Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...