Homeಕರೋನಾ ತಲ್ಲಣತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಈ ಪಟ್ಟಿ "ಅಧಿಕೃತ ಮೂಲಗಳಿಂದ" ಬಂದಿಲ್ಲ ಎಂದು ಬಿಬಿಎಂಪಿಯ ಮೂವರು ಅಧಿಕಾರಿಗಳು ದಿ ಕ್ವಿಂಟ್‌ಗೆ ದೃಢಪಡಿಸಿದ್ದಾರೆ

- Advertisement -
- Advertisement -

ಮೇ 4 ರಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಗಳೂರು ದಕ್ಷಿಣ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕೋವಿಡ್ ವಾರ್‌ರೂಮಿಗೆ ಎಂಟ್ರಿ ನೀಡಿದರು. (ಮಾಧ್ಯಮಗಳ ಪ್ರಕಾರ ಇದು ದಾಳಿ). ನಂತರ ಅವರು 16 ಮುಸ್ಲಿಂ ಹೆಸರುಗಳನ್ನು ಓದಿದರು, “ಇವರೆಲ್ಲಾ ಯಾರು? ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು?” ಎಂದು ಪ್ರಶ್ನಿಸಿದ್ದರು ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 16 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತೇಜಸ್ವಿ ಸೂರ್ಯ ನಂತರ ಪತ್ರಿಕಾಗೋಷ್ಠಿ ಕರೆದು , ಬಿಬಿಎಂಪಿಯಲ್ಲಿ ಹಾಸಿಗೆ ಹಂಚಿಕೆ ಹಗರಣವನ್ನು ಬಹಿರಂಗಪಡಿಸಿದರು, ಹೆಚ್ಚಿನ ದರವನ್ನು ಪಾವತಿಸುವವರಿಗೆ ಹಾಸಿಗೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು. ಸ್ವಲ್ಪ ಸಮಯದ ನಂತರ, 16 ಮುಸ್ಲಿಂ ಗುತ್ತಿಗೆ ನೌಕರರನ್ನು ಬಿಬಿಎಂಪಿ ವಾರ್‌ ರೂಂನಿಂದ ಯಾವುದೇ ಕಾರಣವಿಲ್ಲದೆ ತೆಗೆದುಹಾಕಲಾಯಿತು. ಆದರೆ ನಂತರ ಅವರೆಲ್ಲರೂ ಅಮಾಯಕರೆಂದು ಬೆಡ್ ಬ್ಲಾಕಿಂಕ್ ದಂಧೆಯಲ್ಲಿ ಬಿಜೆಪಿ ಶಾಸಕರೇ ಭಾಗಿಯಾಗಿರುವುದು ಮಾಧ್ಯಮಗಳಿಂದ ಬಹಿರಂಗವಾಯಿತು. ಆಗಿನಿಂದ ತೇಜಸ್ವಿ ಸೂರ್ಯ ನನಗೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಲಿಸ್ಟ್ ಕೊಟ್ಟರು. ನಾನು ಓದಿದೆ ಅಷ್ಟೇ ಎಂದು ಹೇಳುತ್ತಿದ್ದಾರೆ.

ಆದರೆ ಬಿಬಿಎಂಪಿ ಅಂತಹ ಪಟ್ಟಿ ನೀಡಿಯೇ ಇಲ್ಲ ಎಂದು ಆಂಗ್ಲ ವೆಬ್ ಪೋರ್ಟಲ್ ದಿ ಕ್ವಿಂಟ್ ಕಂಡುಕೊಂಡಿದೆ. ಆ ತರಹದ ಕೋಮುವಾದಿ ಮನಸ್ಸಿನ ಪಟ್ಟಿ ತಯಾರಿಸಿದ್ದು ಯಾರು? ಹಾಗಿದ್ದರೆ, ಯಾರ ಮೂಲಕ ಸಂಸದರಿಗೆ ಅದು ತಲುಪಿತು?

ಬೆಂಗಳೂರು ಮಹಾನಗರ ಪಾಲಿಕೆ ಈ ಪಟ್ಟಿಯನ್ನು ತಯಾರಿಸಿಲ್ಲ ಅಥವಾ ತೇಜಸ್ವಿ ಸೂರ್ಯರಿಗೆ ತನ್ನ ಗುತ್ತಿಗೆ ನೌಕರರ ಹೆಸರನ್ನು ತಿಳಿಸಿಲ್ಲ ಎಂದು ಮೂವರು ಬಿಬಿಎಂಪಿ ಅಧಿಕಾರಿಗಳು ದಿ ಕ್ವಿಂಟ್‌ಗೆ ಖಚಿತಪಡಿಸಿದ್ದಾರೆ.

ಮೇ 10 ರಂದು, ಬಿಬಿಎಂಪಿಯು ಎಲ್ಲಾ 16 ಜನರನ್ನು ಪುನಃ ಕೆಲಸಕ್ಕೆ ನೇಮಿಸಿತು. ಬೆಂಗಳೂರು ಪೊಲೀಸರ ಪ್ರಕಾರ, ಆಪಾದಿತ ‘ಬೆಡ್-ಹಗರಣ’ದೊಂದಿಗೆ ಅವರಿಗೆ ಯಾವುದೇ ಯಾವುದೇ ಸಂಬಂಧವಿಲ್ಲ,

ಸೂರ್ಯ ಹೆಸರಿಸಿದ ಪಟ್ಟಿ ಅಧಿಕೃತವಲ್ಲ!

ಮೇ 10 ರಂದು ತೇಜಸ್ವಿ ಸೂರ್ಯ ಬೆಂಗಳೂರು ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸಿದರು. ಹಾಗೆ ಹೆಸರುಗಳನ್ನು ಏಕೆ ಓದಿರಿ? ಯಾರೋ ಕೊಟ್ಟ ಹೆಸರುಗಳನ್ನು ಪರಿಶೀಲನೆ ಮಾಡದೇ ಒಂದು ಕೋಮಿನ ಯುವ ಉದ್ಯೋಗಿಗಳನ್ನು ಏಕೆ ಬಲಿಪಶು ಮಾಡಲು, ಆ ಮೂಲಕ ಕೋಮು ಸೌಹಾರ್ದ ಕದಡಲು ಯತ್ನಿಸಿದಿರಲ್ಲವೇ? ಎಂದು ಪತ್ರಕರ್ತರು ಕೇಳಿದರು. ಆದರೆ ಆಗಲೂ ಸಂಸದ ಸೂರ್ಯ ಅವರು ತಮ್ಮ ಹಿಂದಿನ ಉತ್ತರವನ್ನು ಪುನರಾವರ್ತಿಸಿದರು, ಅಂದರೆ “ನನಗೆ ಅಧಿಕಾರಿಗಳು ನೀಡಲಾದ” ಪಟ್ಟಿಯಿಂದ ಓದಿದ್ದೇನೆ ಎಂಬ ಉತ್ತರ!

ರಾಜಕೀಯ ಒತ್ತಡದ ಕಾರಣಕ್ಕೆ ತಮ್ಮ ಹೆಸರು ಗುರುತಿಸಿಕೊಳ್ಳಲು ಇಷ್ಟಪಡದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ದಿ ಕ್ವಿಂಟ್ ಪತ್ರಿಕೆಗೆ ಹೀಗೆ ಹೇಳಿದ್ದಾರೆ, “ಬಿಬಿಎಂಪಿಯು ವಾರ್‌ರೂಮಿನಲ್ಲಿ ಉದ್ಯೋಗದಲ್ಲಿದ್ದ ಎಲ್ಲಾ 214 ಜನರ ಪಟ್ಟಿಯನ್ನು ಹೊಂದಿದೆ. ನಿರ್ದಿಷ್ಟ ನಂಬಿಕೆಗೆ, ಧರ್ಮಕ್ಕೆ ಸೇರಿದವರ ಪ್ರತ್ಯೇಕ ಪಟ್ಟಿಯನ್ನು ನಾವು ಮಾಡಿಲ್ಲ. ಈ ಪಟ್ಟಿಯನ್ನು ನಮ್ಮ ಅಧಿಕಾರಿಗಳು ತಯಾರಿಸಿಲ್ಲ. ಅದರ ಅಗತ್ಯವೂ ಇಲ್ಲ….”

ಬಿಬಿಎಂಪಿ ವಿಷಯಗಳ ಬಗ್ಗೆ ತಿಳಿದಿರುವ ಇನ್ನೊಬ್ಬ ಅಧಿಕಾರಿ, “ಇದು ಕೋಮುವಾದಿ ನೆಲೆಯಲ್ಲಿ ನೌಕರರನ್ನು ವರ್ಗಿಕರಿಸಿದ ಪಟ್ಟಿ. ಅಂತಹ ಪಟ್ಟಿಯನ್ನು ಬಿಬಿಎಂಪಿ ಎಂದೂ ತಯಾರು ಮಾಡಿಲ್ಲ” ಎಂದಿದ್ದಾರೆ.

ಒಮ್ಮೆ ಪಟ್ಟಿಯಲ್ಲಿರುವ ಹೆಸರುಗಳನ್ನು ಸೂರ್ಯ ಓದಿದ ನಂತರ, ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಯಿತು. ಇದರಿಂದಾಗಿ ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಬಿಬಿಎಂಪಿ ಅಧಿಕಾರಿಗಳನ್ನು “ಹಿಂದೂ ಜೀವಗಳನ್ನು” ತೆಗೆದುಕೊಂಡ “ಭಯೋತ್ಪಾದಕರು” ಎಂದು ಗುರಿಯಾಗಿಸಲಾಯಿತು.

ಸೂರ್ಯ ಭೇಟಿ ನೀಡಿದಾಗ ವಾರ್‌ರೂಮಿನಲ್ಲಿದ್ದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮಿಗೆ ಕಾಲಿಟ್ಟಾಗ ಕಾಗದದ ತುಂಡೊಂದನ್ನು ತಂದಿದ್ದರು. ಅವರು ಯಾವುದೇ ಬಿಬಿಎಂಪಿ ಅಧಿಕಾರಿಯೊಂದಿಗೆ ಪಟ್ಟಿ ಅಧಿಕೃತವಾಗಿದೆಯೇ ಅಥವಾ ಯಾವುದೇ ಉದ್ದೇಶಕ್ಕಾಗಿ ಅದನ್ನು ತಯಾರಿಸಿದ್ದಾರೆ ಎಂದು ಪರಿಶೀಲಿಸಲಿಲ್ಲ” ಎಂದು ಬಿಬಿಎಂಪಿ ಅಧಿಕಾರಿಗಳು ಕ್ವಿಂಟ್‌ಗೆ ತಿಳಿಸಿದ್ದಾರೆ.  ಘಟನೆ ಕುರಿತು ಬಿಬಿಎಂಪಿ ಅಧಿಕೃತ ಹೇಳಿಕೆ ನೀಡಿಲ್ಲ.

ಪಟ್ಟಿ ಎಲ್ಲಿಂದ ಬಂತು?

ಕ್ವಿಂಟ್ ಪೋರ್ಟಲ್ ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಅನ್ನು ಸಂಪರ್ಕಿಸಿದೆ. ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಬಿಬಿಎಂಪಿ ವಾರ್‌ರೂಮಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ. ಕಾರ್ಯವಿಧಾನದ ಪ್ರಕಾರ ಅವರು ತಮ್ಮ ನೌಕರರ ಹೆಸರನ್ನು ಬಿಬಿಎಂಪಿಗೆ ನೀಡಿದ್ದಾರೆ ಎಂದು ಸಂಸ್ಥೆ ದೃಢ ಪಡಿಸಿದೆ. “ನಮ್ಮ ಪಟ್ಟಿಯಲ್ಲಿ ಹೆಚ್ಚಿನ ಹೆಸರುಗಳಿವೆ. ಕಳೆದ 10-15 ದಿನಗಳಲ್ಲಿ ನೇಮಕಗೊಂಡವರ ಹೆಸರನ್ನು ಮಾತ್ರ ಸಂಸದರು ಓದಿದ್ದಾರೆ”ಎಂದು ಕ್ರಿಸ್ಟಲ್ ಇನ್ಫೋಸಿಸ್ಟಮ್‌ನಲ್ಲಿ ಕೆಲಸ ಮಾಡುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಪನಿಯು ಪಟ್ಟಿಯನ್ನು ಸಂಸದರಿಗೆ ಒದಗಿಸಿದೆಯೇ? ಎಂಬ ಪ್ರಶ್ನೆಗೆ, “ಸಂಸದರು ಈ ಹೆಸರುಗಳನ್ನು ಹೇಗೆ ಗುರುತಿಸಿದ್ದಾರೆಂದು ನಮಗೆ ತಿಳಿದಿಲ್ಲ. ಇದು ನಮ್ಮಿಂದ ಪಡೆದ ಪಟ್ಟಿಯಲ್ಲ” ಎಂದು ಕ್ರಿಸ್ಟಲ್ ಉದ್ಯೋಗಿ ಹೇಳಿದರು.

ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, “ಸಂಸದರು ವಾರ್‌ರೂಮ್ ಮೇಲೆ ನಿಯಂತ್ರಣವನ್ನು ಬಯಸಿದ್ದರು ಮತ್ತು ನೇಮಕಾತಿ ಮತ್ತು ನಿರ್ವಹಣೆಯಲ್ಲಿ ನಿಯಂತ್ರಣ ಬಯಸಿದ್ದರು. ಅವರು ಇಲ್ಲಿಗೆ ಕಾಲಿಟ್ಟಾಗ ಅವರು ನೌಕರರನ್ನು ಭಯಭೀತರಾಗಿಸಲು ಕೋಮು ಉದ್ವೇಗವನ್ನು ಸೃಷ್ಟಿಸಲು ಪ್ರಯತ್ನಿಸಿದರು. ಇದು ಅವರ ರಾಜಕೀಯ ಶೈಲಿಗೆ ಹೊಂದುವಂತೆಯೇ ಇತ್ತು. ಈ ಪಟ್ಟಿಯನ್ನು ಸಂಸದರ ತಂಡವೇ ತಯಾರಿಸಿದಂತೆ ಕಾಣುತ್ತದೆ’ ಎಂದು ಅಧಿಕಾರಿ ಆರೋಪಿಸಿದ್ದಾರೆ. “ಸಂಸದರ ತಂಡದ ಹಲವಾರು ಸದಸ್ಯರು ಇತ್ತೀಚಿನ ದಿನಗಳಲ್ಲಿ ವಾರ್‌ರೂಮಿಗೆ ಭೇಟಿ ನೀಡಿದ್ದರು. ಅವರಲ್ಲಿ ಯಾರಾದರೂ ಪಟ್ಟಿಯನ್ನು ತಯರಿಸಬಹುದಿತ್ತು. ಈ ಪಟ್ಟಿಯು ಅಧಿಕೃತವಲ್ಲ… ಕೋಮು ವಿಭಜನೆಗಾಗಿ ರಚಿಸಲಾದ ಉದ್ದೇಶವನ್ನು ಮಾತ್ರ ಪೂರೈಸುತ್ತದೆ” ಎಂದು ಅಧಿಕಾರಿ ಹೇಳಿದರು.

ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಮೂವರು ಬಿಜೆಪಿ ಶಾಸಕರೊಂದಿಗೆ ಸಂಸದರು ಬಿಬಿಎಂಪಿ ಬಾರ್‌ರೂಮಿಗೆ ಭೇಟಿ ನೀಡಿದ್ದರು.

ಪಟ್ಟಿಯನ್ನು ಏಕೆ ತಯಾರಿಸಲಾಯಿತು?

ತೇಜಸ್ವಿ ಸೂರ್ಯ ಪ್ರವೇಶಿಸುವ ಮೊದಲು, ಅವರ ದಕ್ಷಿಣ ಬೆಂಗಳೂರು ಕಚೇರಿಯ ಮೂವರು ಸದಸ್ಯರು ವಾರ್‌ರೂಮಿಗೆ ಭೇಟಿ ನೀಡಿದ್ದರು ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಂಸದರ ತಂಡವು, ಹಾಸಿಗೆಗಳನ್ನು ಹೇಗೆ ಹಂಚಲಾಗುತ್ತದೆ ಮತ್ತು ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದೆಲ್ಲ ಪ್ರಶ್ನೆ ಮಾಡಿತು. ತಾವು ಕೊರೊನಾ ವಾರ್‌ರೂಮಿನ ಭಾಗವಾಗಬಹುದೇ ಎಂಬ ಪ್ರಶ್ನೆಗಳನ್ನು ಅವರು ಎತ್ತಿದ್ದರು. ಸರಿಯಾದ ಪ್ರಕ್ರಿಯೆಯ ಪ್ರಕಾರ ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅವರಿಗೆ ತಿಳಿಸಲಾಯಿತು. ಅದರ ಮರುದಿನವೇ, ಸಂಸದರು ಕಚೇರಿಗೆ ಭೇಟಿ (ದಾಳಿ) ನೀಡಿದರು” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಎಂ.ಪಿ ತಂಡವು ವಿನಾಶಕಾರಿ ಉದ್ದೇಶ ಹೊಂದಿದ್ದರಿಂದ ಈ ಪಟ್ಟಿಯನ್ನು ಸಂಗ್ರಹಿಸಲಾಗಿದೆ. “ಬಿಬಿಎಂಪಿ ಸಂಸದರ ಹಸ್ತಕ್ಷೇಪವನ್ನು ಬಯಸಲಿಲ್ಲ ಮತ್ತು ಇದು ಉದ್ವಿಗ್ನತೆಗೆ ಕಾರಣವಾಯಿತು. ಬಿಬಿಎಂಪಿ ಕೇವಲ ಮುಸ್ಲಿಂ ಸದಸ್ಯರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದೆ ಎಂಬ ಅಭಿಪ್ರಾಯವನ್ನು ಸೃಷ್ಟಿಸಲು ಸಂಸದರು ಬಯಸಿದ್ದರು” ಎಂದು ಅಧಿಕಾರಿಯೊಬ್ಬರು ಕ್ವಿಂಟ್‌ಗೆ ಹೇಳಿದ್ದಾರೆ.

ತೇಜಸ್ವಿ ಸೂರ್ಯ ಅವರ ಕಚೇರಿ ದಿ ಕ್ವಿಂಟ್‌ನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. “ಸಂಸದರು ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಲ್ಲಿಗೇ ಮುಗೀತು. ಮತ್ತೆ ಇನ್ನೇನನ್ನೂ ಹೇಳುವ ಅಗತ್ಯವಿಲ್ಲ” ಎಂದು ತೇಜಸ್ವಿ ಸೂರ್ಯ ಅವರ ಕಚೇರಿ ಪ್ರತಿಕ್ರಿಯೆ ನೀಡಿದೆ..

ಕೃಪೆ: ದಿ ಕ್ವಿಂಟ್


ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...