Homeಕರ್ನಾಟಕಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

ಉಪಚುನಾವಣಾ ಉಸ್ತುವಾರಿ ಪಟ್ಟಿ: ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಹೆಸರು ಕೈಬಿಟ್ಟಿದ್ದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ಅಕ್ಟೋಬರ್ 30 ರಂದು ನಡೆಯಲಿರುವ ಉಪಚುನಾವಣೆಗಳ ಉಸ್ತುವಾರಿಗಳ ಪಟ್ಟಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ, ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಬಿಜೆಪಿ ಕೈಬಿಟ್ಟಿತ್ತು. ಈ ಬಗ್ಗೆ ವಿಜಯೇಂದ್ರ ಅವರ ಅಭಿಮಾನಿಗಳು ಬಿಜೆಪಿ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಅವರನ್ನು ಉಸ್ತುವಾರಿಗಳ ಪಟ್ಟಿಗೆ ಅವರ ಹೆಸರನ್ನು ಸೋಮವಾರ ಸೇರಿಸಿದೆ.

ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆಗೆ ದಿನಾಂಕ ಘೋಷಣೆ: ಕಸರತ್ತು ಆರಂಭಿಸಿದ ಪಕ್ಷಗಳು

ವಿಜಯೇಂದ್ರ ಅವರ ಹೆಸರು ಬಿಜೆಪಿ ಕೈಬಿಟ್ಟ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಪಕ್ಷದ ಉನ್ನತ ನಾಯಕತ್ವದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನು ಅವರು ಟ್ವಿಟರ್‌ನಲ್ಲಿ ಖಂಡಿಸಿದ್ದರು. “ಪಕ್ಷದ ತೀರ್ಮಾನದಂತೆ, ನಮ್ಮ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ, ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ನಾವು ಕಾರ್ಯನಿರ್ವಹಿಸೋಣ. ಪಕ್ಷಕ್ಕೆ ಮುಜುಗರ ತರುವ ಯಾವುದೇ ವಿಷಯಕ್ಕೂ ನನ್ನ ಸಮ್ಮತಿಯಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿ ಗೆಲ್ಲಿಸಲು ಮುಸ್ಲಿಮರಿಗೆ ಜೆಡಿಎಸ್‌‌ ಟಿಕೆಟ್‌- ಸಿದ್ದರಾಮಯ್ಯ; ಎಚ್‌ಡಿಕೆ ಪ್ರತಿಕ್ರಿಯೆ

ಪಕ್ಷವು ಅಕ್ಟೋಬರ್ 1 ರಂದು ಘೋಷಿಸಿದ್ದ ಉಸ್ತುವಾರಿಗಳ ಗುಂಪಿನಲ್ಲಿ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರ ಹೆಸರು ಇರಲಿಲ್ಲ. ಅವರ ಅಭಿಮಾನಿಗಳ ಆಕ್ರೊಶ ವ್ಯಕ್ತವಾದ ನಂತರ, ಸೋಮವಾರ ಪಕ್ಷವು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹಾನಗಲ್‌ ಉಸ್ತುವಾರಿಯಾಗಿ ಅವರನ್ನು ಸೇರಿಸಿದ್ದಾರೆ. ಅವರ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ, ಜೆ ಸಿ ಮಾಧುಸ್ವಾಮಿ, ಬಿ ಸಿ ಪಾಟೀಲ್, ಶಿವರಾಮ ಹೆಬ್ಬಾರ್ ಮತ್ತು ಸಂಸತ್ ಸದಸ್ಯ ಶಿವಕುಮಾರ ಉದಾಸಿ ಸೇರಿದಂತೆ ಒಟ್ಟು 13 ಉಸ್ತುವಾರಿಗಳನ್ನು ನೇಮಿಸಲಾಗಿದೆ.

ಸಿಂದಗಿ ಕ್ಷೇತ್ರದಲ್ಲಿ ಉಸ್ತುವಾರಿಯಾಗಿ, ಸಚಿವರಾದ ಗೋವಿಂದ್ ಕಾರಜೋ‌ಲ್, ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಶಶಿಕಲಾ ಜೊಲ್ಲೆ ಪಟ್ಟಿಯಲ್ಲಿ ಇದ್ದಾರೆ.

ಸಿಂದಗಿಯಲ್ಲಿ ಜೆಡಿ(ಎಸ್) ಶಾಸಕರಾದ ಎಂ.ಸಿ. ಮನಗೂಳಿ ಮತ್ತು ಹಾನಗಲ್‌ನಲ್ಲಿ ಬಿಜೆಪಿಯ ಸಿ. ಎಂ. ಉದಾಸಿ ಅವರ ಮರಣದಿಂದಾಗಿ ಉಪಚುನಾವಣೆಗಳು ನಡೆಯುತ್ತಿದೆ.

ಕೆ.ಆರ್. ಪೇಟೆ ಮತ್ತು ಸಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವಿಜಯೇಂದ್ರ ಅವರೇ ಹಾನಗಲ್ ಅಭ್ಯರ್ಥಿ ಎಂದು ಊಹಿಸಲಾಗಿತ್ತು.

ಇದನ್ನೂ ಓದಿ: ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ಮೂಲಗಳ ಪ್ರಕಾರ, ಹಾನಗಲ್‌‌ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯಲ್ಲಿ ದಿವಂಗತ ಮಾಜಿ ಶಾಸಕ ಸಿ.ಎಂ. ಉದಾಸಿಯವರ ಸೊಸೆ, ಹಾವೇರಿ-ಗದಗ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಉದಾಸಿ, ಕಲ್ಯಾಣ್ ಕುಮಾರ್ ಶೆಟ್ಟರ್ ಮತ್ತು ಶಿವರಾಜ್ ಸಜ್ಜನರ್‌ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಸಿಂದಗಿಯಲ್ಲಿ, 2018 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಮೇಶ್ ಭೂಸನೂರ್, ಅಶೋಕ್ ಅಲ್ಲಾಪುರ, ಶಂಬುಲಿಂಗ ಕಕ್ಕಲಮೇಲಿ, ಸಿದ್ದು ಬಿರಾದಾರ್ ಮತ್ತು ಸಂಗನಗೌಡ ಪಾಟೀಲ್ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಜೆಡಿ(ಎಸ್) ಈಗಾಗಲೇ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಿಂದಗಿಯಲ್ಲಿ ಮತ್ತು ನಿಯಾಜ್ ಶೇಖ್ ಅವರನ್ನು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನಾಗಿ ಹೆಸರಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ದಿವಂಗತ ಎಂ.ಸಿ. ಮನಗೂಳಿ ಅವರ ಮಗ ಅಶೋಕ್ ಮನಗೂಳಿ ಅವರನ್ನು ಸಿಂದಗಿಯಿಂದ ಅಭ್ಯರ್ಥಿಯಾಗಿ ಅಂತಿಮಗೊಳಿಸಿದೆ. ಹಾನಗಲ್‌ನಲ್ಲಿ ಮಾಜಿ ಎಂಎಲ್‌ಸಿ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಯಾಗಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...