Homeಮುಖಪುಟ‘ಮದ್ಯ ನಿಷೇಧ ಎಂದರೆ ಅಧಿಕಾರಿಗಳಿಗೆ ಭಾರಿ ಹಣ ಎಂದರ್ಥ’ | ಪಾಟ್ನಾ ಹೈಕೋರ್ಟ್

‘ಮದ್ಯ ನಿಷೇಧ ಎಂದರೆ ಅಧಿಕಾರಿಗಳಿಗೆ ಭಾರಿ ಹಣ ಎಂದರ್ಥ’ | ಪಾಟ್ನಾ ಹೈಕೋರ್ಟ್

- Advertisement -
- Advertisement -

ಬಿಹಾರ ಸರ್ಕಾರದ ನಿಷೇಧ ಕಾನೂನಿನ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿರುವ ಪಾಟ್ನಾ ಹೈಕೋರ್ಟ್, ಈ ಕಾಯಿದೆಯು “ಮದ್ಯ ಮತ್ತು ಇತರ ನಿಷಿದ್ಧ ವಸ್ತುಗಳ ಅನಧಿಕೃತ ವ್ಯಾಪಾರಕ್ಕೆ ಕಾರಣವಾಗಿದೆ” ಮತ್ತು ಸರ್ಕಾರಿ ಅಧಿಕಾರಿಗಳಿಗೆ “ಭಾರಿ ಹಣ” ಮಾಡುವ ಸಾಧನವಾಗಿದೆ ಎಂದು ಹೇಳಿದೆ. “ಸರ್ಕಾರದ ಕಠಿಣವಾದ ನಿಬಂಧನೆಗಳು ಕಳ್ಳಸಾಗಣೆದಾರರೊಂದಿಗೆ ಕೈಜೋಡಿಸುವ ಪೊಲೀಸರಿಗೆ ಸೂಕ್ತವಾಗಿವೆ” ಎಂದು ಅಕ್ಟೋಬರ್ 19 ರಂದು ಪಾಟ್ನಾ ಹೈಕೋರ್ಟ್ ತನ್ನ ಕಟು ತೀರ್ಪಿನಲ್ಲಿ ಹೇಳಿದೆ. ನ್ಯಾಯಮೂರ್ತಿ ಪೂರ್ಣೇಂದು ಸಿಂಗ್ ಅವರ 24 ಪುಟಗಳ ಆದೇಶವನ್ನು ನವೆಂಬರ್ 13 ರಂದು ಅಪ್ಲೋಡ್ ಮಾಡಲಾಗಿದೆ. ಮದ್ಯ ನಿಷೇಧ ಎಂದರೆ

“ಕಾನೂನು ಜಾರಿಗೊಳಿಸುವ ಸಂಸ್ಥೆಗಳನ್ನು ವಂಚಿಸಿ ಹೊಸ ಮಾದರಿಯಲ್ಲಿ ನಿಷಿದ್ಧ ವಸ್ತುಗಳನ್ನು ಸಾಗಿಸಲು ಮತ್ತು ತಲುಪಿಸಲು ಯೋಜನೆಗಳು ತಯಾರಾಗಿವೆ. ಪೊಲೀಸ್ ಅಧಿಕಾರಿಗಳು (ಮತ್ತು) ಅಬಕಾರಿ ಅಧಿಕಾರಿಗಳು ಮಾತ್ರವಲ್ಲದೆ, ರಾಜ್ಯ ತೆರಿಗೆ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡ ಮದ್ಯ ನಿಷೇಧವನ್ನು ಇಷ್ಟಪಡುತ್ತಾರೆ. ಅವರಿಗೆ ಇದು ಭಾರಿ ಹಣ ಮಾಡುವ ದಾರಿ ಎಂದರ್ಥ” ಎಂದು ಪೀಠವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಮದ್ಯದ ದಾಸ್ತಾನು ಪತ್ತೆಯಾದ ನಂತರ 2020ರ ನವೆಂಬರ್‌ನಲ್ಲಿ ಪಾಟ್ನಾದ ಬೈಪಾಸ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಅಮಾನತುಗೊಂಡ ಖಗಾರಿಯಾ ನಿವಾಸಿ ಮುಖೇಶ್ ಕುಮಾರ್ ಪಾಸ್ವಾನ್ ಅವರ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಅವಲೋಕನಗಳನ್ನು ಮಾಡಿದೆ.

ಪಾಸ್ವಾನ್ ವಿರುದ್ಧದ ಅಮಾನತು ಆದೇಶವನ್ನು “ನೈಸರ್ಗಿಕ ನ್ಯಾಯದ ಉಲ್ಲಂಘನೆ” ಎಂದು ಪಾಟ್ನಾ ಹೈಕೋರ್ಟ್ ಕರೆದಿದ್ದು, ಅಮಾನತು ಆದೇಶವನ್ನು ರದ್ದುಗೊಳಿಸಿದೆ. ಅದೇ ಸಮಯದಲ್ಲಿ, ಬಿಹಾರ ನಿಷೇಧ ಮತ್ತು ಅಬಕಾರಿ ಕಾಯ್ದೆ – 2016ರ ಮೂಲಕ ರಾಜ್ಯದಲ್ಲಿ ಮದ್ಯ ನಿಷೇಧವನ್ನು ನಿಯಂತ್ರಿಸುವ ಕಾನೂನನ್ನು ಸರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಪೀಠ ಹೇಳಿದೆ.

“ಭಾರತದ ಸಂವಿಧಾನದ 47 ನೇ ವಿಧಿಯು ಜೀವನ ಮಟ್ಟವನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿ ಕಡ್ಡಾಯಗೊಳಿಸಿದೆ. ಹಾಗಾಗಿ, ರಾಜ್ಯ ಸರ್ಕಾರವು ‘ಬಿಹಾರ ನಿಷೇಧ ಮತ್ತು ಅಬಕಾರಿ ಕಾಯಿದೆ 2016’ ಕಾಯಿದೆಯನ್ನು ಜಾರಿಗೆ ತಂದಿದೆ ಎಂದು ಇಲ್ಲಿ ದಾಖಲಿಸುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಆದರೆ ಹಲವಾರು ಕಾರಣಗಳಿಗಾಗಿ, ಇದು ಇತಿಹಾಸ ಇದನ್ನು ತಪ್ಪಾಗಿ ದಾಖಲಿಸುತ್ತದೆ” ಎಂದು ಪೀಠವು ಹೇಳಿದೆ.

“ಮದ್ಯ ಸೇವಿಸುವ ಬಡವರು ಮತ್ತು ಬಡವರ ವಿರುದ್ಧ ದಾಖಲಾದ ಪ್ರಕರಣಗಳ ಪ್ರಮಾಣ ಹಾಗೂ ನಕಲಿ ಮದ್ಯ ಸೇವಿಸಿ ಬಲಿಯಾದ ದುರಂತ ಪ್ರಕರಣಗಳ ಪ್ರಮಾಣಕ್ಕೆ ಹೋಲಿಸಿದರೆ, ಮದ್ಯ ನಿಷೇಧ ಉಲ್ಲಂಘಿಸಿದ ಪ್ರಕರಣಗಳಲ್ಲಿ ಅದರ ಕಿಂಗ್‌ಪಿನ್‌ಗಳು ಮತ್ತು ಅದರ ಗುಂಪುಗಳ ವಿರುದ್ಧ ಕಡಿಮೆ ಪ್ರಕರಣಗಳು ದಾಖಲಾಗಿವೆ” ಎಂದು ಪೀಠವು ಹೇಳಿದೆ. ಮದ್ಯ ನಿಷೇಧ ಎಂದರೆ

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...