Homeಮುಖಪುಟಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳನ್ನು ಒಳಗೊಂಡ 10 ಚದರ ಕಿಲೋಮೀಟರ್ ವ್ಯಾಪ್ತಿಯನ್ನು ‘ಪವಿತ್ರ ತೀರ್ಥಯಾತ್ರೆಯ ಸ್ಥಳ’ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸಾಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆಗಸ್ಟ್ 30 ರಂದು ಕೃಷ್ಣ ಜನ್ಮಾಷ್ಟಮಿಯ ದಿನ ಸಿಎಂ ಆದಿತ್ಯನಾಥ್‌, ತಮ್ಮ ಸರ್ಕಾರವು ಮಥುರಾದ ಸಂತರು ಮತ್ತು ಜನರ ಜನಪ್ರಿಯ ಬೇಡಿಕೆಯನ್ನು ಪರಿಗಣಿಸಿ ಕೃಷ್ಣ ಜನ್ಮಭೂಮಿ ಪ್ರದೇಶ ಮತ್ತು ಸುತ್ತಮುತ್ತ ಮದ್ಯ ಮತ್ತು ಮಾಂಸಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಿಎಂ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಜಿಲ್ಲಾಡಳಿತಕ್ಕೆ ಕೂಡಾ ಮಥುರಾದ ಏಳು ಹಿಂದೂ ತೀರ್ಥಕ್ಷೇತ್ರಗಳ ಸುತ್ತಮುತ್ತ ಮಾಂಸ ಮತ್ತು ಮದ್ಯವನ್ನು ನಿಷೇಧಿಸುವ ಹಾಗೆ ಕೆಲಸ ಮಾಡುವಂತೆ ಸಿಎಂ ಕೇಳಿಕೊಂಡಿದ್ದರು. ಈ ತೀರ್ಥಕ್ಷೇತ್ರಗಳ ಬಳಿ ಮದ್ಯ ಮತ್ತು ಮಾಂಸದ ವ್ಯಾಪಾರದಲ್ಲಿ ತೊಡಗಿರುವವರನ್ನು ಸ್ಥಳಾಂತರಿಸುವ ಮತ್ತು ಪುನರ್ವಸತಿ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು.

“ಜನ್ಮಾಷ್ಟಮಿಯ ದಿನದಂದು ಮುಖ್ಯಮಂತ್ರಿ ಮಾಡಿದ ಘೋಷಣೆಗೆ ಅನುಸಾರವಾಗಿ, ಶ್ರೀ ಕೃಷ್ಣ ಜನ್ಮಭೂಮಿಯ ಸುತ್ತಲಿನ 22 ವಾರ್ಡ್‌ಗಳನ್ನು ಒಳಗೊಂಡ ಪ್ರದೇಶಗಳನ್ನು ತೀರ್ಥ ಯಾತ್ರಾಸ್ಥಳವೆಂದು ಘೋಷಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಪರಿಣಾಮವಾಗಿ, ಈ ಅಧಿಸೂಚಿತ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸ ವ್ಯಾಪಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ” ಎಂದು ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಚಾಹಲ್ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ವಿರುದ್ದ ಸ್ಪರ್ಧಿಸಲಿರುವ ಮಾಜಿ ಐಪಿಎಸ್‌ ಅಮಿತಾಬ್‌ ಠಾಕೂರ್‌‌

ಈ ಪ್ರದೇಶಗಳಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಧಾರ್ಮಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ, “ಮಥುರಾ-ವೃಂದಾವನವು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಆದ್ದರಿಂದ ಇದನ್ನು ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ಭಾರತ ಮತ್ತು ವಿದೇಶಗಳಿಂದ ಲಕ್ಷಾಂತರ ಯಾತ್ರಿಕರು ಇಲ್ಲಿ ಭೇಟಿ ಮಾಡುತ್ತಾರೆ. ಮಥುರಾ-ವೃಂದಾವನ ಐತಿಹಾಸಿಕವಾಗಿ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದಲೂ ಮಹತ್ವದ್ದಾಗಿದೆ” ಎಂದು ಹೇಳಲಾಗಿದೆ.

ಮಥುರಾ-ವೃಂದಾವನ ಪ್ರದೇಶದಲ್ಲಿ ಸುಮಾರು 10 ಚದರ ಕಿಮೀ ಪ್ರದೇಶವನ್ನು ತೀರ್ಥಕ್ಷೇತ್ರವೆಂದು ಘೋಷಿಸಲಾಗಿದೆ ಎಂದು ಧಾರ್ಮಿಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾಗಿ TNIE ವರದಿ ಮಾಡಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...