Homeಕರ್ನಾಟಕ‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚಿನ ಅಧಿಸೂಚನೆಯು ‘ಕರ್ನಾಟಕ ಅಬಕಾರಿ ನಿಯಮಗಳು – 2023’ ರ ಕರಡು, ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯಿತು.

ಖಂಡಿಸಿದ ವಿದ್ಯಾರ್ಥಿ ಸಂಘಟನೆಗಳು:

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಈ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈವರೆಯೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ. ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ಕುಡಿತದ ವಯೋಮಿತಿ ಸಡಿಲಿಕೆ ಮಾಡುವ ಸರಕಾರದ ತಿದ್ದುಪಡಿಗೆ ಜನ ಆಕ್ಷೇಪ ವ್ಯಕ್ತಪಡಿಸುವ ಸಂಭವವಿದ್ದು, ಇದನ್ನು ನೀತಿ ನಿರ್ಧಾರವಾಗಿ ಸರಕಾರ ಮುಂದುವರಿಸಲಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಪಬ್‌ಗಳಲ್ಲಿ ತಮ್ಮ 18 ನೇ ಹುಟ್ಟುಹಬ್ಬವನ್ನು ಆಚರಿಸಲು ಬಯಸುವ ಅನೇಕರಿಗೆ ಪಬ್ ಸಂಸ್ಕೃತಿಯ ಮೇಲೆ ವ್ಯಾಮೋಹ ಬೆಳೆಸಿರುವುದರಿಂದ ಕೆಲವರು ವಯಸ್ಸಿನ ಸಡಿಲಿಕೆಯ ಪರವಾಗಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...