Homeಕರೋನಾ ತಲ್ಲಣತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಈ ಪಟ್ಟಿ "ಅಧಿಕೃತ ಮೂಲಗಳಿಂದ" ಬಂದಿಲ್ಲ ಎಂದು ಬಿಬಿಎಂಪಿಯ ಮೂವರು ಅಧಿಕಾರಿಗಳು ದಿ ಕ್ವಿಂಟ್‌ಗೆ ದೃಢಪಡಿಸಿದ್ದಾರೆ

- Advertisement -
- Advertisement -

ಮೇ 4 ರಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಗಳೂರು ದಕ್ಷಿಣ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕೋವಿಡ್ ವಾರ್‌ರೂಮಿಗೆ ಎಂಟ್ರಿ ನೀಡಿದರು. (ಮಾಧ್ಯಮಗಳ ಪ್ರಕಾರ ಇದು ದಾಳಿ). ನಂತರ ಅವರು 16 ಮುಸ್ಲಿಂ ಹೆಸರುಗಳನ್ನು ಓದಿದರು, “ಇವರೆಲ್ಲಾ ಯಾರು? ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು?” ಎಂದು ಪ್ರಶ್ನಿಸಿದ್ದರು ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 16 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತೇಜಸ್ವಿ ಸೂರ್ಯ ನಂತರ ಪತ್ರಿಕಾಗೋಷ್ಠಿ ಕರೆದು , ಬಿಬಿಎಂಪಿಯಲ್ಲಿ ಹಾಸಿಗೆ ಹಂಚಿಕೆ ಹಗರಣವನ್ನು ಬಹಿರಂಗಪಡಿಸಿದರು, ಹೆಚ್ಚಿನ ದರವನ್ನು ಪಾವತಿಸುವವರಿಗೆ ಹಾಸಿಗೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಸ್ವಲ್ಪ ಸಮಯದ ನಂತರ, 16 ಮುಸ್ಲಿಂ ಗುತ್ತಿಗೆ ನೌಕರರನ್ನು ಬಿಬಿಎಂಪಿ ವಾರ್‌ ರೂಂನಿಂದ ಯಾವುದೇ ಕಾರಣವಿಲ್ಲದೆ ತೆಗೆದುಹಾಕಲಾಯಿತು. ಆದರೆ ನಂತರ ಅವರೆಲ್ಲರೂ ಅಮಾಯಕರೆಂದು ಬೆಡ್ ಬ್ಲಾಕಿಂಕ್ ದಂಧೆಯಲ್ಲಿ ಬಿಜೆಪಿ ಶಾಸಕರೇ ಭಾಗಿಯಾಗಿರುವುದು ಮಾಧ್ಯಮಗಳಿಂದ ಬಹಿರಂಗವಾಯಿತು. ಆಗಿನಿಂದ ತೇಜಸ್ವಿ ಸೂರ್ಯ ನನಗೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಲಿಸ್ಟ್ ಕೊಟ್ಟರು. ನಾನು ಓದಿದೆ ಅಷ್ಟೇ ಎಂದು ಹೇಳುತ್ತಿದ್ದಾರೆ.

ಆದರೆ ಬಿಬಿಎಂಪಿ ಅಂತಹ ಪಟ್ಟಿ ನೀಡಿಯೇ ಇಲ್ಲ ಎಂದು ಆಂಗ್ಲ ವೆಬ್ ಪೋರ್ಟಲ್ ದಿ ಕ್ವಿಂಟ್ ಕಂಡುಕೊಂಡಿದೆ. ಆ ತರಹದ ಕೋಮುವಾದಿ ಮನಸ್ಸಿನ ಪಟ್ಟಿ ತಯಾರಿಸಿದ್ದು ಯಾರು? ಹಾಗಿದ್ದರೆ, ಯಾರ ಮೂಲಕ ಸಂಸದರಿಗೆ ಅದು ತಲುಪಿತು?

ಬೆಂಗಳೂರು ಮಹಾನಗರ ಪಾಲಿಕೆ ಈ ಪಟ್ಟಿಯನ್ನು ತಯಾರಿಸಿಲ್ಲ ಅಥವಾ ತೇಜಸ್ವಿ ಸೂರ್ಯರಿಗೆ ತನ್ನ ಗುತ್ತಿಗೆ ನೌಕರರ ಹೆಸರನ್ನು ತಿಳಿಸಿಲ್ಲ ಎಂದು ಮೂವರು ಬಿಬಿಎಂಪಿ ಅಧಿಕಾರಿಗಳು ದಿ ಕ್ವಿಂಟ್‌ಗೆ ಖಚಿತಪಡಿಸಿದ್ದಾರೆ.

ಮೇ 10 ರಂದು, ಬಿಬಿಎಂಪಿಯು ಎಲ್ಲಾ 16 ಜನರನ್ನು ಪುನಃ ಕೆಲಸಕ್ಕೆ ನೇಮಿಸಿತು. ಬೆಂಗಳೂರು ಪೊಲೀಸರ ಪ್ರಕಾರ, ಆಪಾದಿತ ‘ಬೆಡ್-ಹಗರಣ’ದೊಂದಿಗೆ ಅವರಿಗೆ ಯಾವುದೇ ಯಾವುದೇ ಸಂಬಂಧವಿಲ್ಲ,

ಸೂರ್ಯ ಹೆಸರಿಸಿದ ಪಟ್ಟಿ ಅಧಿಕೃತವಲ್ಲ!

ಮೇ 10 ರಂದು ತೇಜಸ್ವಿ ಸೂರ್ಯ ಬೆಂಗಳೂರು ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸಿದರು. ಹಾಗೆ ಹೆಸರುಗಳನ್ನು ಏಕೆ ಓದಿರಿ? ಯಾರೋ ಕೊಟ್ಟ ಹೆಸರುಗಳನ್ನು ಪರಿಶೀಲನೆ ಮಾಡದೇ ಒಂದು ಕೋಮಿನ ಯುವ ಉದ್ಯೋಗಿಗಳನ್ನು ಏಕೆ ಬಲಿಪಶು ಮಾಡಲು, ಆ ಮೂಲಕ ಕೋಮು ಸೌಹಾರ್ದ ಕದಡಲು ಯತ್ನಿಸಿದಿರಲ್ಲವೇ? ಎಂದು ಪತ್ರಕರ್ತರು ಕೇಳಿದರು. ಆದರೆ ಆಗಲೂ ಸಂಸದ ಸೂರ್ಯ ಅವರು ತಮ್ಮ ಹಿಂದಿನ ಉತ್ತರವನ್ನು ಪುನರಾವರ್ತಿಸಿದರು, ಅಂದರೆ “ನನಗೆ ಅಧಿಕಾರಿಗಳು ನೀಡಲಾದ” ಪಟ್ಟಿಯಿಂದ ಓದಿದ್ದೇನೆ ಎಂಬ ಉತ್ತರ!

ರಾಜಕೀಯ ಒತ್ತಡದ ಕಾರಣಕ್ಕೆ ತಮ್ಮ ಹೆಸರು ಗುರುತಿಸಿಕೊಳ್ಳಲು ಇಷ್ಟಪಡದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ದಿ ಕ್ವಿಂಟ್ ಪತ್ರಿಕೆಗೆ ಹೀಗೆ ಹೇಳಿದ್ದಾರೆ, “ಬಿಬಿಎಂಪಿಯು ವಾರ್‌ರೂಮಿನಲ್ಲಿ ಉದ್ಯೋಗದಲ್ಲಿದ್ದ ಎಲ್ಲಾ 214 ಜನರ ಪಟ್ಟಿಯನ್ನು ಹೊಂದಿದೆ. ನಿರ್ದಿಷ್ಟ ನಂಬಿಕೆಗೆ, ಧರ್ಮಕ್ಕೆ ಸೇರಿದವರ ಪ್ರತ್ಯೇಕ ಪಟ್ಟಿಯನ್ನು ನಾವು ಮಾಡಿಲ್ಲ. ಈ ಪಟ್ಟಿಯನ್ನು ನಮ್ಮ ಅಧಿಕಾರಿಗಳು ತಯಾರಿಸಿಲ್ಲ. ಅದರ ಅಗತ್ಯವೂ ಇಲ್ಲ….”

ಬಿಬಿಎಂಪಿ ವಿಷಯಗಳ ಬಗ್ಗೆ ತಿಳಿದಿರುವ ಇನ್ನೊಬ್ಬ ಅಧಿಕಾರಿ, “ಇದು ಕೋಮುವಾದಿ ನೆಲೆಯಲ್ಲಿ ನೌಕರರನ್ನು ವರ್ಗಿಕರಿಸಿದ ಪಟ್ಟಿ. ಅಂತಹ ಪಟ್ಟಿಯನ್ನು ಬಿಬಿಎಂಪಿ ಎಂದೂ ತಯಾರು ಮಾಡಿಲ್ಲ” ಎಂದಿದ್ದಾರೆ.

ಒಮ್ಮೆ ಪಟ್ಟಿಯಲ್ಲಿರುವ ಹೆಸರುಗಳನ್ನು ಸೂರ್ಯ ಓದಿದ ನಂತರ, ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಯಿತು. ಇದರಿಂದಾಗಿ ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಬಿಬಿಎಂಪಿ ಅಧಿಕಾರಿಗಳನ್ನು “ಹಿಂದೂ ಜೀವಗಳನ್ನು” ತೆಗೆದುಕೊಂಡ “ಭಯೋತ್ಪಾದಕರು” ಎಂದು ಗುರಿಯಾಗಿಸಲಾಯಿತು.

ಸೂರ್ಯ ಭೇಟಿ ನೀಡಿದಾಗ ವಾರ್‌ರೂಮಿನಲ್ಲಿದ್ದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮಿಗೆ ಕಾಲಿಟ್ಟಾಗ ಕಾಗದದ ತುಂಡೊಂದನ್ನು ತಂದಿದ್ದರು. ಅವರು ಯಾವುದೇ ಬಿಬಿಎಂಪಿ ಅಧಿಕಾರಿಯೊಂದಿಗೆ ಪಟ್ಟಿ ಅಧಿಕೃತವಾಗಿದೆಯೇ ಅಥವಾ ಯಾವುದೇ ಉದ್ದೇಶಕ್ಕಾಗಿ ಅದನ್ನು ತಯಾರಿಸಿದ್ದಾರೆ ಎಂದು ಪರಿಶೀಲಿಸಲಿಲ್ಲ” ಎಂದು ಬಿಬಿಎಂಪಿ ಅಧಿಕಾರಿಗಳು ಕ್ವಿಂಟ್‌ಗೆ ತಿಳಿಸಿದ್ದಾರೆ.  ಘಟನೆ ಕುರಿತು ಬಿಬಿಎಂಪಿ ಅಧಿಕೃತ ಹೇಳಿಕೆ ನೀಡಿಲ್ಲ.

ಪಟ್ಟಿ ಎಲ್ಲಿಂದ ಬಂತು?

ಕ್ವಿಂಟ್ ಪೋರ್ಟಲ್ ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಅನ್ನು ಸಂಪರ್ಕಿಸಿದೆ. ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಬಿಬಿಎಂಪಿ ವಾರ್‌ರೂಮಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಕಾರ್ಯವಿಧಾನದ ಪ್ರಕಾರ ಅವರು ತಮ್ಮ ನೌಕರರ ಹೆಸರನ್ನು ಬಿಬಿಎಂಪಿಗೆ ನೀಡಿದ್ದಾರೆ ಎಂದು ಸಂಸ್ಥೆ ದೃಢ ಪಡಿಸಿದೆ. “ನಮ್ಮ ಪಟ್ಟಿಯಲ್ಲಿ ಹೆಚ್ಚಿನ ಹೆಸರುಗಳಿವೆ. ಕಳೆದ 10-15 ದಿನಗಳಲ್ಲಿ ನೇಮಕಗೊಂಡವರ ಹೆಸರನ್ನು ಮಾತ್ರ ಸಂಸದರು ಓದಿದ್ದಾರೆ”ಎಂದು ಕ್ರಿಸ್ಟಲ್ ಇನ್ಫೋಸಿಸ್ಟಮ್‌ನಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಪನಿಯು ಪಟ್ಟಿಯನ್ನು ಸಂಸದರಿಗೆ ಒದಗಿಸಿದೆಯೇ? ಎಂಬ ಪ್ರಶ್ನೆಗೆ, “ಸಂಸದರು ಈ ಹೆಸರುಗಳನ್ನು ಹೇಗೆ ಗುರುತಿಸಿದ್ದಾರೆಂದು ನಮಗೆ ತಿಳಿದಿಲ್ಲ. ಇದು ನಮ್ಮಿಂದ ಪಡೆದ ಪಟ್ಟಿಯಲ್ಲ” ಎಂದು ಕ್ರಿಸ್ಟಲ್ ಉದ್ಯೋಗಿ ಹೇಳಿದರು.

ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮ್ ಮೇಲೆ ನಿಯಂತ್ರಣವನ್ನು ಬಯಸಿದ್ದರು ಮತ್ತು ನೇಮಕಾತಿ ಮತ್ತು ನಿರ್ವಹಣೆಯಲ್ಲಿ ನಿಯಂತ್ರಣ ಬಯಸಿದ್ದರು. ಅವರು ಇಲ್ಲಿಗೆ ಕಾಲಿಟ್ಟಾಗ ಅವರು ನೌಕರರನ್ನು ಭಯಭೀತರಾಗಿಸಲು ಕೋಮು ಉದ್ವೇಗವನ್ನು ಸೃಷ್ಟಿಸಲು ಪ್ರಯತ್ನಿಸಿದರು. ಇದು ಅವರ ರಾಜಕೀಯ ಶೈಲಿಗೆ ಹೊಂದುವಂತೆಯೇ ಇತ್ತು. ಈ ಪಟ್ಟಿಯನ್ನು ಸಂಸದರ ತಂಡವೇ ತಯಾರಿಸಿದಂತೆ ಕಾಣುತ್ತದೆ’ ಎಂದು ಅಧಿಕಾರಿ ಆರೋಪಿಸಿದ್ದಾರೆ. “ಸಂಸದರ ತಂಡದ ಹಲವಾರು ಸದಸ್ಯರು ಇತ್ತೀಚಿನ ದಿನಗಳಲ್ಲಿ ವಾರ್‌ರೂಮಿಗೆ ಭೇಟಿ ನೀಡಿದ್ದರು. ಅವರಲ್ಲಿ ಯಾರಾದರೂ ಪಟ್ಟಿಯನ್ನು ತಯರಿಸಬಹುದಿತ್ತು. ಈ ಪಟ್ಟಿಯು ಅಧಿಕೃತವಲ್ಲ… ಕೋಮು ವಿಭಜನೆಗಾಗಿ ರಚಿಸಲಾದ ಉದ್ದೇಶವನ್ನು ಮಾತ್ರ ಪೂರೈಸುತ್ತದೆ” ಎಂದು ಅಧಿಕಾರಿ ಹೇಳಿದರು.

ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಮೂವರು ಬಿಜೆಪಿ ಶಾಸಕರೊಂದಿಗೆ ಸಂಸದರು ಬಿಬಿಎಂಪಿ ಬಾರ್‌ರೂಮಿಗೆ ಭೇಟಿ ನೀಡಿದ್ದರು.

ಪಟ್ಟಿಯನ್ನು ಏಕೆ ತಯಾರಿಸಲಾಯಿತು?

ತೇಜಸ್ವಿ ಸೂರ್ಯ ಪ್ರವೇಶಿಸುವ ಮೊದಲು, ಅವರ ದಕ್ಷಿಣ ಬೆಂಗಳೂರು ಕಚೇರಿಯ ಮೂವರು ಸದಸ್ಯರು ವಾರ್‌ರೂಮಿಗೆ ಭೇಟಿ ನೀಡಿದ್ದರು ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಂಸದರ ತಂಡವು, ಹಾಸಿಗೆಗಳನ್ನು ಹೇಗೆ ಹಂಚಲಾಗುತ್ತದೆ ಮತ್ತು ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದೆಲ್ಲ ಪ್ರಶ್ನೆ ಮಾಡಿತು. ತಾವು ಕೊರೊನಾ ವಾರ್‌ರೂಮಿನ ಭಾಗವಾಗಬಹುದೇ ಎಂಬ ಪ್ರಶ್ನೆಗಳನ್ನು ಅವರು ಎತ್ತಿದ್ದರು. ಸರಿಯಾದ ಪ್ರಕ್ರಿಯೆಯ ಪ್ರಕಾರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರಿಗೆ ತಿಳಿಸಲಾಯಿತು. ಅದರ ಮರುದಿನವೇ, ಸಂಸದರು ಕಚೇರಿಗೆ ಭೇಟಿ (ದಾಳಿ) ನೀಡಿದರು” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಎಂ.ಪಿ ತಂಡವು ವಿನಾಶಕಾರಿ ಉದ್ದೇಶ ಹೊಂದಿದ್ದರಿಂದ ಈ ಪಟ್ಟಿಯನ್ನು ಸಂಗ್ರಹಿಸಲಾಗಿದೆ. “ಬಿಬಿಎಂಪಿ ಸಂಸದರ ಹಸ್ತಕ್ಷೇಪವನ್ನು ಬಯಸಲಿಲ್ಲ ಮತ್ತು ಇದು ಉದ್ವಿಗ್ನತೆಗೆ ಕಾರಣವಾಯಿತು. ಬಿಬಿಎಂಪಿ ಕೇವಲ ಮುಸ್ಲಿಂ ಸದಸ್ಯರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದೆ ಎಂಬ ಅಭಿಪ್ರಾಯವನ್ನು ಸೃಷ್ಟಿಸಲು ಸಂಸದರು ಬಯಸಿದ್ದರು” ಎಂದು ಅಧಿಕಾರಿಯೊಬ್ಬರು ಕ್ವಿಂಟ್‌ಗೆ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಅವರ ಕಚೇರಿ ದಿ ಕ್ವಿಂಟ್‌ನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. “ಸಂಸದರು ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೇ ಮುಗೀತು. ಮತ್ತೆ ಇನ್ನೇನನ್ನೂ ಹೇಳುವ ಅಗತ್ಯವಿಲ್ಲ” ಎಂದು ತೇಜಸ್ವಿ ಸೂರ್ಯ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ..

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...