Homeಅಂಕಣಗಳುಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಸಾವನ್ನು ಸಂಭ್ರಮಿಸುವ, ದ್ವೇಷವೇ ರಾಜಕೀಯವಾಗಿರುವ ಸಾಮಾಜಿಕ ಬಿಕ್ಕಟ್ಟಿನಲ್ಲಿ ನಮ್ಮ ದೇಶ

- Advertisement -
- Advertisement -

| ಸೋಮಶೇಖರ್ ಚಲ್ಯ |

ಭಾರತದ ಸ್ವಾತಂತ್ರ್ಯ ಚಳುವಳಿಯ ಹಾದಿಯಲ್ಲಿ ಶಾಂತಿ ಮತ್ತು ಅಹಿಂಸೆಗಳೇ ಧ್ಯೇಯವಾಗಿ ಬೆಳೆದುಬಂದಿದ್ದವು. ಹಿಂಸೆಯಿಂದ ಯಾವುದನ್ನೂ ಗೆಲ್ಲಲಾಗುವುದಿಲ್ಲ, ಶಾಂತಿಯಿಂದ ಹೋರಾಡೋಣ ಸ್ವಾತಂತ್ರ್ಯ ಪಡೆಯೋಣ ಎಂಬುದು ಗಾಂಧಿಯವರ ಉದ್ದೇಶವಾಗಿತ್ತು. ಇದು ಇಡೀ ಜಗತ್ತಿಗೆ ಭಾರತವೊಂದು ಶಾಂತಿಪ್ರಿಯ ರಾಷ್ಟ್ರವೆಂಬುದನ್ನು ತೋರಿಸಿತ್ತು.

ಅಂತೆಯೇ ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲೂ ಎಲ್ಲರನ್ನು ಸಮಭಾವದಿಂದ ಕಾಣುವ, ಅಭಿವ್ಯಕ್ತಿ ಮತು ವ್ಯಕ್ತಿ ಗೌರವದೊಂದಿಗೆ ಭಾತೃಭಾವನೆಯನ್ನು ಬೆಳೆಸುವುದು ನಮ್ಮ ಆಧ್ಯತೆಯೆಂದು ¨ರೆದುಕೊಂಡಿದ್ದೇವೆ. ಆದರೆ ಗಾಂಧಿ ಹೇಳಿದ ಶಾಂತಿ ಮಂತ್ರವನ್ನು ಇತಿಹಾಸದ ಪುಟದಲ್ಲಿಯೂ, ಸಂವಿಧಾನದ ಆಶಯವನ್ನು ಅದರ ಪ್ರಸ್ತಾವನೆಯಲ್ಲೂ ಮಾತ್ರ ಓದಿಕೊಳ್ಳುವಂತಹ ಅಧೋಗತಿಗೆ ಭಾರತವನ್ನು ಕೊಂಡೊಯ್ಯಲಾಗುತ್ತಿದೆ.

ಜೂನ್ 12ರ ಬುಧವಾರ ಪ್ರಕಟಗೊಂಡ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಸ್ಥಾನ ಕುಸಿಯುತ್ತಾ ಸಾಗಿದೆ. 163 ರಾಷ್ಟ್ರಗಳ ಪೈಕಿ ಭಾರತ 141ನೇ ಸ್ಥಾನವನ್ನು ಪಡೆದುಕೊಂಡಿರುವುದು ಆಘಾತಕಾರಿ ಸಂದೇಶವನ್ನು ರವಾನಿಸಿದೆ. ಬಹಶಃ ಶಾಂತಿ ರಾಷ್ಟ್ರಗಳ ಪಟ್ಟಿಯೆಂದು ಕರೆಯುದಕ್ಕಿಂತ ಅಶಾಂತಿ ರಾಷ್ಟ್ರಗಳ ಪಟ್ಟಿ ಎಂದು ನೋಡಿದರೆ ಭಾರತ ಮೊದಲ 22ನೇ ಸ್ಥಾನದಲ್ಲಿದೆ. ಕಳೆದ ವರ್ಷ 136ನೇ ಸ್ಥಾನ ಪಡೆದುಕೊಂಡಿದ್ದ ಭಾರತ ಈ ಭಾರಿ 141ನೇ ಸ್ಥಾನ್ಕಕೆ ಕುಸಿದಿದೆ. ಇದು ದೇಶ ಎಂತಹ ಅಸಹನೆ, ಹಿಂಸಾಚಾರದೆಡೆಗೆ ಸಾಗಿದೆ ಎಂಬುದನ್ನು ತೋರಿಸುತ್ತಿದೆ. ಇದಕ್ಕೆ ಇತ್ತೀಚಿನ ಹಲವು ವಿದ್ಯಾಮಾನಗಳು ಸಾಕ್ಷಿಯಾಗಿವೆ.

ಗಿರೀಶ್ ಕಾರ್ನಾಡರು ನಿಧನರಾದ ಸಂದರ್ಭದಲ್ಲಿ ಅವರ ಸಾವನ್ನು ಸಂಭ್ರಮಿಸುವ ವಿಕೃತಿಯನ್ನು ಮೆರೆಯುವ ಮಟ್ಟಿಗೆ ಜನರ ಆಲೋಚನೆಗಳು ವಿಷಕಾರಿಯಾಗುತ್ತಿವೆ. ಗೌರಿ ಲಂಕೇಶ್ ಹತ್ಯೆಗೆ ಅಂತಾರಾಷ್ಟ್ರೀಯ ಮಟ್ಟಿದಲ್ಲಿ ಮನಸ್ಸುಗಳು ಮರುಗಿದ್ದವು. ಆದರೆ ನಮ್ಮದೇ ದೇಶದ/ರಾಜ್ಯದ ಕೆಲವು ಹೀನ ಮನಸ್ಸುಗಳು ಗೌರಿಯವರ ಸಾವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದ್ದವು.

ಭಾರತದ ಸಂಸ್ಕøತಿಯೆಂದರೆ ಸಾವಿಗೆ ಮರುಗುವ, ನೋವಿಗೆ ಸ್ಪಂದಿಸುವುದಾಗಿತ್ತು. ಸರ್ವಜನಾಂಗದ ಶಾಂತಿಯ ತೋಟವಾಗಬೇಕಿದ್ದ ನಮ್ಮ ರಾಷ್ಟ್ರ ಇಂದು ಕೋಮು ಭಾವನೆಯಿಂದ ಕ್ರೌರ್ಯವನ್ನು ತುಂಬಿಕೊಳ್ಳುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರಗಳು ಯಾರೊಬ್ಬರೂ ಮೃತಪಟ್ಟರೂ, ಹಿಂದೂಗಳ ಹತ್ಯೆಯೆಂದು ಬೊಬ್ಬೆ ಹೊಡೆಯುತ್ತಾ ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸಿ ಕೋಮು ವಿಷವನ್ನು ಭಿತ್ತುತ್ತುದ್ದಾರೆ. ಇದೇ ಸಂದರ್ಭದಲ್ಲಿ ಯಾವುದೇ ಮುಸ್ಲಿಮನಾಗಲೀ/ಪ್ರಗತಿಪರರಾಗಲಿ ಅಥವಾ ಕೋಮು ವಿರೋಧಿಯಾಗಲೀ ಸಂಘಪರಿವಾರದ ಅಥವಾ ಬಿಜೆಪಿಯ ಕಾರ್ಯಕರ್ತರು ಮರಣ ಹೊಂದಿದ ಸಂದರ್ಭದಲ್ಲಿ ಅಬ್ಬಾ ಸತ್ತನೆಂದು ಅವರ ಸಾವನ್ನು ಸಂಭ್ರಮಿಸಿದ ಉದಾಹಣೆಗಳಿಲ್ಲ. ಆದರೆ ತಮ್ಮ ವಿರೋಧಿಗಳ ಸಾವನ್ನು ಸಂಭ್ರಮಿಸುವ ಅನಾಗರಿಕ ಸಂಸ್ಕøತಿ ಸಂಘಪರಿವಾರದಲ್ಲಿ ಬೆಳೆದು ಇಂದು ರಾಷ್ಟ್ರವನ್ನೇ ವ್ಯಾಪಿಸಿದೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಶುರುವಾದ ರಾಜಕೀಯ ಹಿಂಸಾಚಾರ ಇಂದಿಗೂ ನಿಂತಿಲ್ಲ. ಚುನಾವಣಾ ಫಲಿತಾಂಶದ ನಂತರ ಒಟ್ಟು 13 ಜನ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಈ ರಾಜಕೀಯ ಜಗಳವನ್ನು ಕೋಮುಗಲಭೆಯಾಗಿ ತಿರುಚುವ ಹುನ್ನಾರನ್ನು ಬಿಜೆಪಿ ನಾಯಕರು ಎಣೆಯುತ್ತಿದ್ದಾರೆ. ಸದಾ ಕೋಮುವಾದ, ಗಲಭೆ, ಹತ್ಯೆಗಳನ್ನೇ ರಾಜಕೀಯ ದಾಳವಾಗಿಸಿಕೊಂಡಿರುವ ಬಿಜೆಪಿ ಮತ್ತು ಸಂಘಪರಿವಾರ ಗಾಂಧಿ ಹತ್ಯೆ ಮಾಡಿದ ಗೂಡ್ಸೆಯನ್ನು ಪೂಜಿಸುವ, ಗೋದ್ರಾ ಹತ್ಯೆ, ಬಾಬರಿ ಮಸೀದಿ, ಬಾಬಾಬುಡನ್‍ಗಿರಿ, ಶಬರಿಮಲೆಗಳಂತ ಇಶ್ಯೂಗಳನ್ನು ಗಲಭೆ, ಹಿಂಸಾಚಾರಗಳಿಗೆ ತಿರುಗಿಸಿ ರಾಜಕೀಯ ಲಾಭ ಪಡೆಯುತ್ತಾ ದೇಶದಲ್ಲಿ ಅಶಾಂತಿ ಮತ್ತು ಅಪಾಯಕಾರಿ ವಾತಾವರಣವನ್ನು ಸೃಷ್ಟಿಮಾಡುತ್ತಿವೆ.

ಪ್ರಪಂಚಕ್ಕೇ ಪ್ರೀತಿ, ಶಾಂತಿಯಯ ಸಂದೇಶವನ್ನು ಸಾರಿದ ಬುದ್ದ ಮತ್ತು ಗಾಂಧಿ ಹುಟ್ಟಿದ ದೇಶವಿಂದು ದ್ವೇಷ, ಅಸಹಿಷ್ಣುತೆ, ಹಿಂಸಾಚಾರದ ದಳ್ಳುರಿಯಲ್ಲಿ ಸಿಕ್ಕು ನಲುಗುತ್ತಿದೆ. “ಬಿತ್ತಿದನ್ನೇ ಫಸಲಾಗಿ ಪಡೆಯುತ್ತೇವೆ. ಹಾಗಾಗಿ ಬಿತ್ತುವುದಾದರೆ ಮಾನವೀಯತೆ ಮತ್ತು ಸೌಹಾರ್ದತೆಯನ್ನು ಬಿತ್ತೋಣ.” ಎಂಬ ಮಾಜಿ ಸಿಎಂ ಸಿದ್ಧರಾಮಯ್ಯವನರ ಟ್ವೀಟ್ ಸಾವನ್ನು ಸಂಭ್ರನಿಸುವ, ದ್ವೇಷವನ್ನೇ ದಾಳ ಮಾಡಿಕೊಂಡಿರುವವರ ಮನಮುಟ್ಟುವಂತದ್ದು. ಆದರೆ ಅದಕ್ಕೆ ಅವರು ಸತ್ತಾಗ ದೀಪಾವಳಿ ಆಚರಿಸುತ್ತೇವೆ ಎಂದು ಪ್ರತ್ಯುತ್ತರ ಕೊಟ್ಟವರ ಮನಸ್ಥಿತಿಯನ್ನು ತಿದ್ದುವುದಾದರೂ ಹೇಗೆ?

ಮತ್ತೊಂದು ವಿಚಾರವೆಂದರೆ 2008ರಿಂದ ಇಲ್ಲಿಯವರೆಗೆ ಐಸ್‍ಲ್ಯಾಂಡ್ ಜಾಗತಿಕ ಶಾಂತಿ ಸೂಚ್ಯಂಕದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಭಯೋತ್ಪಾದಕ ರಾಷ್ಟ್ರವೆಂದು ಬಿಂಬಿತವಾಗಿರುವ ಪಾಕಿಸ್ಥಾನ 153ನೇ ಸ್ಥಾನದಲ್ಲಿದೆ. ಭಾರತದ 141ನೇ ಸ್ಥಾನಕ್ಕೂ ಪಾಕಿಸ್ತಾನದ ಸ್ಥಾನಕ್ಕೂ ಅಂತಹ ಅಂತರವೇನು ಇಲ್ಲ. ಭಾರತವನ್ನು ಪಾಕಿಸ್ತಾನದೆಡೆಗೆ ಸಾಗಲು ಬಿಡದೆ, ಅದನ್ನು ಐಸ್‍ಲ್ಯಾಂಡಿನೆಡೆಗೆ ಸ್ನೇಹ, ಪ್ರೀತಿ, ಸಹಭಾಳ್ವೆ, ಸೌಹಾದರ್ತೆಯ ಮೂಲಕ ಕೊಂಡೊಯ್ಯುವ ಹೊಣೆ ಪ್ರತಿಯೊಬ್ಬ ಭಾರತೀಯರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...