Homeಮುಖಪುಟಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳನ್ನು ಒಳಗೊಂಡ 10 ಚದರ ಕಿಲೋಮೀಟರ್ ವ್ಯಾಪ್ತಿಯನ್ನು ‘ಪವಿತ್ರ ತೀರ್ಥಯಾತ್ರೆಯ ಸ್ಥಳ’ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸಾಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆಗಸ್ಟ್ 30 ರಂದು ಕೃಷ್ಣ ಜನ್ಮಾಷ್ಟಮಿಯ ದಿನ ಸಿಎಂ ಆದಿತ್ಯನಾಥ್‌, ತಮ್ಮ ಸರ್ಕಾರವು ಮಥುರಾದ ಸಂತರು ಮತ್ತು ಜನರ ಜನಪ್ರಿಯ ಬೇಡಿಕೆಯನ್ನು ಪರಿಗಣಿಸಿ ಕೃಷ್ಣ ಜನ್ಮಭೂಮಿ ಪ್ರದೇಶ ಮತ್ತು ಸುತ್ತಮುತ್ತ ಮದ್ಯ ಮತ್ತು ಮಾಂಸಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಿಎಂ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಜಿಲ್ಲಾಡಳಿತಕ್ಕೆ ಕೂಡಾ ಮಥುರಾದ ಏಳು ಹಿಂದೂ ತೀರ್ಥಕ್ಷೇತ್ರಗಳ ಸುತ್ತಮುತ್ತ ಮಾಂಸ ಮತ್ತು ಮದ್ಯವನ್ನು ನಿಷೇಧಿಸುವ ಹಾಗೆ ಕೆಲಸ ಮಾಡುವಂತೆ ಸಿಎಂ ಕೇಳಿಕೊಂಡಿದ್ದರು. ಈ ತೀರ್ಥಕ್ಷೇತ್ರಗಳ ಬಳಿ ಮದ್ಯ ಮತ್ತು ಮಾಂಸದ ವ್ಯಾಪಾರದಲ್ಲಿ ತೊಡಗಿರುವವರನ್ನು ಸ್ಥಳಾಂತರಿಸುವ ಮತ್ತು ಪುನರ್ವಸತಿ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು.

“ಜನ್ಮಾಷ್ಟಮಿಯ ದಿನದಂದು ಮುಖ್ಯಮಂತ್ರಿ ಮಾಡಿದ ಘೋಷಣೆಗೆ ಅನುಸಾರವಾಗಿ, ಶ್ರೀ ಕೃಷ್ಣ ಜನ್ಮಭೂಮಿಯ ಸುತ್ತಲಿನ 22 ವಾರ್ಡ್‌ಗಳನ್ನು ಒಳಗೊಂಡ ಪ್ರದೇಶಗಳನ್ನು ತೀರ್ಥ ಯಾತ್ರಾಸ್ಥಳವೆಂದು ಘೋಷಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಪರಿಣಾಮವಾಗಿ, ಈ ಅಧಿಸೂಚಿತ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸ ವ್ಯಾಪಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ” ಎಂದು ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಚಾಹಲ್ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ವಿರುದ್ದ ಸ್ಪರ್ಧಿಸಲಿರುವ ಮಾಜಿ ಐಪಿಎಸ್‌ ಅಮಿತಾಬ್‌ ಠಾಕೂರ್‌‌

ಈ ಪ್ರದೇಶಗಳಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಧಾರ್ಮಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ, “ಮಥುರಾ-ವೃಂದಾವನವು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಆದ್ದರಿಂದ ಇದನ್ನು ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ಭಾರತ ಮತ್ತು ವಿದೇಶಗಳಿಂದ ಲಕ್ಷಾಂತರ ಯಾತ್ರಿಕರು ಇಲ್ಲಿ ಭೇಟಿ ಮಾಡುತ್ತಾರೆ. ಮಥುರಾ-ವೃಂದಾವನ ಐತಿಹಾಸಿಕವಾಗಿ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದಲೂ ಮಹತ್ವದ್ದಾಗಿದೆ” ಎಂದು ಹೇಳಲಾಗಿದೆ.

ಮಥುರಾ-ವೃಂದಾವನ ಪ್ರದೇಶದಲ್ಲಿ ಸುಮಾರು 10 ಚದರ ಕಿಮೀ ಪ್ರದೇಶವನ್ನು ತೀರ್ಥಕ್ಷೇತ್ರವೆಂದು ಘೋಷಿಸಲಾಗಿದೆ ಎಂದು ಧಾರ್ಮಿಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾಗಿ TNIE ವರದಿ ಮಾಡಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...