Homeಮುಖಪುಟ'ಅಕ್ಬರ್‌', 'ಸೀತಾ' ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ...

‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

- Advertisement -
- Advertisement -

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆ ನಡೆಸುತ್ತಿರುವ ಸಫಾರಿ ಪಾರ್ಕ್‌ನಲ್ಲಿ ಅಕ್ಬರ್‌ ಹಾಗೂ ಸೀತಾ ಎನ್ನುವ ಹೆಸರಿನ ಸಿಂಹದ ಜೋಡಿಯನ್ನು ಅರಣ್ಯ ಇಲಾಖೆ ಒಂದೇ ಸ್ಥಳದಲ್ಲಿ ಬಿಟ್ಟಿದ್ದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್‌ ಮೆಟ್ಟಿಲೇರಿರುವ ವಿಲಕ್ಷಣ ಘಟನೆ ನಡೆದಿದೆ.

ಸಿಲಿಗುರಿಯಲ್ಲಿರುವ ಬಂಗಾಳ ಸಫಾರಿ ಪಾರ್ಕ್‌ಗೆ ಫೆಬ್ರವರಿ 12ರಂದು ತ್ರಿಪುರಾದ ಸೆಪಹಿಜಲಾ ಝುವೊಲಾಜಿಕಲ್‌ ಪಾರ್ಕಿನಿಂದ ಎರಡು ಸಿಂಹಗಳನ್ನು ತರಲಾಗಿತ್ತು. ಅವುಗಳಲ್ಲಿ ಒಂದಕ್ಕೆ ʼಅಕ್ಬರ್‌ʼ ಎಂದು ಹೆಸರನ್ನಿಡಲಾಗಿದ್ದರೆ, ಇನ್ನೊಂದಕ್ಕೆ ಸೀತಾ ಎಂಬ ಹೆಸರನ್ನಿಡಲಾಗಿದೆ. ಈ 7 ವರ್ಷದ ʼಅಕ್ಬರ್‌ ಮತ್ತು 5 ವರ್ಷದ ಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಇರಿಸಿದ್ದಾರೆ. ಇದನ್ನು ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ ಕೋಲ್ಕತಾ ಹೈಕೋರ್ಟ್‌ ಮೊರೆ ಹೋಗಿದೆ. ಇದು ಹಿಂದೂ ಧರ್ಮಕ್ಕೆ ಅವಮಾನ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಕೋಲ್ಕತ್ತ ಉಚ್ಚ ನ್ಯಾಯಾಲಯದ ಜಲ್‌ ಪಾಯ್‌ಗುರಿ ಸರ್ಕ್ಯೂಟ್‌ ಪೀಠಕ್ಕೆ ವಿಶ್ವಹಿಂದೂ ಪರಿಷತ್‌ ಅರ್ಜಿಯನ್ನು ಸಲ್ಲಿಸಿದೆ. ಈ ಕುರಿತು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸುಗತಾ ಭಟ್ಟಾಚಾರ್ಯ ಅವರ ಪೀಠವು ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದ್ದಾರೆ.

 

ಪಶ್ಚಿಮ ಬಂಗಾಳದ ಅರಣ್ಯ ಇಲಾಖೆಯು ಹಲವಾರು ವರ್ಷಗಳಿಂದ ಪ್ರವಾಸಿ ತಾಣವಾದ ಸಿಲಿಗುರಿಯಲ್ಲಿ ವನ್ಯಜೀವಿಗಳ ಸಫಾರಿ ಪಾರ್ಕ್‌ ಹೊಂದಿದೆ. ಇಲ್ಲಿ ಆನೆ, ಸಿಂಹ, ಹುಲಿ ಸಹಿತ ಪ್ರಮುಖ ಪ್ರಾಣಿಗಳಿವೆ. ಇಲ್ಲಿಗೆ ನಿತ್ಯ ನೂರಾರು ಪ್ರವಾಸಿಗರು ಕೂಡ ಭೇಟಿ ನೀಡುತ್ತಾರೆ. ʼಅಕ್ಬರ್‌ʼ  ಮತ್ತುಸೀತಾ ಸಿಂಹದ ಜೋಡಿಯನ್ನು ಒಂದೇ ಕಡೆ ಅಧಿಕಾರಿಗಳು ಬಿಟ್ಟಿರುವುದನ್ನು ಗಮನಿಸಿದ ವಿಶ್ವ ಹಿಂದೂ ಪರಿಷತ್‌ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಿಂಹಗಳ ಹೆಸರನ್ನು ಬದಲಿಸಿ ಅಥವಾ ಸಿಂಹಗಳನ್ನು ಒಂದೇ ಕಡೆ ಇರುವುದನ್ನು ತಪ್ಪಿಸಿ ಎಂದು ಹೇಳಿದ್ದರು. ಆದರೆ ಈಗಾಗಲೇ ಸಿಂಹಗಳಿಗೆ ಹೆಸರು ಇಡಲಾಗಿದೆ. ಹೆಸರು ಬದಲಾಯಿಸಲು ಆಗುವುದಿಲ್ಲ. ಅವುಗಳನ್ನು ಸ್ಥಳಾಂತರಿಸುವ ವಿಷಯವೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದರು. ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ವಿಶ್ವ ಹಿಂದೂ ಪರಿಷತ್‌ ಮುಖಂಡರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಅಕ್ಬರ್‌ ಎನ್ನುವ ಸಿಂಹವನ್ನು ಸೀತಾ ಎನ್ನುವ ಸಿಂಹದ ಜತೆಗೆ ಇರಿಸುವುದು ಸರಿಯಲ್ಲ. ಈ ಮೂಲಕ ಹಿಂದೂ ಭಾವನೆಗಳನ್ನು ಕೆರಳಿಸಲಾಗಿದೆ. ಕೂಡಲೇ ಸಿಂಹದ ಹೆಸರು ಬದಲಿಸಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಪಶ್ವಿಮ ಬಂಗಾಳದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಲಿಗುರಿ ಸಫಾರಿ ಪಾರ್ಕ್‌ ನಿರ್ದೇಶಕರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಶ್ವಹಿಂದೂ ಪರಿಷತ್‌ ಮುಖಂಡ ದುಲಾಲ್‌ ಚಂದ್ರ ರೇ, ಅಕ್ಬರ್‌ ಹೆಸರಿನ ಸಿಂಹದ ಜೋಡಿಯಾಗಿರುವ ಹೆಣ್ಣು ಸಿಂಹಕ್ಕೆ ಸೀತಾ ಹೆಸರಿಟ್ಟಿದ್ದು ಹಿಂದೂ ಧರ್ಮದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...