Homeಮುಖಪುಟ‘ಮದ್ಯ ನಿಷೇಧ ಎಂದರೆ ಅಧಿಕಾರಿಗಳಿಗೆ ಭಾರಿ ಹಣ ಎಂದರ್ಥ’ | ಪಾಟ್ನಾ ಹೈಕೋರ್ಟ್

‘ಮದ್ಯ ನಿಷೇಧ ಎಂದರೆ ಅಧಿಕಾರಿಗಳಿಗೆ ಭಾರಿ ಹಣ ಎಂದರ್ಥ’ | ಪಾಟ್ನಾ ಹೈಕೋರ್ಟ್

- Advertisement -
- Advertisement -

ಬಿಹಾರ ಸರ್ಕಾರದ ನಿಷೇಧ ಕಾನೂನಿನ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿರುವ ಪಾಟ್ನಾ ಹೈಕೋರ್ಟ್, ಈ ಕಾಯಿದೆಯು “ಮದ್ಯ ಮತ್ತು ಇತರ ನಿಷಿದ್ಧ ವಸ್ತುಗಳ ಅನಧಿಕೃತ ವ್ಯಾಪಾರಕ್ಕೆ ಕಾರಣವಾಗಿದೆ” ಮತ್ತು ಸರ್ಕಾರಿ ಅಧಿಕಾರಿಗಳಿಗೆ “ಭಾರಿ ಹಣ” ಮಾಡುವ ಸಾಧನವಾಗಿದೆ ಎಂದು ಹೇಳಿದೆ. “ಸರ್ಕಾರದ ಕಠಿಣವಾದ ನಿಬಂಧನೆಗಳು ಕಳ್ಳಸಾಗಣೆದಾರರೊಂದಿಗೆ ಕೈಜೋಡಿಸುವ ಪೊಲೀಸರಿಗೆ ಸೂಕ್ತವಾಗಿವೆ” ಎಂದು ಅಕ್ಟೋಬರ್ 19 ರಂದು ಪಾಟ್ನಾ ಹೈಕೋರ್ಟ್ ತನ್ನ ಕಟು ತೀರ್ಪಿನಲ್ಲಿ ಹೇಳಿದೆ. ನ್ಯಾಯಮೂರ್ತಿ ಪೂರ್ಣೇಂದು ಸಿಂಗ್ ಅವರ 24 ಪುಟಗಳ ಆದೇಶವನ್ನು ನವೆಂಬರ್ 13 ರಂದು ಅಪ್ಲೋಡ್ ಮಾಡಲಾಗಿದೆ. ಮದ್ಯ ನಿಷೇಧ ಎಂದರೆ

“ಕಾನೂನು ಜಾರಿಗೊಳಿಸುವ ಸಂಸ್ಥೆಗಳನ್ನು ವಂಚಿಸಿ ಹೊಸ ಮಾದರಿಯಲ್ಲಿ ನಿಷಿದ್ಧ ವಸ್ತುಗಳನ್ನು ಸಾಗಿಸಲು ಮತ್ತು ತಲುಪಿಸಲು ಯೋಜನೆಗಳು ತಯಾರಾಗಿವೆ. ಪೊಲೀಸ್ ಅಧಿಕಾರಿಗಳು (ಮತ್ತು) ಅಬಕಾರಿ ಅಧಿಕಾರಿಗಳು ಮಾತ್ರವಲ್ಲದೆ, ರಾಜ್ಯ ತೆರಿಗೆ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡ ಮದ್ಯ ನಿಷೇಧವನ್ನು ಇಷ್ಟಪಡುತ್ತಾರೆ. ಅವರಿಗೆ ಇದು ಭಾರಿ ಹಣ ಮಾಡುವ ದಾರಿ ಎಂದರ್ಥ” ಎಂದು ಪೀಠವು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯ ಅಬಕಾರಿ ಇಲಾಖೆ ನಡೆಸಿದ ದಾಳಿಯಲ್ಲಿ ಮದ್ಯದ ದಾಸ್ತಾನು ಪತ್ತೆಯಾದ ನಂತರ 2020ರ ನವೆಂಬರ್‌ನಲ್ಲಿ ಪಾಟ್ನಾದ ಬೈಪಾಸ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಅಮಾನತುಗೊಂಡ ಖಗಾರಿಯಾ ನಿವಾಸಿ ಮುಖೇಶ್ ಕುಮಾರ್ ಪಾಸ್ವಾನ್ ಅವರ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಅವಲೋಕನಗಳನ್ನು ಮಾಡಿದೆ.

ಪಾಸ್ವಾನ್ ವಿರುದ್ಧದ ಅಮಾನತು ಆದೇಶವನ್ನು “ನೈಸರ್ಗಿಕ ನ್ಯಾಯದ ಉಲ್ಲಂಘನೆ” ಎಂದು ಪಾಟ್ನಾ ಹೈಕೋರ್ಟ್ ಕರೆದಿದ್ದು, ಅಮಾನತು ಆದೇಶವನ್ನು ರದ್ದುಗೊಳಿಸಿದೆ. ಅದೇ ಸಮಯದಲ್ಲಿ, ಬಿಹಾರ ನಿಷೇಧ ಮತ್ತು ಅಬಕಾರಿ ಕಾಯ್ದೆ – 2016ರ ಮೂಲಕ ರಾಜ್ಯದಲ್ಲಿ ಮದ್ಯ ನಿಷೇಧವನ್ನು ನಿಯಂತ್ರಿಸುವ ಕಾನೂನನ್ನು ಸರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಪೀಠ ಹೇಳಿದೆ.

“ಭಾರತದ ಸಂವಿಧಾನದ 47 ನೇ ವಿಧಿಯು ಜೀವನ ಮಟ್ಟವನ್ನು ಹೆಚ್ಚಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ಸರ್ಕಾರದ ಕರ್ತವ್ಯವಾಗಿ ಕಡ್ಡಾಯಗೊಳಿಸಿದೆ. ಹಾಗಾಗಿ, ರಾಜ್ಯ ಸರ್ಕಾರವು ‘ಬಿಹಾರ ನಿಷೇಧ ಮತ್ತು ಅಬಕಾರಿ ಕಾಯಿದೆ 2016’ ಕಾಯಿದೆಯನ್ನು ಜಾರಿಗೆ ತಂದಿದೆ ಎಂದು ಇಲ್ಲಿ ದಾಖಲಿಸುವುದು ಸೂಕ್ತವೆಂದು ನಾನು ಭಾವಿಸುತ್ತೇನೆ. ಆದರೆ ಹಲವಾರು ಕಾರಣಗಳಿಗಾಗಿ, ಇದು ಇತಿಹಾಸ ಇದನ್ನು ತಪ್ಪಾಗಿ ದಾಖಲಿಸುತ್ತದೆ” ಎಂದು ಪೀಠವು ಹೇಳಿದೆ.

“ಮದ್ಯ ಸೇವಿಸುವ ಬಡವರು ಮತ್ತು ಬಡವರ ವಿರುದ್ಧ ದಾಖಲಾದ ಪ್ರಕರಣಗಳ ಪ್ರಮಾಣ ಹಾಗೂ ನಕಲಿ ಮದ್ಯ ಸೇವಿಸಿ ಬಲಿಯಾದ ದುರಂತ ಪ್ರಕರಣಗಳ ಪ್ರಮಾಣಕ್ಕೆ ಹೋಲಿಸಿದರೆ, ಮದ್ಯ ನಿಷೇಧ ಉಲ್ಲಂಘಿಸಿದ ಪ್ರಕರಣಗಳಲ್ಲಿ ಅದರ ಕಿಂಗ್‌ಪಿನ್‌ಗಳು ಮತ್ತು ಅದರ ಗುಂಪುಗಳ ವಿರುದ್ಧ ಕಡಿಮೆ ಪ್ರಕರಣಗಳು ದಾಖಲಾಗಿವೆ” ಎಂದು ಪೀಠವು ಹೇಳಿದೆ. ಮದ್ಯ ನಿಷೇಧ ಎಂದರೆ

ಇದನ್ನೂ ಓದಿ: ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ಗ್ರೇಟರ್ ಹೈದರಾಬಾದ್‌ನ ಟ್ರಾಫಿಕ್ ಸ್ವಯಂಸೇವಕರಾಗಿ ಟ್ರಾನ್ಸ್‌ಜೆಂಡರ್‌ಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...