Homeಕರ್ನಾಟಕಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

ಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆಗಳ ಉಸ್ತುವಾರಿಗಳ ಪಟ್ಟಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ, ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಬಿಜೆಪಿ ಕೈಬಿಟ್ಟಿತ್ತು. ಈ ಬಗ್ಗೆ ವಿಜಯೇಂದ್ರ ಅವರ ಅಭಿಮಾನಿಗಳು ಬಿಜೆಪಿ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಅವರನ್ನು ಉಸ್ತುವಾರಿಗಳ ಪಟ್ಟಿಗೆ ಅವರ ಹೆಸರನ್ನು ಸೋಮವಾರ ಸೇರಿಸಿದೆ.

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

ವಿಜಯೇಂದ್ರ ಅವರ ಹೆಸರು ಬಿಜೆಪಿ ಕೈಬಿಟ್ಟ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಪಕ್ಷದ ಉನ್ನತ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಅವರು ಟ್ವಿಟರ್‌ನಲ್ಲಿ ಖಂಡಿಸಿದ್ದರು. “ಪಕ್ಷದ ತೀರ್ಮಾನದಂತೆ, ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಪಕ್ಷವು ಅಕ್ಟೋಬರ್ 1 ರಂದು ಘೋಷಿಸಿದ್ದ ಉಸ್ತುವಾರಿಗಳ ಗುಂಪಿನಲ್ಲಿ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರ ಹೆಸರು ಇರಲಿಲ್ಲ. ಅವರ ಅಭಿಮಾನಿಗಳ ಆಕ್ರೊಶ ವ್ಯಕ್ತವಾದ ನಂತರ, ಸೋಮವಾರ ಪಕ್ಷವು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹಾನಗಲ್‌ ಉಸ್ತುವಾರಿಯಾಗಿ ಅವರನ್ನು ಸೇರಿಸಿದ್ದಾರೆ. ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ, ಬಿ ಸಿ ಪಾಟೀಲ್, ಶಿವರಾಮ ಹೆಬ್ಬಾರ್ ಮತ್ತು ಸಂಸತ್ ಸದಸ್ಯ ಶಿವಕುಮಾರ ಉದಾಸಿ ಸೇರಿದಂತೆ ಒಟ್ಟು 13 ಉಸ್ತುವಾರಿಗಳನ್ನು ನೇಮಿಸಲಾಗಿದೆ.

ಸಿಂದಗಿ ಕ್ಷೇತ್ರದಲ್ಲಿ ಉಸ್ತುವಾರಿಯಾಗಿ, ಸಚಿವರಾದ ಗೋವಿಂದ್ ಕಾರಜೋ‌ಲ್, ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಶಶಿಕಲಾ ಜೊಲ್ಲೆ ಪಟ್ಟಿಯಲ್ಲಿ ಇದ್ದಾರೆ.

ಸಿಂದಗಿಯಲ್ಲಿ ಜೆಡಿ(ಎಸ್) ಶಾಸಕರಾದ ಎಂ.ಸಿ. ಮನಗೂಳಿ ಮತ್ತು ಹಾನಗಲ್‌ನಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ಅವರ ಮರಣದಿಂದಾಗಿ ಉಪಚುನಾವಣೆಗಳು ನಡೆಯುತ್ತಿದೆ.

ಕೆ.ಆರ್. ಪೇಟೆ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವಿಜಯೇಂದ್ರ ಅವರೇ ಹಾನಗಲ್ ಅಭ್ಯರ್ಥಿ ಎಂದು ಊಹಿಸಲಾಗಿತ್ತು.

ಇದನ್ನೂ ಓದಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ಮೂಲಗಳ ಪ್ರಕಾರ, ಹಾನಗಲ್‌‌ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯಲ್ಲಿ ದಿವಂಗತ ಮಾಜಿ ಶಾಸಕ ಸಿ.ಎಂ. ಉದಾಸಿಯವರ ಸೊಸೆ, ಹಾವೇರಿ-ಗದಗ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಕಲ್ಯಾಣ್ ಕುಮಾರ್ ಶೆಟ್ಟರ್ ಮತ್ತು ಶಿವರಾಜ್ ಸಜ್ಜನರ್‌ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಸಿಂದಗಿಯಲ್ಲಿ, 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ್, ಅಶೋಕ್ ಅಲ್ಲಾಪುರ, ಶಂಬುಲಿಂಗ ಕಕ್ಕಲಮೇಲಿ, ಸಿದ್ದು ಬಿರಾದಾರ್ ಮತ್ತು ಸಂಗನಗೌಡ ಪಾಟೀಲ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಜೆಡಿ(ಎಸ್) ಈಗಾಗಲೇ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಿಂದಗಿಯಲ್ಲಿ ಮತ್ತು ನಿಯಾಜ್ ಶೇಖ್ ಅವರನ್ನು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನಾಗಿ ಹೆಸರಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ದಿವಂಗತ ಎಂ.ಸಿ. ಮನಗೂಳಿ ಅವರ ಮಗ ಅಶೋಕ್ ಮನಗೂಳಿ ಅವರನ್ನು ಸಿಂದಗಿಯಿಂದ ಅಭ್ಯರ್ಥಿಯಾಗಿ ಅಂತಿಮಗೊಳಿಸಿದೆ. ಹಾನಗಲ್‌ನಲ್ಲಿ ಮಾಜಿ ಎಂಎಲ್‌ಸಿ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಯಾಗಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....