Homeಮುಖಪುಟಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

- Advertisement -
- Advertisement -

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ ಮೂಲಕ ಮಿಯಾಮಿಯಿಂದ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ನೀಲಿ ಮತ್ತು ಬಿಳಿ ಜೆರ್ಸಿಗಳನ್ನು ತೊಟ್ಟ ಸಾವಿರಾರು ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ಮೆಸ್ಸಿ ಬರುವುದು ತಡವಾದ ಕಾರಣ ಕಾಯುತ್ತಿದ್ದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಆದರೆ, ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಹತ್ತಿ ಧ್ವಜ ಬೀಸಿದರು. ವಿಶ್ವಕಪ್ ವಿಜೇತ ನಾಯಕನ ಹೆಸರನ್ನು ಜಪಿಸಿದರು. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳುತ್ತಿದ್ದು, ನಗರದಾದ್ಯಂತ ಸಂತಸದ ವಾತಾವರಣ ಉಂಟುಮಾಡಿದೆ.

“ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದಾರೆ ಎಂಬ ಸಂತೋಷದ ವಾತಾವರಣವಿದೆ” ಎಂದು ಪ್ರವಾಸ ಸಂಘಟಕ ಸತಾದ್ರು ದತ್ತಾ ಹೇಳಿದರು. “ಭಾರತದೊಂದಿಗೆ ಫುಟ್‌ಬಾಲ್ ಸಂಪರ್ಕ ಮತ್ತೆ ಬೆಳೆಯುತ್ತಿದೆ. ಭಾರತೀಯ ಫುಟ್‌ಬಾಲ್‌ಗೆ ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಬಂದಿಲ್ಲ” ಎಂದರು.

ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾದ ಅಭಿಮಾನಿಗಳು ಆಗಮನವನ್ನು ಅವಾಸ್ತವಿಕ ಎಂದು ಬಣ್ಣಿಸಿದರು. “ನಾವು ಎರಡು ಗಂಟೆಗಳಿಂದ ಕಾಯುತ್ತಿದ್ದೇವೆ. ಅಗತ್ಯವಿದ್ದರೆ, ನಾವು ನಾಲ್ಕು ಗಂಟೆಗಳಾದರೂ ಕಾಯುತ್ತೇವೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಈ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು” ಎಂದು ಅಭಿಮಾನಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು. ಮತ್ತೊಬ್ಬ ಅಭಿಮಾನಿ ಮೆಸ್ಸಿಯನ್ನು “ಜಾದೂಗಾರ” ಎಂದು ಕರೆದರು.

ಕೋಲ್ಕತ್ತಾದ ಬಳಿಕ ಫುಟ್ಬಾಲ್ ದಂತಕಥೆ ಮೆಸ್ಸಿ ಅವರು ಹೈದರಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಮೆಸ್ಸಿ ಅವರ ಕೋಲ್ಕತ್ತಾದ ವೇಳಾಪಟ್ಟಿ ಇಂದು ಬೆಳಿಗ್ಗೆ 9:30 ರಿಂದ 10:30 ರ ನಡುವೆ ಆಯ್ದ ಅತಿಥಿಗಳಿಗಾಗಿ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗುತ್ತದೆ. ನಂತರ ಅವರ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ.

ನಂತರ. ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಸ್ನೇಹಪರ ಪಂದ್ಯ ನಡೆಯಲಿದೆ. ಅಲ್ಲಿ ಮೆಸ್ಸಿ ಅವರು ಅಭಿಮಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ಬೇಗನೆ ಹೊರಟ ಮೆಸ್ಸಿ

ಲಿಯೋನೆಲ್ ಮೆಸ್ಸಿ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರು ಕೋಲ್ಕತ್ತಾ ತಲುಪಿದ್ದಾರೆ. ಅವರು ಸೌರವ್ ಗಂಗೂಲಿ ಮತ್ತು ಶಾರುಖ್ ಖಾನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳನ್ನು ಭೇಟಿಯಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿಯನ್ನು ಸನ್ಮಾನಿಸಲಿದ್ದಾರೆ.

ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಮೂರು ದಿನಗಳ ಭಾರತ ಭೇಟಿಗಾಗಿ ಕೋಲ್ಕತ್ತಾ ತಲುಪಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಬರಮಾಡಿಕೊಂಡರು. ಅಭಿಮಾನಿಗಳು ಹೋಟೆಲ್‌ವರೆಗೂ ಬಂದರು. ವಿಶ್ವಕಪ್ ವಿಜೇತ ರೊಡ್ರಿಗೋ ಡಿ ಪಾಲ್ ಮತ್ತು ಮೆಸ್ಸಿಯ ಇಂಟರ್ ಮಿಯಾಮಿ ತಂಡದ ಸಹ ಆಟಗಾರ ಲೂಯಿಸ್ ಸುವಾರೆಜ್ ಕೂಡ ಪ್ರವಾಸದ ಭಾಗವಾಗಿ ಭಾರತಕ್ಕೆ ಪ್ರಯಾಣಿಸಿದ ತಂಡದಲ್ಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಿಂದ ಲಿಯೋನೆಲ್ ಮೆಸ್ಸಿ ಬೇಗನೆ ಹೊರಟಿದ್ದರಿಂದ ಕೋಪಗೊಂಡ ಹಾಜರಿದ್ದ ಅಭಿಮಾನಿಗಳು ಆಸನಗಳನ್ನು ಮುರಿದರು ಎಂದು ಸಾಮಾಜಿಕ ಮಾಧ್ಯಮದಲ್ಲಿವೀಡಿಯೊ ವೈರಲ್ ಆಗಿದೆ. ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ನೀರಿ ಬಾಟಲಿಗಳನ್ನು ಎಸೆದಿದ್ದಾರೆ. ಜಿತೆಗೆ ದೊಡ್ಡ ಗದ್ದಲದ ಶಬ್ದಗಳು ಕೇಳಿಬಂದಿದೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳನ್ನು ಸ್ವಾಗತಿಸಿದ ಮೆಸ್ಸಿ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳನ್ನು ಸ್ವಾಗತಿಸಿದ ಲಿಯೋನೆಲ್ ಮೆಸ್ಸಿ. ಅವರು ಮೋಹನ್ ಬಗಾನ್ ಕಾರ್ಯದರ್ಶಿ ಶ್ರೀಂಜಯ್ ಬೋಸ್ ಅವರನ್ನು ಭೇಟಿ ಮಾಡಿ ತಮ್ಮ ಕೋಟ್‌ಗೆ ಸಹಿ ಹಾಕಿದರು. ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಕೂಡ ಈ ಕಾರ್ಯಕ್ರಮದ ಭಾಗವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...