Homeಕರ್ನಾಟಕ‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

‘ಮದ್ಯ ಖರೀದಿ ವಯಸ್ಸನ್ನು 21 ರಿಂದ 18ಕ್ಕೆ’ | ಕರಡು ಅಧಿಸೂಚನೆ ಹೊರಡಿಸಿದ ಬೊಮ್ಮಾಯಿ ಸರ್ಕಾರ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚಿನ ಅಧಿಸೂಚನೆಯು ‘ಕರ್ನಾಟಕ ಅಬಕಾರಿ ನಿಯಮಗಳು – 2023’ ರ ಕರಡು, ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ಅಬಕಾರಿ ಇಲಾಖೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆಯಿತು.

ಖಂಡಿಸಿದ ವಿದ್ಯಾರ್ಥಿ ಸಂಘಟನೆಗಳು:

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಈ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ. ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈವರೆಯೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ. ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ. ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ಕುಡಿತದ ವಯೋಮಿತಿ ಸಡಿಲಿಕೆ ಮಾಡುವ ಸರಕಾರದ ತಿದ್ದುಪಡಿಗೆ ಜನ ಆಕ್ಷೇಪ ವ್ಯಕ್ತಪಡಿಸುವ ಸಂಭವವಿದ್ದು, ಇದನ್ನು ನೀತಿ ನಿರ್ಧಾರವಾಗಿ ಸರಕಾರ ಮುಂದುವರಿಸಲಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನ ಪಬ್‌ಗಳಲ್ಲಿ ತಮ್ಮ 18 ನೇ ಹುಟ್ಟುಹಬ್ಬವನ್ನು ಆಚರಿಸಲು ಬಯಸುವ ಅನೇಕರಿಗೆ ಪಬ್ ಸಂಸ್ಕೃತಿಯ ಮೇಲೆ ವ್ಯಾಮೋಹ ಬೆಳೆಸಿರುವುದರಿಂದ ಕೆಲವರು ವಯಸ್ಸಿನ ಸಡಿಲಿಕೆಯ ಪರವಾಗಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...