Homeಮುಖಪುಟಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

- Advertisement -
- Advertisement -

ಈ ಅಕ್ಟೋಬರ್‌ ತಿಂಗಳಲ್ಲಿ ಶೇಕಡಾ 100 ರಷ್ಟು ಸೀಟುಗಳೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಆದರೂ ಕೂಡ ಒಟಿಟಿ ವೇದಿಕೆಗಳು ಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರ ಮೇಲೆ ಹಿಡಿತ ಸಾಧಿಸುತ್ತಿವೆ.

ಕೆಲವು ಚಲನಚಿತ್ರ ತಯಾರಕರು ತಮ್ಮ ಚಲನಚಿತ್ರಗಳನ್ನು ಥಿಯೇಟರ್‌ಗಳಿಗಿಂತ ಒಟಿಟಿಯಲ್ಲಿ ಬಿಡುಗಡೆ ಮಾಡಲು ಬಯಸುತ್ತಾರೆ. ಈ ಬಾರಿ ಅಕ್ಟೋಬರ್‌ನಲ್ಲಿ ತೆರೆಕಾಣಲಿರುವ 5 ಚಿತ್ರಗಳ ಪಟ್ಟಿ ಇಲ್ಲಿದೆ.

ಚಿತ್ರ: ರತ್ನನ್ ಪ್ರಪಂಚ (ಕನ್ನಡ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 22

ಕನ್ನಡದಲ್ಲಿ ಬಹು ನಿರೀಕ್ಷಿತ ಚಿತ್ರ ಎನಿಸಿಕೊಂಡಿದ್ದ ನಟ ಡಾಲಿ ಧನಂಜಯ ಅಭಿನಯದ ರತ್ನನ್ ಪ್ರಪಂಚವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಅಕ್ಟೋಬರ್‌ 22 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಲಿದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರು ಈ ಚಿತ್ರ ಕೆಆರ್‌ಜೆ ಸ್ಟುಡಿಯೊ ಅಡಿ ನಿರ್ಮಾಣವಾಗಿದೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ಚಿತ್ರ:  ರಶ್ಮಿ ರಾಕೆಟ್ (ಹಿಂದಿ)

ಒಟಿಟಿ:  ZEE5

ಬಿಡುಗಡೆ: ಅಕ್ಟೋಬರ್‌ 15

ಬಹುಭಾಷಾ ನಟಿ ತಾಪ್ಸಿ ಪನ್ನು ನಟನೆಯ ಹಸೀನ್ ದಿಲ್ರುಬಾ ಒಟಿಟಿಯಲ್ಲಿ ಬಿಡುಗಡೆಯಾದ ಬಳಿಕ ಈಗ ಮತ್ತೊಂದು ಚಿತ್ರ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ತಾಪ್ಸಿ ನಟನೆಯ ರಶ್ಮಿ ರಾಕೆಟ್ ಅಕ್ಟೋಬರ್‌ 15 ರಂದು ZEE5ನಲ್ಲಿ ಬಿಡುಗಡೆಯಾಗಲಿದೆ.

ರಶ್ಮಿ ರಾಕೆಟ್‌ನಲ್ಲಿ ಕಛ್ ಮೂಲದ ಓಟಗಾರ್ತಿಯಾಗಿ ನಟಿಸುತ್ತಿದ್ದು, ಅಥ್ಲೆಟಿಕ್ ಕ್ರೀಡಾಪಟುವಾಗಲು ಅವರು ಪಟ್ಟ ಕಷ್ಟಗಳು, ಲಿಂಗತ್ವ ಪರೀಕ್ಷೆಯ ಸವಾಲುಗಳು ಮತ್ತು ಆಕೆ ಪಡೆದ ಗೆಲುವಿನ ರುಚಿಯುಣಿಸಲು ತಾಪ್ಸಿ ರೆಡಿಯಾಗಿದ್ದಾರೆ. ಚಿತ್ರಕ್ಕೆ ಆಕರ್ಷ್ ಖುರಾನಾ ನಿರ್ದೇಶನವಿದೆ.

 

ಇದನ್ನೂ ಓದಿ: ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ಚಿತ್ರ: ಸರ್ದಾರ್ ಉಧಮ್ ಸಿಂಗ್ (ಹಿಂದಿ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 15

ಗುಲಾಬೊ ಸೀತಾಬೊ ನಿರ್ದೇಶಕ ಶೂಜಿತ್ ಸಿರ್ಕಾರ್ ಮತ್ತು ನಿರ್ಮಾಪಕ ರೋನಿ ಲಾಹಿರಿ ಅವರ ಸರ್ದಾರ್ ಉಧಮ್ ಸಿಂಗ್ ಅಮೆಜಾನ್‌ ಪ್ರೈಂನಲ್ಲಿ ಅ. 15 ರಂದು ಬಿಡುಗಡೆಯಾಗುತ್ತಿದೆ.

ಉರಿ ಚಿತ್ರದ ಮೂಲಕ ಮುನ್ನೆಲೆಗೆ ಬಂದ ನಟ ವಿಕಿ ಕೌಶಲ್ ಈ ಚಿತ್ರದಲ್ಲಿ ಸರ್ದಾರ್ ಉಧಮ್ ಆಗಿ ಅಭಿನಯಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಉಧಮ್ ಸಿಂಗ್ ಅವರ ಜೀವನ ಕಥೆಯನ್ನು ಚಿತ್ರ ಹೊಂದಿದೆ.

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಸೇಡು ತೀರಿಸಿಕೊಳ್ಳಲು ಹೊರಟ ಹೋರಾಟಗಾರ ಉಧಮ್ ಸಿಂಗ್ ಕಥೆ ಇದು ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಚಿತ್ರ: ಸನಕ್ (ಹಿಂದಿ)

ಒಟಿಟಿ: ಡಿಸ್ನಿ+ಹಾಟ್ ಸ್ಟಾರ್

ಬಿಡುಗಡೆ: ಅಕ್ಟೋಬರ್‌ 15

ಬಾಲಿವುಡ್ ನಟ ವಿದ್ಯುತ್ ಜಮ್‌ವಾಲ್ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸನಕ್‘ ಸಿನಿಮಾ ಅಕ್ಟೋಬರ್ 15 ರಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ. ಕಾನಿಶಕ್ ವರ್ಮಾ ನಿರ್ದೇಶನದ ಸಿನಿಮಾವನ್ನು ವಿಪುಲ್ ಅಮೃತ್‌ಲಾಲ್ ಶಾ ಹಾಗೂ ಜೀ ಸ್ಟುಡಿಯೊ ನಿರ್ಮಾಣ ಮಾಡಿದೆ

ಆಸ್ಪತ್ರೆಯೊಂದಕ್ಕೆ ನುಗ್ಗಿ ಅಲ್ಲಿನ ರೋಗಿಗಳನ್ನು, ನಾಯಕನ ಪತ್ನಿಯನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವ ಉಗ್ರರಿಂದ ಹೇಗೆ ಎಲ್ಲರನ್ನೂ ನಾಯಕ ಪಾರು ಮಾಡುತ್ತಾನೆ ಎಂಬ ಕಥೆಯನ್ನು ಈ ಚಿತ್ರ ಹೊಂದಿದೆ ಎಂಬ ಸುಳಿವು ಟ್ರೇಲರ್ ನೀಡುತ್ತದೆ.

 

ಚಿತ್ರ:  ಬ್ರಹ್ಮಂ (ಮಲಯಾಳಂ)

ಒಟಿಟಿ: ಅಮೆಜಾನ್ ಪ್ರೈಂ

ಬಿಡುಗಡೆ: ಅಕ್ಟೋಬರ್‌ 07

ನಟ ಪೃಥ್ವಿರಾಜ್ ಅಭಿನಯದ ಬ್ರಹ್ಮಂ ಚಿತ್ರ ಆಯುಷ್ಮಾನ್ ಖುರಾನಾ ಅಭಿನಯದ ಹಿಂದಿ ಚಿತ್ರ ಅಂಧಧೂನ್‌ನ ಅಧಿಕೃತ ರಿಮೇಕ್ ಆಗಿದೆ. ಅಕ್ಟೋಬರ್ 7 ರಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಕನ್ಯಾದಾನ್‌ ಅಲ್ಲ, ಕನ್ಯಾಮಾನ್‌ ಹೊಸ ಐಡಿಯಾ ಎಂದ ಜಾಹೀರಾತು ವಿರುದ್ಧ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...