Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...