ್ತಿದೆ. ಭಾರತೀಯ ಫುಟ್‌ಬಾಲ್‌ಗೆ ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಬಂದಿಲ್ಲ” ಎಂದರು.

ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾದ ಅಭಿಮಾನಿಗಳು ಆಗಮನವನ್ನು ಅವಾಸ್ತವಿಕ ಎಂದು ಬಣ್ಣಿಸಿದರು. “ನಾವು ಎರಡು ಗಂಟೆಗಳಿಂದ ಕಾಯುತ್ತಿದ್ದೇವೆ. ಅಗತ್ಯವಿದ್ದರೆ, ನಾವು ನಾಲ್ಕು ಗಂಟೆಗಳಾದರೂ ಕಾಯುತ್ತೇವೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಈ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು” ಎಂದು ಅಭಿಮಾನಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು. ಮತ್ತೊಬ್ಬ ಅಭಿಮಾನಿ ಮೆಸ್ಸಿಯನ್ನು “ಜಾದೂಗಾರ” ಎಂದು ಕರೆದರು.

ಕೋಲ್ಕತ್ತಾದ ಬಳಿಕ ಫುಟ್ಬಾಲ್ ದಂತಕಥೆ ಮೆಸ್ಸಿ ಅವರು ಹೈದರಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಮೆಸ್ಸಿ ಅವರ ಕೋಲ್ಕತ್ತಾದ ವೇಳಾಪಟ್ಟಿ ಇಂದು ಬೆಳಿಗ್ಗೆ 9:30 ರಿಂದ 10:30 ರ ನಡುವೆ ಆಯ್ದ ಅತಿಥಿಗಳಿಗಾಗಿ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗುತ್ತದೆ. ನಂತರ ಅವರ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ.

ನಂತರ. ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಸ್ನೇಹಪರ ಪಂದ್ಯ ನಡೆಯಲಿದೆ. ಅಲ್ಲಿ ಮೆಸ್ಸಿ ಅವರು ಅಭಿಮಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ಬೇಗನೆ ಹೊರಟ ಮೆಸ್ಸಿ

ಲಿಯೋನೆಲ್ ಮೆಸ್ಸಿ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರು ಕೋಲ್ಕತ್ತಾ ತಲುಪಿದ್ದಾರೆ. ಅವರು ಸೌರವ್ ಗಂಗೂಲಿ ಮತ್ತು ಶಾರುಖ್ ಖಾನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳನ್ನು ಭೇಟಿಯಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿಯನ್ನು ಸನ್ಮಾನಿಸಲಿದ್ದಾರೆ.

ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಮೂರು ದಿನಗಳ ಭಾರತ ಭೇಟಿಗಾಗಿ ಕೋಲ್ಕತ್ತಾ ತಲುಪಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಬರಮಾಡಿಕೊಂಡರು. ಅಭಿಮಾನಿಗಳು ಹೋಟೆಲ್‌ವರೆಗೂ ಬಂದರು. ವಿಶ್ವಕಪ್ ವಿಜೇತ ರೊಡ್ರಿಗೋ ಡಿ ಪಾಲ್ ಮತ್ತು ಮೆಸ್ಸಿಯ ಇಂಟರ್ ಮಿಯಾಮಿ ತಂಡದ ಸಹ ಆಟಗಾರ ಲೂಯಿಸ್ ಸುವಾರೆಜ್ ಕೂಡ ಪ್ರವಾಸದ ಭಾಗವಾಗಿ ಭಾರತಕ್ಕೆ ಪ್ರಯಾಣಿಸಿದ ತಂಡದಲ್ಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಿಂದ ಲಿಯೋನೆಲ್ ಮೆಸ್ಸಿ ಬೇಗನೆ ಹೊರಟಿದ್ದರಿಂದ ಕೋಪಗೊಂಡ ಹಾಜರಿದ್ದ ಅಭಿಮಾನಿಗಳು ಆಸನಗಳನ್ನು ಮುರಿದರು ಎಂದು ಸಾಮಾಜಿಕ ಮಾಧ್ಯಮದಲ್ಲಿವೀಡಿಯೊ ವೈರಲ್ ಆಗಿದೆ. ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ನೀರಿ ಬಾಟಲಿಗಳನ್ನು ಎಸೆದಿದ್ದಾರೆ. ಜಿತೆಗೆ ದೊಡ್ಡ ಗದ್ದಲದ ಶಬ್ದಗಳು ಕೇಳಿಬಂದಿದೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳನ್ನು ಸ್ವಾಗತಿಸಿದ ಮೆಸ್ಸಿ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳನ್ನು ಸ್ವಾಗತಿಸಿದ ಲಿಯೋನೆಲ್ ಮೆಸ್ಸಿ. ಅವರು ಮೋಹನ್ ಬಗಾನ್ ಕಾರ್ಯದರ್ಶಿ ಶ್ರೀಂಜಯ್ ಬೋಸ್ ಅವರನ್ನು ಭೇಟಿ ಮಾಡಿ ತಮ್ಮ ಕೋಟ್‌ಗೆ ಸಹಿ ಹಾಕಿದರು. ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಕೂಡ ಈ ಕಾರ್ಯಕ್ರಮದ ಭಾಗವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...