Homeಮುಖಪುಟಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ - ವರದಿ

ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

- Advertisement -
- Advertisement -

ಮಹಿಳೆಯರ ಬೇಡಿಕೆಯ ಮೇರೆಗೆ ರಾಜ್ಯದಲ್ಲಿ ಹೇರಿದ್ದ ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲು ಬಿಹಾರ ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ. ಮದ್ಯ ನಿಷೇಧದಿಂದ ತಮಗೆ ಲಾಭಕ್ಕಿಂತ ಹೆಚ್ಚು ಹಾನಿಯಾಗುತ್ತಿದೆ ಎಂಬ ವರದಿಗಳನ್ನು ಪರಿಗಣಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 15 ರಿಂದ ನಿತೀಶ್ ಕುಮಾರ್ ನಡೆಸಲು ಉದ್ದೇಶಿಸಿರುವ ಮೆರವಣಿಗೆಯಲ್ಲಿ ಮಹಿಳೆಯರು ಈ ಆಗ್ರಹವನ್ನು ಇಡಲು ಸಜ್ಜಾಗಿದ್ದಾರೆ. ಜೆಡಿಯುನ ಪ್ರಮುಖ ಮತದಾರರೆಂದು ಪರಿಗಣಿಸಲ್ಪಟ್ಟಿರುವ ಮಹಿಳೆಯರು ಈಗಾಗಲೇ ನಿಷೇಧ ಕಾನೂನಿನ ಕಳಪೆ ಅನುಷ್ಠಾನ ಮತ್ತು ರಾಜ್ಯಾದ್ಯಂತ ಕಳ್ಳಭಟ್ಟಿ ವ್ಯಾಪಾರ ಪ್ರವರ್ಧಮಾನಕ್ಕೆ ಬರುತ್ತಿರುವ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಡಿಯು ಯಾತ್ರೆ ವೇಳೆ ಸಿಎಂ ಅವರ ಮುಂದೆ ನಮ್ಮ ಬೇಡಿಕೆ ಇಡುತ್ತೇವೆ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಥವಾ ಅದನ್ನು ರದ್ದುಗೊಳಿಸಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ ಎಂದು ವೈಶಾಲಿಯ ರಾಘೋಪುರ ಫತೇಪುರ್ ನಿವಾಸಿ ತೆಟಾರಿಯಾ ದೇವಿ ಹೇಳಿದ್ದಾರೆ. ಪ್ರಾಸಂಗಿಕವಾಗಿ ರಾಘೋಪುರವು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.

ಏಪ್ರಿಲ್ 2016 ರಲ್ಲಿ ನಿತೀಶ್ ಅವರು ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧವನ್ನು ಹೇರಿದ್ದರು. ಅವರ ಈ ನೀತಿಗೆ ಸ್ವಾಗತ ಮತ್ತು ಟೀಕೆಗಳು ಸಮಾನವಾಗಿ ವ್ಯಕ್ತವಾಗಿತ್ತು. ಈ ವೇಳೆ ನಿತೀಶ್ ಅವರು ಆರ್‌ಜೆಡಿ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದರು. ಆದರೂ, ಆರ್‌ಜೆಡಿ ನಿತೀಶ್ ಅವರ ಈ ಕ್ರಮದ ವಿರುದ್ಧ ಬಹಿರಂಗವಾಗಿ ಟೀಕೆ ವ್ಯಕ್ತಪಡಿಸಿತ್ತು.

ವಿಶೇಷವಾಗಿ ರಾಜ್ಯಕ್ಕೆ ಭಾರಿ ಪ್ರಮಾಣದ ಕಳ್ಳಸಾಗಣೆ ಮತ್ತು ಕಾನೂನಿನ ಕಳಪೆ ಜಾರಿಯಿಂದಾಗಿ ನಡೆಯುವ ದುರಂತಗಳ ಬಗ್ಗೆ ಮತ್ತು ಕಡಿಮೆ ಬೆಲೆಯಲ್ಲಿ ಸಿಗುವ ನಕಲಿ ಮದ್ಯದ ಸೇವನೆಯಿಂದ ಉಂಟಾಗುವ ಸಾವುನೋವುಗಳ ಬಗ್ಗೆ ಆರ್‌ಜೆಡಿ ಆತಂಕ ವ್ಯಕ್ತಪಡಿಸಿತ್ತು.

ಕೇಂದ್ರ ಸಚಿವ ಮತ್ತು HAM ಸಂಸ್ಥಾಪಕ ಜಿತನ್ ರಾಮ್ ಮಾಂಝಿ ನಿಷೇಧ ಕಾನೂನನ್ನು ತಿರುಚುವ ಮೂಲಕ ಸಣ್ಣ ಪ್ರಮಾಣದಲ್ಲಿ ಮದ್ಯ ಸೇವನೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಮಾಜಿ ಚುನಾವಣಾ ತಂತ್ರಜ್ಞ ಮತ್ತು ಹೊಸದಾಗಿ ರಚಿಸಲಾದ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದರೆ ಒಂದು ಗಂಟೆಯೊಳಗೆ ನಿಷೇಧ ಕಾನೂನನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಪ್ರಸ್ತುತ ಬಿಹಾರ ಮದ್ಯ ನಿಷೇಧದಿಂದ ಪ್ರತಿ ವರ್ಷ 20,000 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿದೆ. ಬಿಹಾರವು ವಿಶ್ವ ದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಸಾಧಿಸಲು, ಮುಂದಿನ 10 ವರ್ಷಗಳಲ್ಲಿ ₹ 5 ಲಕ್ಷ ಕೋಟಿ ಹೂಡಿಕೆ ಅಗತ್ಯವಿದೆ. ಮದ್ಯಪಾನ ನಿಷೇಧವನ್ನು ತೆಗೆದುಹಾಕಿದ ಕೂಡಲೆ, ಅದರಿಂದ ಬರುವ ಹಣವನ್ನು ಹೊಸ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸಲು ಮಾತ್ರ ಮೀಸಲಿಡಲಾಗುವುದು ಎಂದು ಕಿಶೋರ್ ಇತ್ತೀಚೆಗೆ ಹೇಳಿದ್ದರು.

ಪಾಟ್ನಾ ಹೈಕೋರ್ಟ್ ಕೂಡಾ ಮದ್ಯ ನಿಷೇಧ ಕಾನೂನನ್ನು ಇತ್ತೀಚೆಗೆ ಟೀಕಿಸಿದೆ. ಈ ಕಾನೂನು ಸರ್ಕಾರಿ ಅಧಿಕಾರಿಗಳಿಗೆ ಹಣ ಗಳಿಸುವ ಮತ್ತು ಅನಧಿಕೃತ ವ್ಯಾಪಾರವನ್ನು ಉತ್ತೇಜಿಸುವ ಸಾಧನವಾಗಿದೆ ಎಂದು ಕರೆದಿತ್ತು. ನಿಷೇಧ ಕಾನೂನನ್ನು ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ನ ಪದಚ್ಯುತಿಯನ್ನು ರದ್ದುಗೊಳಿಸುವ ಹೈಕೋರ್ಟ್ ತೀವ್ರ ಟೀಕೆಗ ಮಾಡಿತ್ತು.

ಇದನ್ನೂ ಓದಿ: ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...