Homeಅಂಕಣಗಳುಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಸಾವನ್ನು ಸಂಭ್ರಮಿಸುವ, ದ್ವೇಷವೇ ರಾಜಕೀಯವಾಗಿರುವ ಸಾಮಾಜಿಕ ಬಿಕ್ಕಟ್ಟಿನಲ್ಲಿ ನಮ್ಮ ದೇಶ

- Advertisement -
- Advertisement -

| ಸೋಮಶೇಖರ್ ಚಲ್ಯ |

ಭಾರತದ ಸ್ವಾತಂತ್ರ್ಯ ಚಳುವಳಿಯ ಹಾದಿಯಲ್ಲಿ ಶಾಂತಿ ಮತ್ತು ಅಹಿಂಸೆಗಳೇ ಧ್ಯೇಯವಾಗಿ ಬೆಳೆದುಬಂದಿದ್ದವು. ಹಿಂಸೆಯಿಂದ ಯಾವುದನ್ನೂ ಗೆಲ್ಲಲಾಗುವುದಿಲ್ಲ, ಶಾಂತಿಯಿಂದ ಹೋರಾಡೋಣ ಸ್ವಾತಂತ್ರ್ಯ ಪಡೆಯೋಣ ಎಂಬುದು ಗಾಂಧಿಯವರ ಉದ್ದೇಶವಾಗಿತ್ತು. ಇದು ಇಡೀ ಜಗತ್ತಿಗೆ ಭಾರತವೊಂದು ಶಾಂತಿಪ್ರಿಯ ರಾಷ್ಟ್ರವೆಂಬುದನ್ನು ತೋರಿಸಿತ್ತು.

ಅಂತೆಯೇ ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲೂ ಎಲ್ಲರನ್ನು ಸಮಭಾವದಿಂದ ಕಾಣುವ, ಅಭಿವ್ಯಕ್ತಿ ಮತು ವ್ಯಕ್ತಿ ಗೌರವದೊಂದಿಗೆ ಭಾತೃಭಾವನೆಯನ್ನು ಬೆಳೆಸುವುದು ನಮ್ಮ ಆಧ್ಯತೆಯೆಂದು ¨ರೆದುಕೊಂಡಿದ್ದೇವೆ. ಆದರೆ ಗಾಂಧಿ ಹೇಳಿದ ಶಾಂತಿ ಮಂತ್ರವನ್ನು ಇತಿಹಾಸದ ಪುಟದಲ್ಲಿಯೂ, ಸಂವಿಧಾನದ ಆಶಯವನ್ನು ಅದರ ಪ್ರಸ್ತಾವನೆಯಲ್ಲೂ ಮಾತ್ರ ಓದಿಕೊಳ್ಳುವಂತಹ ಅಧೋಗತಿಗೆ ಭಾರತವನ್ನು ಕೊಂಡೊಯ್ಯಲಾಗುತ್ತಿದೆ.

ಜೂನ್ 12ರ ಬುಧವಾರ ಪ್ರಕಟಗೊಂಡ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಸ್ಥಾನ ಕುಸಿಯುತ್ತಾ ಸಾಗಿದೆ. 163 ರಾಷ್ಟ್ರಗಳ ಪೈಕಿ ಭಾರತ 141ನೇ ಸ್ಥಾನವನ್ನು ಪಡೆದುಕೊಂಡಿರುವುದು ಆಘಾತಕಾರಿ ಸಂದೇಶವನ್ನು ರವಾನಿಸಿದೆ. ಬಹಶಃ ಶಾಂತಿ ರಾಷ್ಟ್ರಗಳ ಪಟ್ಟಿಯೆಂದು ಕರೆಯುದಕ್ಕಿಂತ ಅಶಾಂತಿ ರಾಷ್ಟ್ರಗಳ ಪಟ್ಟಿ ಎಂದು ನೋಡಿದರೆ ಭಾರತ ಮೊದಲ 22ನೇ ಸ್ಥಾನದಲ್ಲಿದೆ. ಕಳೆದ ವರ್ಷ 136ನೇ ಸ್ಥಾನ ಪಡೆದುಕೊಂಡಿದ್ದ ಭಾರತ ಈ ಭಾರಿ 141ನೇ ಸ್ಥಾನ್ಕಕೆ ಕುಸಿದಿದೆ. ಇದು ದೇಶ ಎಂತಹ ಅಸಹನೆ, ಹಿಂಸಾಚಾರದೆಡೆಗೆ ಸಾಗಿದೆ ಎಂಬುದನ್ನು ತೋರಿಸುತ್ತಿದೆ. ಇದಕ್ಕೆ ಇತ್ತೀಚಿನ ಹಲವು ವಿದ್ಯಾಮಾನಗಳು ಸಾಕ್ಷಿಯಾಗಿವೆ.

ಗಿರೀಶ್ ಕಾರ್ನಾಡರು ನಿಧನರಾದ ಸಂದರ್ಭದಲ್ಲಿ ಅವರ ಸಾವನ್ನು ಸಂಭ್ರಮಿಸುವ ವಿಕೃತಿಯನ್ನು ಮೆರೆಯುವ ಮಟ್ಟಿಗೆ ಜನರ ಆಲೋಚನೆಗಳು ವಿಷಕಾರಿಯಾಗುತ್ತಿವೆ. ಗೌರಿ ಲಂಕೇಶ್ ಹತ್ಯೆಗೆ ಅಂತಾರಾಷ್ಟ್ರೀಯ ಮಟ್ಟಿದಲ್ಲಿ ಮನಸ್ಸುಗಳು ಮರುಗಿದ್ದವು. ಆದರೆ ನಮ್ಮದೇ ದೇಶದ/ರಾಜ್ಯದ ಕೆಲವು ಹೀನ ಮನಸ್ಸುಗಳು ಗೌರಿಯವರ ಸಾವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದ್ದವು.

ಭಾರತದ ಸಂಸ್ಕøತಿಯೆಂದರೆ ಸಾವಿಗೆ ಮರುಗುವ, ನೋವಿಗೆ ಸ್ಪಂದಿಸುವುದಾಗಿತ್ತು. ಸರ್ವಜನಾಂಗದ ಶಾಂತಿಯ ತೋಟವಾಗಬೇಕಿದ್ದ ನಮ್ಮ ರಾಷ್ಟ್ರ ಇಂದು ಕೋಮು ಭಾವನೆಯಿಂದ ಕ್ರೌರ್ಯವನ್ನು ತುಂಬಿಕೊಳ್ಳುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರಗಳು ಯಾರೊಬ್ಬರೂ ಮೃತಪಟ್ಟರೂ, ಹಿಂದೂಗಳ ಹತ್ಯೆಯೆಂದು ಬೊಬ್ಬೆ ಹೊಡೆಯುತ್ತಾ ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸಿ ಕೋಮು ವಿಷವನ್ನು ಭಿತ್ತುತ್ತುದ್ದಾರೆ. ಇದೇ ಸಂದರ್ಭದಲ್ಲಿ ಯಾವುದೇ ಮುಸ್ಲಿಮನಾಗಲೀ/ಪ್ರಗತಿಪರರಾಗಲಿ ಅಥವಾ ಕೋಮು ವಿರೋಧಿಯಾಗಲೀ ಸಂಘಪರಿವಾರದ ಅಥವಾ ಬಿಜೆಪಿಯ ಕಾರ್ಯಕರ್ತರು ಮರಣ ಹೊಂದಿದ ಸಂದರ್ಭದಲ್ಲಿ ಅಬ್ಬಾ ಸತ್ತನೆಂದು ಅವರ ಸಾವನ್ನು ಸಂಭ್ರಮಿಸಿದ ಉದಾಹಣೆಗಳಿಲ್ಲ. ಆದರೆ ತಮ್ಮ ವಿರೋಧಿಗಳ ಸಾವನ್ನು ಸಂಭ್ರಮಿಸುವ ಅನಾಗರಿಕ ಸಂಸ್ಕøತಿ ಸಂಘಪರಿವಾರದಲ್ಲಿ ಬೆಳೆದು ಇಂದು ರಾಷ್ಟ್ರವನ್ನೇ ವ್ಯಾಪಿಸಿದೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಶುರುವಾದ ರಾಜಕೀಯ ಹಿಂಸಾಚಾರ ಇಂದಿಗೂ ನಿಂತಿಲ್ಲ. ಚುನಾವಣಾ ಫಲಿತಾಂಶದ ನಂತರ ಒಟ್ಟು 13 ಜನ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಈ ರಾಜಕೀಯ ಜಗಳವನ್ನು ಕೋಮುಗಲಭೆಯಾಗಿ ತಿರುಚುವ ಹುನ್ನಾರನ್ನು ಬಿಜೆಪಿ ನಾಯಕರು ಎಣೆಯುತ್ತಿದ್ದಾರೆ. ಸದಾ ಕೋಮುವಾದ, ಗಲಭೆ, ಹತ್ಯೆಗಳನ್ನೇ ರಾಜಕೀಯ ದಾಳವಾಗಿಸಿಕೊಂಡಿರುವ ಬಿಜೆಪಿ ಮತ್ತು ಸಂಘಪರಿವಾರ ಗಾಂಧಿ ಹತ್ಯೆ ಮಾಡಿದ ಗೂಡ್ಸೆಯನ್ನು ಪೂಜಿಸುವ, ಗೋದ್ರಾ ಹತ್ಯೆ, ಬಾಬರಿ ಮಸೀದಿ, ಬಾಬಾಬುಡನ್‍ಗಿರಿ, ಶಬರಿಮಲೆಗಳಂತ ಇಶ್ಯೂಗಳನ್ನು ಗಲಭೆ, ಹಿಂಸಾಚಾರಗಳಿಗೆ ತಿರುಗಿಸಿ ರಾಜಕೀಯ ಲಾಭ ಪಡೆಯುತ್ತಾ ದೇಶದಲ್ಲಿ ಅಶಾಂತಿ ಮತ್ತು ಅಪಾಯಕಾರಿ ವಾತಾವರಣವನ್ನು ಸೃಷ್ಟಿಮಾಡುತ್ತಿವೆ.

ಪ್ರಪಂಚಕ್ಕೇ ಪ್ರೀತಿ, ಶಾಂತಿಯಯ ಸಂದೇಶವನ್ನು ಸಾರಿದ ಬುದ್ದ ಮತ್ತು ಗಾಂಧಿ ಹುಟ್ಟಿದ ದೇಶವಿಂದು ದ್ವೇಷ, ಅಸಹಿಷ್ಣುತೆ, ಹಿಂಸಾಚಾರದ ದಳ್ಳುರಿಯಲ್ಲಿ ಸಿಕ್ಕು ನಲುಗುತ್ತಿದೆ. “ಬಿತ್ತಿದನ್ನೇ ಫಸಲಾಗಿ ಪಡೆಯುತ್ತೇವೆ. ಹಾಗಾಗಿ ಬಿತ್ತುವುದಾದರೆ ಮಾನವೀಯತೆ ಮತ್ತು ಸೌಹಾರ್ದತೆಯನ್ನು ಬಿತ್ತೋಣ.” ಎಂಬ ಮಾಜಿ ಸಿಎಂ ಸಿದ್ಧರಾಮಯ್ಯವನರ ಟ್ವೀಟ್ ಸಾವನ್ನು ಸಂಭ್ರನಿಸುವ, ದ್ವೇಷವನ್ನೇ ದಾಳ ಮಾಡಿಕೊಂಡಿರುವವರ ಮನಮುಟ್ಟುವಂತದ್ದು. ಆದರೆ ಅದಕ್ಕೆ ಅವರು ಸತ್ತಾಗ ದೀಪಾವಳಿ ಆಚರಿಸುತ್ತೇವೆ ಎಂದು ಪ್ರತ್ಯುತ್ತರ ಕೊಟ್ಟವರ ಮನಸ್ಥಿತಿಯನ್ನು ತಿದ್ದುವುದಾದರೂ ಹೇಗೆ?

ಮತ್ತೊಂದು ವಿಚಾರವೆಂದರೆ 2008ರಿಂದ ಇಲ್ಲಿಯವರೆಗೆ ಐಸ್‍ಲ್ಯಾಂಡ್ ಜಾಗತಿಕ ಶಾಂತಿ ಸೂಚ್ಯಂಕದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಭಯೋತ್ಪಾದಕ ರಾಷ್ಟ್ರವೆಂದು ಬಿಂಬಿತವಾಗಿರುವ ಪಾಕಿಸ್ಥಾನ 153ನೇ ಸ್ಥಾನದಲ್ಲಿದೆ. ಭಾರತದ 141ನೇ ಸ್ಥಾನಕ್ಕೂ ಪಾಕಿಸ್ತಾನದ ಸ್ಥಾನಕ್ಕೂ ಅಂತಹ ಅಂತರವೇನು ಇಲ್ಲ. ಭಾರತವನ್ನು ಪಾಕಿಸ್ತಾನದೆಡೆಗೆ ಸಾಗಲು ಬಿಡದೆ, ಅದನ್ನು ಐಸ್‍ಲ್ಯಾಂಡಿನೆಡೆಗೆ ಸ್ನೇಹ, ಪ್ರೀತಿ, ಸಹಭಾಳ್ವೆ, ಸೌಹಾದರ್ತೆಯ ಮೂಲಕ ಕೊಂಡೊಯ್ಯುವ ಹೊಣೆ ಪ್ರತಿಯೊಬ್ಬ ಭಾರತೀಯರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...