Homeಅಂಕಣಗಳುಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಸಾವನ್ನು ಸಂಭ್ರಮಿಸುವ, ದ್ವೇಷವೇ ರಾಜಕೀಯವಾಗಿರುವ ಸಾಮಾಜಿಕ ಬಿಕ್ಕಟ್ಟಿನಲ್ಲಿ ನಮ್ಮ ದೇಶ

- Advertisement -
- Advertisement -

| ಸೋಮಶೇಖರ್ ಚಲ್ಯ |

ಭಾರತದ ಸ್ವಾತಂತ್ರ್ಯ ಚಳುವಳಿಯ ಹಾದಿಯಲ್ಲಿ ಶಾಂತಿ ಮತ್ತು ಅಹಿಂಸೆಗಳೇ ಧ್ಯೇಯವಾಗಿ ಬೆಳೆದುಬಂದಿದ್ದವು. ಹಿಂಸೆಯಿಂದ ಯಾವುದನ್ನೂ ಗೆಲ್ಲಲಾಗುವುದಿಲ್ಲ, ಶಾಂತಿಯಿಂದ ಹೋರಾಡೋಣ ಸ್ವಾತಂತ್ರ್ಯ ಪಡೆಯೋಣ ಎಂಬುದು ಗಾಂಧಿಯವರ ಉದ್ದೇಶವಾಗಿತ್ತು. ಇದು ಇಡೀ ಜಗತ್ತಿಗೆ ಭಾರತವೊಂದು ಶಾಂತಿಪ್ರಿಯ ರಾಷ್ಟ್ರವೆಂಬುದನ್ನು ತೋರಿಸಿತ್ತು.

ಅಂತೆಯೇ ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲೂ ಎಲ್ಲರನ್ನು ಸಮಭಾವದಿಂದ ಕಾಣುವ, ಅಭಿವ್ಯಕ್ತಿ ಮತು ವ್ಯಕ್ತಿ ಗೌರವದೊಂದಿಗೆ ಭಾತೃಭಾವನೆಯನ್ನು ಬೆಳೆಸುವುದು ನಮ್ಮ ಆಧ್ಯತೆಯೆಂದು ¨ರೆದುಕೊಂಡಿದ್ದೇವೆ. ಆದರೆ ಗಾಂಧಿ ಹೇಳಿದ ಶಾಂತಿ ಮಂತ್ರವನ್ನು ಇತಿಹಾಸದ ಪುಟದಲ್ಲಿಯೂ, ಸಂವಿಧಾನದ ಆಶಯವನ್ನು ಅದರ ಪ್ರಸ್ತಾವನೆಯಲ್ಲೂ ಮಾತ್ರ ಓದಿಕೊಳ್ಳುವಂತಹ ಅಧೋಗತಿಗೆ ಭಾರತವನ್ನು ಕೊಂಡೊಯ್ಯಲಾಗುತ್ತಿದೆ.

ಜೂನ್ 12ರ ಬುಧವಾರ ಪ್ರಕಟಗೊಂಡ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಸ್ಥಾನ ಕುಸಿಯುತ್ತಾ ಸಾಗಿದೆ. 163 ರಾಷ್ಟ್ರಗಳ ಪೈಕಿ ಭಾರತ 141ನೇ ಸ್ಥಾನವನ್ನು ಪಡೆದುಕೊಂಡಿರುವುದು ಆಘಾತಕಾರಿ ಸಂದೇಶವನ್ನು ರವಾನಿಸಿದೆ. ಬಹಶಃ ಶಾಂತಿ ರಾಷ್ಟ್ರಗಳ ಪಟ್ಟಿಯೆಂದು ಕರೆಯುದಕ್ಕಿಂತ ಅಶಾಂತಿ ರಾಷ್ಟ್ರಗಳ ಪಟ್ಟಿ ಎಂದು ನೋಡಿದರೆ ಭಾರತ ಮೊದಲ 22ನೇ ಸ್ಥಾನದಲ್ಲಿದೆ. ಕಳೆದ ವರ್ಷ 136ನೇ ಸ್ಥಾನ ಪಡೆದುಕೊಂಡಿದ್ದ ಭಾರತ ಈ ಭಾರಿ 141ನೇ ಸ್ಥಾನ್ಕಕೆ ಕುಸಿದಿದೆ. ಇದು ದೇಶ ಎಂತಹ ಅಸಹನೆ, ಹಿಂಸಾಚಾರದೆಡೆಗೆ ಸಾಗಿದೆ ಎಂಬುದನ್ನು ತೋರಿಸುತ್ತಿದೆ. ಇದಕ್ಕೆ ಇತ್ತೀಚಿನ ಹಲವು ವಿದ್ಯಾಮಾನಗಳು ಸಾಕ್ಷಿಯಾಗಿವೆ.

ಗಿರೀಶ್ ಕಾರ್ನಾಡರು ನಿಧನರಾದ ಸಂದರ್ಭದಲ್ಲಿ ಅವರ ಸಾವನ್ನು ಸಂಭ್ರಮಿಸುವ ವಿಕೃತಿಯನ್ನು ಮೆರೆಯುವ ಮಟ್ಟಿಗೆ ಜನರ ಆಲೋಚನೆಗಳು ವಿಷಕಾರಿಯಾಗುತ್ತಿವೆ. ಗೌರಿ ಲಂಕೇಶ್ ಹತ್ಯೆಗೆ ಅಂತಾರಾಷ್ಟ್ರೀಯ ಮಟ್ಟಿದಲ್ಲಿ ಮನಸ್ಸುಗಳು ಮರುಗಿದ್ದವು. ಆದರೆ ನಮ್ಮದೇ ದೇಶದ/ರಾಜ್ಯದ ಕೆಲವು ಹೀನ ಮನಸ್ಸುಗಳು ಗೌರಿಯವರ ಸಾವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದ್ದವು.

ಭಾರತದ ಸಂಸ್ಕøತಿಯೆಂದರೆ ಸಾವಿಗೆ ಮರುಗುವ, ನೋವಿಗೆ ಸ್ಪಂದಿಸುವುದಾಗಿತ್ತು. ಸರ್ವಜನಾಂಗದ ಶಾಂತಿಯ ತೋಟವಾಗಬೇಕಿದ್ದ ನಮ್ಮ ರಾಷ್ಟ್ರ ಇಂದು ಕೋಮು ಭಾವನೆಯಿಂದ ಕ್ರೌರ್ಯವನ್ನು ತುಂಬಿಕೊಳ್ಳುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರಗಳು ಯಾರೊಬ್ಬರೂ ಮೃತಪಟ್ಟರೂ, ಹಿಂದೂಗಳ ಹತ್ಯೆಯೆಂದು ಬೊಬ್ಬೆ ಹೊಡೆಯುತ್ತಾ ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸಿ ಕೋಮು ವಿಷವನ್ನು ಭಿತ್ತುತ್ತುದ್ದಾರೆ. ಇದೇ ಸಂದರ್ಭದಲ್ಲಿ ಯಾವುದೇ ಮುಸ್ಲಿಮನಾಗಲೀ/ಪ್ರಗತಿಪರರಾಗಲಿ ಅಥವಾ ಕೋಮು ವಿರೋಧಿಯಾಗಲೀ ಸಂಘಪರಿವಾರದ ಅಥವಾ ಬಿಜೆಪಿಯ ಕಾರ್ಯಕರ್ತರು ಮರಣ ಹೊಂದಿದ ಸಂದರ್ಭದಲ್ಲಿ ಅಬ್ಬಾ ಸತ್ತನೆಂದು ಅವರ ಸಾವನ್ನು ಸಂಭ್ರಮಿಸಿದ ಉದಾಹಣೆಗಳಿಲ್ಲ. ಆದರೆ ತಮ್ಮ ವಿರೋಧಿಗಳ ಸಾವನ್ನು ಸಂಭ್ರಮಿಸುವ ಅನಾಗರಿಕ ಸಂಸ್ಕøತಿ ಸಂಘಪರಿವಾರದಲ್ಲಿ ಬೆಳೆದು ಇಂದು ರಾಷ್ಟ್ರವನ್ನೇ ವ್ಯಾಪಿಸಿದೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಶುರುವಾದ ರಾಜಕೀಯ ಹಿಂಸಾಚಾರ ಇಂದಿಗೂ ನಿಂತಿಲ್ಲ. ಚುನಾವಣಾ ಫಲಿತಾಂಶದ ನಂತರ ಒಟ್ಟು 13 ಜನ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಈ ರಾಜಕೀಯ ಜಗಳವನ್ನು ಕೋಮುಗಲಭೆಯಾಗಿ ತಿರುಚುವ ಹುನ್ನಾರನ್ನು ಬಿಜೆಪಿ ನಾಯಕರು ಎಣೆಯುತ್ತಿದ್ದಾರೆ. ಸದಾ ಕೋಮುವಾದ, ಗಲಭೆ, ಹತ್ಯೆಗಳನ್ನೇ ರಾಜಕೀಯ ದಾಳವಾಗಿಸಿಕೊಂಡಿರುವ ಬಿಜೆಪಿ ಮತ್ತು ಸಂಘಪರಿವಾರ ಗಾಂಧಿ ಹತ್ಯೆ ಮಾಡಿದ ಗೂಡ್ಸೆಯನ್ನು ಪೂಜಿಸುವ, ಗೋದ್ರಾ ಹತ್ಯೆ, ಬಾಬರಿ ಮಸೀದಿ, ಬಾಬಾಬುಡನ್‍ಗಿರಿ, ಶಬರಿಮಲೆಗಳಂತ ಇಶ್ಯೂಗಳನ್ನು ಗಲಭೆ, ಹಿಂಸಾಚಾರಗಳಿಗೆ ತಿರುಗಿಸಿ ರಾಜಕೀಯ ಲಾಭ ಪಡೆಯುತ್ತಾ ದೇಶದಲ್ಲಿ ಅಶಾಂತಿ ಮತ್ತು ಅಪಾಯಕಾರಿ ವಾತಾವರಣವನ್ನು ಸೃಷ್ಟಿಮಾಡುತ್ತಿವೆ.

ಪ್ರಪಂಚಕ್ಕೇ ಪ್ರೀತಿ, ಶಾಂತಿಯಯ ಸಂದೇಶವನ್ನು ಸಾರಿದ ಬುದ್ದ ಮತ್ತು ಗಾಂಧಿ ಹುಟ್ಟಿದ ದೇಶವಿಂದು ದ್ವೇಷ, ಅಸಹಿಷ್ಣುತೆ, ಹಿಂಸಾಚಾರದ ದಳ್ಳುರಿಯಲ್ಲಿ ಸಿಕ್ಕು ನಲುಗುತ್ತಿದೆ. “ಬಿತ್ತಿದನ್ನೇ ಫಸಲಾಗಿ ಪಡೆಯುತ್ತೇವೆ. ಹಾಗಾಗಿ ಬಿತ್ತುವುದಾದರೆ ಮಾನವೀಯತೆ ಮತ್ತು ಸೌಹಾರ್ದತೆಯನ್ನು ಬಿತ್ತೋಣ.” ಎಂಬ ಮಾಜಿ ಸಿಎಂ ಸಿದ್ಧರಾಮಯ್ಯವನರ ಟ್ವೀಟ್ ಸಾವನ್ನು ಸಂಭ್ರನಿಸುವ, ದ್ವೇಷವನ್ನೇ ದಾಳ ಮಾಡಿಕೊಂಡಿರುವವರ ಮನಮುಟ್ಟುವಂತದ್ದು. ಆದರೆ ಅದಕ್ಕೆ ಅವರು ಸತ್ತಾಗ ದೀಪಾವಳಿ ಆಚರಿಸುತ್ತೇವೆ ಎಂದು ಪ್ರತ್ಯುತ್ತರ ಕೊಟ್ಟವರ ಮನಸ್ಥಿತಿಯನ್ನು ತಿದ್ದುವುದಾದರೂ ಹೇಗೆ?

ಮತ್ತೊಂದು ವಿಚಾರವೆಂದರೆ 2008ರಿಂದ ಇಲ್ಲಿಯವರೆಗೆ ಐಸ್‍ಲ್ಯಾಂಡ್ ಜಾಗತಿಕ ಶಾಂತಿ ಸೂಚ್ಯಂಕದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಭಯೋತ್ಪಾದಕ ರಾಷ್ಟ್ರವೆಂದು ಬಿಂಬಿತವಾಗಿರುವ ಪಾಕಿಸ್ಥಾನ 153ನೇ ಸ್ಥಾನದಲ್ಲಿದೆ. ಭಾರತದ 141ನೇ ಸ್ಥಾನಕ್ಕೂ ಪಾಕಿಸ್ತಾನದ ಸ್ಥಾನಕ್ಕೂ ಅಂತಹ ಅಂತರವೇನು ಇಲ್ಲ. ಭಾರತವನ್ನು ಪಾಕಿಸ್ತಾನದೆಡೆಗೆ ಸಾಗಲು ಬಿಡದೆ, ಅದನ್ನು ಐಸ್‍ಲ್ಯಾಂಡಿನೆಡೆಗೆ ಸ್ನೇಹ, ಪ್ರೀತಿ, ಸಹಭಾಳ್ವೆ, ಸೌಹಾದರ್ತೆಯ ಮೂಲಕ ಕೊಂಡೊಯ್ಯುವ ಹೊಣೆ ಪ್ರತಿಯೊಬ್ಬ ಭಾರತೀಯರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...