Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...