Homeಮುಖಪುಟಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

- Advertisement -
- Advertisement -

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ ಮೂಲಕ ಮಿಯಾಮಿಯಿಂದ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ನೀಲಿ ಮತ್ತು ಬಿಳಿ ಜೆರ್ಸಿಗಳನ್ನು ತೊಟ್ಟ ಸಾವಿರಾರು ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ಮೆಸ್ಸಿ ಬರುವುದು ತಡವಾದ ಕಾರಣ ಕಾಯುತ್ತಿದ್ದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಆದರೆ, ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಹತ್ತಿ ಧ್ವಜ ಬೀಸಿದರು. ವಿಶ್ವಕಪ್ ವಿಜೇತ ನಾಯಕನ ಹೆಸರನ್ನು ಜಪಿಸಿದರು. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳುತ್ತಿದ್ದು, ನಗರದಾದ್ಯಂತ ಸಂತಸದ ವಾತಾವರಣ ಉಂಟುಮಾಡಿದೆ.

“ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದಾರೆ ಎಂಬ ಸಂತೋಷದ ವಾತಾವರಣವಿದೆ” ಎಂದು ಪ್ರವಾಸ ಸಂಘಟಕ ಸತಾದ್ರು ದತ್ತಾ ಹೇಳಿದರು. “ಭಾರತದೊಂದಿಗೆ ಫುಟ್‌ಬಾಲ್ ಸಂಪರ್ಕ ಮತ್ತೆ ಬೆಳೆಯುತ್ತಿದೆ. ಭಾರತೀಯ ಫುಟ್‌ಬಾಲ್‌ಗೆ ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಬಂದಿಲ್ಲ” ಎಂದರು.

ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾದ ಅಭಿಮಾನಿಗಳು ಆಗಮನವನ್ನು ಅವಾಸ್ತವಿಕ ಎಂದು ಬಣ್ಣಿಸಿದರು. “ನಾವು ಎರಡು ಗಂಟೆಗಳಿಂದ ಕಾಯುತ್ತಿದ್ದೇವೆ. ಅಗತ್ಯವಿದ್ದರೆ, ನಾವು ನಾಲ್ಕು ಗಂಟೆಗಳಾದರೂ ಕಾಯುತ್ತೇವೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಈ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು” ಎಂದು ಅಭಿಮಾನಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು. ಮತ್ತೊಬ್ಬ ಅಭಿಮಾನಿ ಮೆಸ್ಸಿಯನ್ನು “ಜಾದೂಗಾರ” ಎಂದು ಕರೆದರು.

ಕೋಲ್ಕತ್ತಾದ ಬಳಿಕ ಫುಟ್ಬಾಲ್ ದಂತಕಥೆ ಮೆಸ್ಸಿ ಅವರು ಹೈದರಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಮೆಸ್ಸಿ ಅವರ ಕೋಲ್ಕತ್ತಾದ ವೇಳಾಪಟ್ಟಿ ಇಂದು ಬೆಳಿಗ್ಗೆ 9:30 ರಿಂದ 10:30 ರ ನಡುವೆ ಆಯ್ದ ಅತಿಥಿಗಳಿಗಾಗಿ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗುತ್ತದೆ. ನಂತರ ಅವರ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ.

ನಂತರ. ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಸ್ನೇಹಪರ ಪಂದ್ಯ ನಡೆಯಲಿದೆ. ಅಲ್ಲಿ ಮೆಸ್ಸಿ ಅವರು ಅಭಿಮಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ಬೇಗನೆ ಹೊರಟ ಮೆಸ್ಸಿ

ಲಿಯೋನೆಲ್ ಮೆಸ್ಸಿ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರು ಕೋಲ್ಕತ್ತಾ ತಲುಪಿದ್ದಾರೆ. ಅವರು ಸೌರವ್ ಗಂಗೂಲಿ ಮತ್ತು ಶಾರುಖ್ ಖಾನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳನ್ನು ಭೇಟಿಯಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿಯನ್ನು ಸನ್ಮಾನಿಸಲಿದ್ದಾರೆ.

ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಮೂರು ದಿನಗಳ ಭಾರತ ಭೇಟಿಗಾಗಿ ಕೋಲ್ಕತ್ತಾ ತಲುಪಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಬರಮಾಡಿಕೊಂಡರು. ಅಭಿಮಾನಿಗಳು ಹೋಟೆಲ್‌ವರೆಗೂ ಬಂದರು. ವಿಶ್ವಕಪ್ ವಿಜೇತ ರೊಡ್ರಿಗೋ ಡಿ ಪಾಲ್ ಮತ್ತು ಮೆಸ್ಸಿಯ ಇಂಟರ್ ಮಿಯಾಮಿ ತಂಡದ ಸಹ ಆಟಗಾರ ಲೂಯಿಸ್ ಸುವಾರೆಜ್ ಕೂಡ ಪ್ರವಾಸದ ಭಾಗವಾಗಿ ಭಾರತಕ್ಕೆ ಪ್ರಯಾಣಿಸಿದ ತಂಡದಲ್ಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಿಂದ ಲಿಯೋನೆಲ್ ಮೆಸ್ಸಿ ಬೇಗನೆ ಹೊರಟಿದ್ದರಿಂದ ಕೋಪಗೊಂಡ ಹಾಜರಿದ್ದ ಅಭಿಮಾನಿಗಳು ಆಸನಗಳನ್ನು ಮುರಿದರು ಎಂದು ಸಾಮಾಜಿಕ ಮಾಧ್ಯಮದಲ್ಲಿವೀಡಿಯೊ ವೈರಲ್ ಆಗಿದೆ. ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ನೀರಿ ಬಾಟಲಿಗಳನ್ನು ಎಸೆದಿದ್ದಾರೆ. ಜಿತೆಗೆ ದೊಡ್ಡ ಗದ್ದಲದ ಶಬ್ದಗಳು ಕೇಳಿಬಂದಿದೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳನ್ನು ಸ್ವಾಗತಿಸಿದ ಮೆಸ್ಸಿ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳನ್ನು ಸ್ವಾಗತಿಸಿದ ಲಿಯೋನೆಲ್ ಮೆಸ್ಸಿ. ಅವರು ಮೋಹನ್ ಬಗಾನ್ ಕಾರ್ಯದರ್ಶಿ ಶ್ರೀಂಜಯ್ ಬೋಸ್ ಅವರನ್ನು ಭೇಟಿ ಮಾಡಿ ತಮ್ಮ ಕೋಟ್‌ಗೆ ಸಹಿ ಹಾಕಿದರು. ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಕೂಡ ಈ ಕಾರ್ಯಕ್ರಮದ ಭಾಗವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...