Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...