Homeಮುಖಪುಟಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳನ್ನು ಒಳಗೊಂಡ 10 ಚದರ ಕಿಲೋಮೀಟರ್ ವ್ಯಾಪ್ತಿಯನ್ನು ‘ಪವಿತ್ರ ತೀರ್ಥಯಾತ್ರೆಯ ಸ್ಥಳ’ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸಾಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆಗಸ್ಟ್ 30 ರಂದು ಕೃಷ್ಣ ಜನ್ಮಾಷ್ಟಮಿಯ ದಿನ ಸಿಎಂ ಆದಿತ್ಯನಾಥ್‌, ತಮ್ಮ ಸರ್ಕಾರವು ಮಥುರಾದ ಸಂತರು ಮತ್ತು ಜನರ ಜನಪ್ರಿಯ ಬೇಡಿಕೆಯನ್ನು ಪರಿಗಣಿಸಿ ಕೃಷ್ಣ ಜನ್ಮಭೂಮಿ ಪ್ರದೇಶ ಮತ್ತು ಸುತ್ತಮುತ್ತ ಮದ್ಯ ಮತ್ತು ಮಾಂಸಹಾರಿ ಆಹಾರ ಮಾರಾಟ ಮಾಡುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಸಿಎಂ ಆದಿತ್ಯನಾಥ್‌ರನ್ನು ಬಿಜೆಪಿ ನಾಯಕರು ಅತಿಯಾಗಿ ಪ್ರಶಂಸಿಸುತ್ತಿರುವುದಕ್ಕೆ ಕಾರಣ ಇದು

ಜಿಲ್ಲಾಡಳಿತಕ್ಕೆ ಕೂಡಾ ಮಥುರಾದ ಏಳು ಹಿಂದೂ ತೀರ್ಥಕ್ಷೇತ್ರಗಳ ಸುತ್ತಮುತ್ತ ಮಾಂಸ ಮತ್ತು ಮದ್ಯವನ್ನು ನಿಷೇಧಿಸುವ ಹಾಗೆ ಕೆಲಸ ಮಾಡುವಂತೆ ಸಿಎಂ ಕೇಳಿಕೊಂಡಿದ್ದರು. ಈ ತೀರ್ಥಕ್ಷೇತ್ರಗಳ ಬಳಿ ಮದ್ಯ ಮತ್ತು ಮಾಂಸದ ವ್ಯಾಪಾರದಲ್ಲಿ ತೊಡಗಿರುವವರನ್ನು ಸ್ಥಳಾಂತರಿಸುವ ಮತ್ತು ಪುನರ್ವಸತಿ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು.

“ಜನ್ಮಾಷ್ಟಮಿಯ ದಿನದಂದು ಮುಖ್ಯಮಂತ್ರಿ ಮಾಡಿದ ಘೋಷಣೆಗೆ ಅನುಸಾರವಾಗಿ, ಶ್ರೀ ಕೃಷ್ಣ ಜನ್ಮಭೂಮಿಯ ಸುತ್ತಲಿನ 22 ವಾರ್ಡ್‌ಗಳನ್ನು ಒಳಗೊಂಡ ಪ್ರದೇಶಗಳನ್ನು ತೀರ್ಥ ಯಾತ್ರಾಸ್ಥಳವೆಂದು ಘೋಷಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಪರಿಣಾಮವಾಗಿ, ಈ ಅಧಿಸೂಚಿತ ಪ್ರದೇಶದಲ್ಲಿ ಮದ್ಯ ಮತ್ತು ಮಾಂಸ ವ್ಯಾಪಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ” ಎಂದು ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಚಾಹಲ್ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ವಿರುದ್ದ ಸ್ಪರ್ಧಿಸಲಿರುವ ಮಾಜಿ ಐಪಿಎಸ್‌ ಅಮಿತಾಬ್‌ ಠಾಕೂರ್‌‌

ಈ ಪ್ರದೇಶಗಳಲ್ಲಿ ಮದ್ಯ ಮತ್ತು ಮಾಂಸದ ಅಂಗಡಿಗಳನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಧಾರ್ಮಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ, “ಮಥುರಾ-ವೃಂದಾವನವು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಆದ್ದರಿಂದ ಇದನ್ನು ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ. ಭಾರತ ಮತ್ತು ವಿದೇಶಗಳಿಂದ ಲಕ್ಷಾಂತರ ಯಾತ್ರಿಕರು ಇಲ್ಲಿ ಭೇಟಿ ಮಾಡುತ್ತಾರೆ. ಮಥುರಾ-ವೃಂದಾವನ ಐತಿಹಾಸಿಕವಾಗಿ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದಲೂ ಮಹತ್ವದ್ದಾಗಿದೆ” ಎಂದು ಹೇಳಲಾಗಿದೆ.

ಮಥುರಾ-ವೃಂದಾವನ ಪ್ರದೇಶದಲ್ಲಿ ಸುಮಾರು 10 ಚದರ ಕಿಮೀ ಪ್ರದೇಶವನ್ನು ತೀರ್ಥಕ್ಷೇತ್ರವೆಂದು ಘೋಷಿಸಲಾಗಿದೆ ಎಂದು ಧಾರ್ಮಿಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾಗಿ TNIE ವರದಿ ಮಾಡಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...