Homeಕರ್ನಾಟಕ‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚಿನ ಅಧಿಸೂಚನೆಯು ‘ಕರ್ನಾಟಕ ಅಬಕಾರಿ ನಿಯಮಗಳು – 2023’ ರ ಕರಡು, ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯಿತು.

ಖಂಡಿಸಿದ ವಿದ್ಯಾರ್ಥಿ ಸಂಘಟನೆಗಳು:

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಈ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈವರೆಯೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ. ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ಕುಡಿತದ ವಯೋಮಿತಿ ಸಡಿಲಿಕೆ ಮಾಡುವ ಸರಕಾರದ ತಿದ್ದುಪಡಿಗೆ ಜನ ಆಕ್ಷೇಪ ವ್ಯಕ್ತಪಡಿಸುವ ಸಂಭವವಿದ್ದು, ಇದನ್ನು ನೀತಿ ನಿರ್ಧಾರವಾಗಿ ಸರಕಾರ ಮುಂದುವರಿಸಲಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಪಬ್‌ಗಳಲ್ಲಿ ತಮ್ಮ 18 ನೇ ಹುಟ್ಟುಹಬ್ಬವನ್ನು ಆಚರಿಸಲು ಬಯಸುವ ಅನೇಕರಿಗೆ ಪಬ್ ಸಂಸ್ಕೃತಿಯ ಮೇಲೆ ವ್ಯಾಮೋಹ ಬೆಳೆಸಿರುವುದರಿಂದ ಕೆಲವರು ವಯಸ್ಸಿನ ಸಡಿಲಿಕೆಯ ಪರವಾಗಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...