Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...