Homeಕರೋನಾ ತಲ್ಲಣತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಈ ಪಟ್ಟಿ "ಅಧಿಕೃತ ಮೂಲಗಳಿಂದ" ಬಂದಿಲ್ಲ ಎಂದು ಬಿಬಿಎಂಪಿಯ ಮೂವರು ಅಧಿಕಾರಿಗಳು ದಿ ಕ್ವಿಂಟ್‌ಗೆ ದೃಢಪಡಿಸಿದ್ದಾರೆ

- Advertisement -
- Advertisement -

ಮೇ 4 ರಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಗಳೂರು ದಕ್ಷಿಣ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕೋವಿಡ್ ವಾರ್‌ರೂಮಿಗೆ ಎಂಟ್ರಿ ನೀಡಿದರು. (ಮಾಧ್ಯಮಗಳ ಪ್ರಕಾರ ಇದು ದಾಳಿ). ನಂತರ ಅವರು 16 ಮುಸ್ಲಿಂ ಹೆಸರುಗಳನ್ನು ಓದಿದರು, “ಇವರೆಲ್ಲಾ ಯಾರು? ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು?” ಎಂದು ಪ್ರಶ್ನಿಸಿದ್ದರು ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 16 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತೇಜಸ್ವಿ ಸೂರ್ಯ ನಂತರ ಪತ್ರಿಕಾಗೋಷ್ಠಿ ಕರೆದು , ಬಿಬಿಎಂಪಿಯಲ್ಲಿ ಹಾಸಿಗೆ ಹಂಚಿಕೆ ಹಗರಣವನ್ನು ಬಹಿರಂಗಪಡಿಸಿದರು, ಹೆಚ್ಚಿನ ದರವನ್ನು ಪಾವತಿಸುವವರಿಗೆ ಹಾಸಿಗೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಸ್ವಲ್ಪ ಸಮಯದ ನಂತರ, 16 ಮುಸ್ಲಿಂ ಗುತ್ತಿಗೆ ನೌಕರರನ್ನು ಬಿಬಿಎಂಪಿ ವಾರ್‌ ರೂಂನಿಂದ ಯಾವುದೇ ಕಾರಣವಿಲ್ಲದೆ ತೆಗೆದುಹಾಕಲಾಯಿತು. ಆದರೆ ನಂತರ ಅವರೆಲ್ಲರೂ ಅಮಾಯಕರೆಂದು ಬೆಡ್ ಬ್ಲಾಕಿಂಕ್ ದಂಧೆಯಲ್ಲಿ ಬಿಜೆಪಿ ಶಾಸಕರೇ ಭಾಗಿಯಾಗಿರುವುದು ಮಾಧ್ಯಮಗಳಿಂದ ಬಹಿರಂಗವಾಯಿತು. ಆಗಿನಿಂದ ತೇಜಸ್ವಿ ಸೂರ್ಯ ನನಗೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಲಿಸ್ಟ್ ಕೊಟ್ಟರು. ನಾನು ಓದಿದೆ ಅಷ್ಟೇ ಎಂದು ಹೇಳುತ್ತಿದ್ದಾರೆ.

ಆದರೆ ಬಿಬಿಎಂಪಿ ಅಂತಹ ಪಟ್ಟಿ ನೀಡಿಯೇ ಇಲ್ಲ ಎಂದು ಆಂಗ್ಲ ವೆಬ್ ಪೋರ್ಟಲ್ ದಿ ಕ್ವಿಂಟ್ ಕಂಡುಕೊಂಡಿದೆ. ಆ ತರಹದ ಕೋಮುವಾದಿ ಮನಸ್ಸಿನ ಪಟ್ಟಿ ತಯಾರಿಸಿದ್ದು ಯಾರು? ಹಾಗಿದ್ದರೆ, ಯಾರ ಮೂಲಕ ಸಂಸದರಿಗೆ ಅದು ತಲುಪಿತು?

ಬೆಂಗಳೂರು ಮಹಾನಗರ ಪಾಲಿಕೆ ಈ ಪಟ್ಟಿಯನ್ನು ತಯಾರಿಸಿಲ್ಲ ಅಥವಾ ತೇಜಸ್ವಿ ಸೂರ್ಯರಿಗೆ ತನ್ನ ಗುತ್ತಿಗೆ ನೌಕರರ ಹೆಸರನ್ನು ತಿಳಿಸಿಲ್ಲ ಎಂದು ಮೂವರು ಬಿಬಿಎಂಪಿ ಅಧಿಕಾರಿಗಳು ದಿ ಕ್ವಿಂಟ್‌ಗೆ ಖಚಿತಪಡಿಸಿದ್ದಾರೆ.

ಮೇ 10 ರಂದು, ಬಿಬಿಎಂಪಿಯು ಎಲ್ಲಾ 16 ಜನರನ್ನು ಪುನಃ ಕೆಲಸಕ್ಕೆ ನೇಮಿಸಿತು. ಬೆಂಗಳೂರು ಪೊಲೀಸರ ಪ್ರಕಾರ, ಆಪಾದಿತ ‘ಬೆಡ್-ಹಗರಣ’ದೊಂದಿಗೆ ಅವರಿಗೆ ಯಾವುದೇ ಯಾವುದೇ ಸಂಬಂಧವಿಲ್ಲ,

ಸೂರ್ಯ ಹೆಸರಿಸಿದ ಪಟ್ಟಿ ಅಧಿಕೃತವಲ್ಲ!

ಮೇ 10 ರಂದು ತೇಜಸ್ವಿ ಸೂರ್ಯ ಬೆಂಗಳೂರು ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸಿದರು. ಹಾಗೆ ಹೆಸರುಗಳನ್ನು ಏಕೆ ಓದಿರಿ? ಯಾರೋ ಕೊಟ್ಟ ಹೆಸರುಗಳನ್ನು ಪರಿಶೀಲನೆ ಮಾಡದೇ ಒಂದು ಕೋಮಿನ ಯುವ ಉದ್ಯೋಗಿಗಳನ್ನು ಏಕೆ ಬಲಿಪಶು ಮಾಡಲು, ಆ ಮೂಲಕ ಕೋಮು ಸೌಹಾರ್ದ ಕದಡಲು ಯತ್ನಿಸಿದಿರಲ್ಲವೇ? ಎಂದು ಪತ್ರಕರ್ತರು ಕೇಳಿದರು. ಆದರೆ ಆಗಲೂ ಸಂಸದ ಸೂರ್ಯ ಅವರು ತಮ್ಮ ಹಿಂದಿನ ಉತ್ತರವನ್ನು ಪುನರಾವರ್ತಿಸಿದರು, ಅಂದರೆ “ನನಗೆ ಅಧಿಕಾರಿಗಳು ನೀಡಲಾದ” ಪಟ್ಟಿಯಿಂದ ಓದಿದ್ದೇನೆ ಎಂಬ ಉತ್ತರ!

ರಾಜಕೀಯ ಒತ್ತಡದ ಕಾರಣಕ್ಕೆ ತಮ್ಮ ಹೆಸರು ಗುರುತಿಸಿಕೊಳ್ಳಲು ಇಷ್ಟಪಡದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ದಿ ಕ್ವಿಂಟ್ ಪತ್ರಿಕೆಗೆ ಹೀಗೆ ಹೇಳಿದ್ದಾರೆ, “ಬಿಬಿಎಂಪಿಯು ವಾರ್‌ರೂಮಿನಲ್ಲಿ ಉದ್ಯೋಗದಲ್ಲಿದ್ದ ಎಲ್ಲಾ 214 ಜನರ ಪಟ್ಟಿಯನ್ನು ಹೊಂದಿದೆ. ನಿರ್ದಿಷ್ಟ ನಂಬಿಕೆಗೆ, ಧರ್ಮಕ್ಕೆ ಸೇರಿದವರ ಪ್ರತ್ಯೇಕ ಪಟ್ಟಿಯನ್ನು ನಾವು ಮಾಡಿಲ್ಲ. ಈ ಪಟ್ಟಿಯನ್ನು ನಮ್ಮ ಅಧಿಕಾರಿಗಳು ತಯಾರಿಸಿಲ್ಲ. ಅದರ ಅಗತ್ಯವೂ ಇಲ್ಲ….”

ಬಿಬಿಎಂಪಿ ವಿಷಯಗಳ ಬಗ್ಗೆ ತಿಳಿದಿರುವ ಇನ್ನೊಬ್ಬ ಅಧಿಕಾರಿ, “ಇದು ಕೋಮುವಾದಿ ನೆಲೆಯಲ್ಲಿ ನೌಕರರನ್ನು ವರ್ಗಿಕರಿಸಿದ ಪಟ್ಟಿ. ಅಂತಹ ಪಟ್ಟಿಯನ್ನು ಬಿಬಿಎಂಪಿ ಎಂದೂ ತಯಾರು ಮಾಡಿಲ್ಲ” ಎಂದಿದ್ದಾರೆ.

ಒಮ್ಮೆ ಪಟ್ಟಿಯಲ್ಲಿರುವ ಹೆಸರುಗಳನ್ನು ಸೂರ್ಯ ಓದಿದ ನಂತರ, ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಯಿತು. ಇದರಿಂದಾಗಿ ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಬಿಬಿಎಂಪಿ ಅಧಿಕಾರಿಗಳನ್ನು “ಹಿಂದೂ ಜೀವಗಳನ್ನು” ತೆಗೆದುಕೊಂಡ “ಭಯೋತ್ಪಾದಕರು” ಎಂದು ಗುರಿಯಾಗಿಸಲಾಯಿತು.

ಸೂರ್ಯ ಭೇಟಿ ನೀಡಿದಾಗ ವಾರ್‌ರೂಮಿನಲ್ಲಿದ್ದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮಿಗೆ ಕಾಲಿಟ್ಟಾಗ ಕಾಗದದ ತುಂಡೊಂದನ್ನು ತಂದಿದ್ದರು. ಅವರು ಯಾವುದೇ ಬಿಬಿಎಂಪಿ ಅಧಿಕಾರಿಯೊಂದಿಗೆ ಪಟ್ಟಿ ಅಧಿಕೃತವಾಗಿದೆಯೇ ಅಥವಾ ಯಾವುದೇ ಉದ್ದೇಶಕ್ಕಾಗಿ ಅದನ್ನು ತಯಾರಿಸಿದ್ದಾರೆ ಎಂದು ಪರಿಶೀಲಿಸಲಿಲ್ಲ” ಎಂದು ಬಿಬಿಎಂಪಿ ಅಧಿಕಾರಿಗಳು ಕ್ವಿಂಟ್‌ಗೆ ತಿಳಿಸಿದ್ದಾರೆ.  ಘಟನೆ ಕುರಿತು ಬಿಬಿಎಂಪಿ ಅಧಿಕೃತ ಹೇಳಿಕೆ ನೀಡಿಲ್ಲ.

ಪಟ್ಟಿ ಎಲ್ಲಿಂದ ಬಂತು?

ಕ್ವಿಂಟ್ ಪೋರ್ಟಲ್ ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಅನ್ನು ಸಂಪರ್ಕಿಸಿದೆ. ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಬಿಬಿಎಂಪಿ ವಾರ್‌ರೂಮಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಕಾರ್ಯವಿಧಾನದ ಪ್ರಕಾರ ಅವರು ತಮ್ಮ ನೌಕರರ ಹೆಸರನ್ನು ಬಿಬಿಎಂಪಿಗೆ ನೀಡಿದ್ದಾರೆ ಎಂದು ಸಂಸ್ಥೆ ದೃಢ ಪಡಿಸಿದೆ. “ನಮ್ಮ ಪಟ್ಟಿಯಲ್ಲಿ ಹೆಚ್ಚಿನ ಹೆಸರುಗಳಿವೆ. ಕಳೆದ 10-15 ದಿನಗಳಲ್ಲಿ ನೇಮಕಗೊಂಡವರ ಹೆಸರನ್ನು ಮಾತ್ರ ಸಂಸದರು ಓದಿದ್ದಾರೆ”ಎಂದು ಕ್ರಿಸ್ಟಲ್ ಇನ್ಫೋಸಿಸ್ಟಮ್‌ನಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಪನಿಯು ಪಟ್ಟಿಯನ್ನು ಸಂಸದರಿಗೆ ಒದಗಿಸಿದೆಯೇ? ಎಂಬ ಪ್ರಶ್ನೆಗೆ, “ಸಂಸದರು ಈ ಹೆಸರುಗಳನ್ನು ಹೇಗೆ ಗುರುತಿಸಿದ್ದಾರೆಂದು ನಮಗೆ ತಿಳಿದಿಲ್ಲ. ಇದು ನಮ್ಮಿಂದ ಪಡೆದ ಪಟ್ಟಿಯಲ್ಲ” ಎಂದು ಕ್ರಿಸ್ಟಲ್ ಉದ್ಯೋಗಿ ಹೇಳಿದರು.

ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮ್ ಮೇಲೆ ನಿಯಂತ್ರಣವನ್ನು ಬಯಸಿದ್ದರು ಮತ್ತು ನೇಮಕಾತಿ ಮತ್ತು ನಿರ್ವಹಣೆಯಲ್ಲಿ ನಿಯಂತ್ರಣ ಬಯಸಿದ್ದರು. ಅವರು ಇಲ್ಲಿಗೆ ಕಾಲಿಟ್ಟಾಗ ಅವರು ನೌಕರರನ್ನು ಭಯಭೀತರಾಗಿಸಲು ಕೋಮು ಉದ್ವೇಗವನ್ನು ಸೃಷ್ಟಿಸಲು ಪ್ರಯತ್ನಿಸಿದರು. ಇದು ಅವರ ರಾಜಕೀಯ ಶೈಲಿಗೆ ಹೊಂದುವಂತೆಯೇ ಇತ್ತು. ಈ ಪಟ್ಟಿಯನ್ನು ಸಂಸದರ ತಂಡವೇ ತಯಾರಿಸಿದಂತೆ ಕಾಣುತ್ತದೆ’ ಎಂದು ಅಧಿಕಾರಿ ಆರೋಪಿಸಿದ್ದಾರೆ. “ಸಂಸದರ ತಂಡದ ಹಲವಾರು ಸದಸ್ಯರು ಇತ್ತೀಚಿನ ದಿನಗಳಲ್ಲಿ ವಾರ್‌ರೂಮಿಗೆ ಭೇಟಿ ನೀಡಿದ್ದರು. ಅವರಲ್ಲಿ ಯಾರಾದರೂ ಪಟ್ಟಿಯನ್ನು ತಯರಿಸಬಹುದಿತ್ತು. ಈ ಪಟ್ಟಿಯು ಅಧಿಕೃತವಲ್ಲ… ಕೋಮು ವಿಭಜನೆಗಾಗಿ ರಚಿಸಲಾದ ಉದ್ದೇಶವನ್ನು ಮಾತ್ರ ಪೂರೈಸುತ್ತದೆ” ಎಂದು ಅಧಿಕಾರಿ ಹೇಳಿದರು.

ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಮೂವರು ಬಿಜೆಪಿ ಶಾಸಕರೊಂದಿಗೆ ಸಂಸದರು ಬಿಬಿಎಂಪಿ ಬಾರ್‌ರೂಮಿಗೆ ಭೇಟಿ ನೀಡಿದ್ದರು.

ಪಟ್ಟಿಯನ್ನು ಏಕೆ ತಯಾರಿಸಲಾಯಿತು?

ತೇಜಸ್ವಿ ಸೂರ್ಯ ಪ್ರವೇಶಿಸುವ ಮೊದಲು, ಅವರ ದಕ್ಷಿಣ ಬೆಂಗಳೂರು ಕಚೇರಿಯ ಮೂವರು ಸದಸ್ಯರು ವಾರ್‌ರೂಮಿಗೆ ಭೇಟಿ ನೀಡಿದ್ದರು ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಂಸದರ ತಂಡವು, ಹಾಸಿಗೆಗಳನ್ನು ಹೇಗೆ ಹಂಚಲಾಗುತ್ತದೆ ಮತ್ತು ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದೆಲ್ಲ ಪ್ರಶ್ನೆ ಮಾಡಿತು. ತಾವು ಕೊರೊನಾ ವಾರ್‌ರೂಮಿನ ಭಾಗವಾಗಬಹುದೇ ಎಂಬ ಪ್ರಶ್ನೆಗಳನ್ನು ಅವರು ಎತ್ತಿದ್ದರು. ಸರಿಯಾದ ಪ್ರಕ್ರಿಯೆಯ ಪ್ರಕಾರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರಿಗೆ ತಿಳಿಸಲಾಯಿತು. ಅದರ ಮರುದಿನವೇ, ಸಂಸದರು ಕಚೇರಿಗೆ ಭೇಟಿ (ದಾಳಿ) ನೀಡಿದರು” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಎಂ.ಪಿ ತಂಡವು ವಿನಾಶಕಾರಿ ಉದ್ದೇಶ ಹೊಂದಿದ್ದರಿಂದ ಈ ಪಟ್ಟಿಯನ್ನು ಸಂಗ್ರಹಿಸಲಾಗಿದೆ. “ಬಿಬಿಎಂಪಿ ಸಂಸದರ ಹಸ್ತಕ್ಷೇಪವನ್ನು ಬಯಸಲಿಲ್ಲ ಮತ್ತು ಇದು ಉದ್ವಿಗ್ನತೆಗೆ ಕಾರಣವಾಯಿತು. ಬಿಬಿಎಂಪಿ ಕೇವಲ ಮುಸ್ಲಿಂ ಸದಸ್ಯರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದೆ ಎಂಬ ಅಭಿಪ್ರಾಯವನ್ನು ಸೃಷ್ಟಿಸಲು ಸಂಸದರು ಬಯಸಿದ್ದರು” ಎಂದು ಅಧಿಕಾರಿಯೊಬ್ಬರು ಕ್ವಿಂಟ್‌ಗೆ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಅವರ ಕಚೇರಿ ದಿ ಕ್ವಿಂಟ್‌ನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. “ಸಂಸದರು ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೇ ಮುಗೀತು. ಮತ್ತೆ ಇನ್ನೇನನ್ನೂ ಹೇಳುವ ಅಗತ್ಯವಿಲ್ಲ” ಎಂದು ತೇಜಸ್ವಿ ಸೂರ್ಯ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ..

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...