Homeಅಂಕಣಗಳುಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಸಾವನ್ನು ಸಂಭ್ರಮಿಸುವ, ದ್ವೇಷವೇ ರಾಜಕೀಯವಾಗಿರುವ ಸಾಮಾಜಿಕ ಬಿಕ್ಕಟ್ಟಿನಲ್ಲಿ ನಮ್ಮ ದೇಶ

- Advertisement -
- Advertisement -

| ಸೋಮಶೇಖರ್ ಚಲ್ಯ |

ಭಾರತದ ಸ್ವಾತಂತ್ರ್ಯ ಚಳುವಳಿಯ ಹಾದಿಯಲ್ಲಿ ಶಾಂತಿ ಮತ್ತು ಅಹಿಂಸೆಗಳೇ ಧ್ಯೇಯವಾಗಿ ಬೆಳೆದುಬಂದಿದ್ದವು. ಹಿಂಸೆಯಿಂದ ಯಾವುದನ್ನೂ ಗೆಲ್ಲಲಾಗುವುದಿಲ್ಲ, ಶಾಂತಿಯಿಂದ ಹೋರಾಡೋಣ ಸ್ವಾತಂತ್ರ್ಯ ಪಡೆಯೋಣ ಎಂಬುದು ಗಾಂಧಿಯವರ ಉದ್ದೇಶವಾಗಿತ್ತು. ಇದು ಇಡೀ ಜಗತ್ತಿಗೆ ಭಾರತವೊಂದು ಶಾಂತಿಪ್ರಿಯ ರಾಷ್ಟ್ರವೆಂಬುದನ್ನು ತೋರಿಸಿತ್ತು.

ಅಂತೆಯೇ ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲೂ ಎಲ್ಲರನ್ನು ಸಮಭಾವದಿಂದ ಕಾಣುವ, ಅಭಿವ್ಯಕ್ತಿ ಮತು ವ್ಯಕ್ತಿ ಗೌರವದೊಂದಿಗೆ ಭಾತೃಭಾವನೆಯನ್ನು ಬೆಳೆಸುವುದು ನಮ್ಮ ಆಧ್ಯತೆಯೆಂದು ¨ರೆದುಕೊಂಡಿದ್ದೇವೆ. ಆದರೆ ಗಾಂಧಿ ಹೇಳಿದ ಶಾಂತಿ ಮಂತ್ರವನ್ನು ಇತಿಹಾಸದ ಪುಟದಲ್ಲಿಯೂ, ಸಂವಿಧಾನದ ಆಶಯವನ್ನು ಅದರ ಪ್ರಸ್ತಾವನೆಯಲ್ಲೂ ಮಾತ್ರ ಓದಿಕೊಳ್ಳುವಂತಹ ಅಧೋಗತಿಗೆ ಭಾರತವನ್ನು ಕೊಂಡೊಯ್ಯಲಾಗುತ್ತಿದೆ.

ಜೂನ್ 12ರ ಬುಧವಾರ ಪ್ರಕಟಗೊಂಡ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಸ್ಥಾನ ಕುಸಿಯುತ್ತಾ ಸಾಗಿದೆ. 163 ರಾಷ್ಟ್ರಗಳ ಪೈಕಿ ಭಾರತ 141ನೇ ಸ್ಥಾನವನ್ನು ಪಡೆದುಕೊಂಡಿರುವುದು ಆಘಾತಕಾರಿ ಸಂದೇಶವನ್ನು ರವಾನಿಸಿದೆ. ಬಹಶಃ ಶಾಂತಿ ರಾಷ್ಟ್ರಗಳ ಪಟ್ಟಿಯೆಂದು ಕರೆಯುದಕ್ಕಿಂತ ಅಶಾಂತಿ ರಾಷ್ಟ್ರಗಳ ಪಟ್ಟಿ ಎಂದು ನೋಡಿದರೆ ಭಾರತ ಮೊದಲ 22ನೇ ಸ್ಥಾನದಲ್ಲಿದೆ. ಕಳೆದ ವರ್ಷ 136ನೇ ಸ್ಥಾನ ಪಡೆದುಕೊಂಡಿದ್ದ ಭಾರತ ಈ ಭಾರಿ 141ನೇ ಸ್ಥಾನ್ಕಕೆ ಕುಸಿದಿದೆ. ಇದು ದೇಶ ಎಂತಹ ಅಸಹನೆ, ಹಿಂಸಾಚಾರದೆಡೆಗೆ ಸಾಗಿದೆ ಎಂಬುದನ್ನು ತೋರಿಸುತ್ತಿದೆ. ಇದಕ್ಕೆ ಇತ್ತೀಚಿನ ಹಲವು ವಿದ್ಯಾಮಾನಗಳು ಸಾಕ್ಷಿಯಾಗಿವೆ.

ಗಿರೀಶ್ ಕಾರ್ನಾಡರು ನಿಧನರಾದ ಸಂದರ್ಭದಲ್ಲಿ ಅವರ ಸಾವನ್ನು ಸಂಭ್ರಮಿಸುವ ವಿಕೃತಿಯನ್ನು ಮೆರೆಯುವ ಮಟ್ಟಿಗೆ ಜನರ ಆಲೋಚನೆಗಳು ವಿಷಕಾರಿಯಾಗುತ್ತಿವೆ. ಗೌರಿ ಲಂಕೇಶ್ ಹತ್ಯೆಗೆ ಅಂತಾರಾಷ್ಟ್ರೀಯ ಮಟ್ಟಿದಲ್ಲಿ ಮನಸ್ಸುಗಳು ಮರುಗಿದ್ದವು. ಆದರೆ ನಮ್ಮದೇ ದೇಶದ/ರಾಜ್ಯದ ಕೆಲವು ಹೀನ ಮನಸ್ಸುಗಳು ಗೌರಿಯವರ ಸಾವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದ್ದವು.

ಭಾರತದ ಸಂಸ್ಕøತಿಯೆಂದರೆ ಸಾವಿಗೆ ಮರುಗುವ, ನೋವಿಗೆ ಸ್ಪಂದಿಸುವುದಾಗಿತ್ತು. ಸರ್ವಜನಾಂಗದ ಶಾಂತಿಯ ತೋಟವಾಗಬೇಕಿದ್ದ ನಮ್ಮ ರಾಷ್ಟ್ರ ಇಂದು ಕೋಮು ಭಾವನೆಯಿಂದ ಕ್ರೌರ್ಯವನ್ನು ತುಂಬಿಕೊಳ್ಳುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರಗಳು ಯಾರೊಬ್ಬರೂ ಮೃತಪಟ್ಟರೂ, ಹಿಂದೂಗಳ ಹತ್ಯೆಯೆಂದು ಬೊಬ್ಬೆ ಹೊಡೆಯುತ್ತಾ ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸಿ ಕೋಮು ವಿಷವನ್ನು ಭಿತ್ತುತ್ತುದ್ದಾರೆ. ಇದೇ ಸಂದರ್ಭದಲ್ಲಿ ಯಾವುದೇ ಮುಸ್ಲಿಮನಾಗಲೀ/ಪ್ರಗತಿಪರರಾಗಲಿ ಅಥವಾ ಕೋಮು ವಿರೋಧಿಯಾಗಲೀ ಸಂಘಪರಿವಾರದ ಅಥವಾ ಬಿಜೆಪಿಯ ಕಾರ್ಯಕರ್ತರು ಮರಣ ಹೊಂದಿದ ಸಂದರ್ಭದಲ್ಲಿ ಅಬ್ಬಾ ಸತ್ತನೆಂದು ಅವರ ಸಾವನ್ನು ಸಂಭ್ರಮಿಸಿದ ಉದಾಹಣೆಗಳಿಲ್ಲ. ಆದರೆ ತಮ್ಮ ವಿರೋಧಿಗಳ ಸಾವನ್ನು ಸಂಭ್ರಮಿಸುವ ಅನಾಗರಿಕ ಸಂಸ್ಕøತಿ ಸಂಘಪರಿವಾರದಲ್ಲಿ ಬೆಳೆದು ಇಂದು ರಾಷ್ಟ್ರವನ್ನೇ ವ್ಯಾಪಿಸಿದೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಶುರುವಾದ ರಾಜಕೀಯ ಹಿಂಸಾಚಾರ ಇಂದಿಗೂ ನಿಂತಿಲ್ಲ. ಚುನಾವಣಾ ಫಲಿತಾಂಶದ ನಂತರ ಒಟ್ಟು 13 ಜನ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಈ ರಾಜಕೀಯ ಜಗಳವನ್ನು ಕೋಮುಗಲಭೆಯಾಗಿ ತಿರುಚುವ ಹುನ್ನಾರನ್ನು ಬಿಜೆಪಿ ನಾಯಕರು ಎಣೆಯುತ್ತಿದ್ದಾರೆ. ಸದಾ ಕೋಮುವಾದ, ಗಲಭೆ, ಹತ್ಯೆಗಳನ್ನೇ ರಾಜಕೀಯ ದಾಳವಾಗಿಸಿಕೊಂಡಿರುವ ಬಿಜೆಪಿ ಮತ್ತು ಸಂಘಪರಿವಾರ ಗಾಂಧಿ ಹತ್ಯೆ ಮಾಡಿದ ಗೂಡ್ಸೆಯನ್ನು ಪೂಜಿಸುವ, ಗೋದ್ರಾ ಹತ್ಯೆ, ಬಾಬರಿ ಮಸೀದಿ, ಬಾಬಾಬುಡನ್‍ಗಿರಿ, ಶಬರಿಮಲೆಗಳಂತ ಇಶ್ಯೂಗಳನ್ನು ಗಲಭೆ, ಹಿಂಸಾಚಾರಗಳಿಗೆ ತಿರುಗಿಸಿ ರಾಜಕೀಯ ಲಾಭ ಪಡೆಯುತ್ತಾ ದೇಶದಲ್ಲಿ ಅಶಾಂತಿ ಮತ್ತು ಅಪಾಯಕಾರಿ ವಾತಾವರಣವನ್ನು ಸೃಷ್ಟಿಮಾಡುತ್ತಿವೆ.

ಪ್ರಪಂಚಕ್ಕೇ ಪ್ರೀತಿ, ಶಾಂತಿಯಯ ಸಂದೇಶವನ್ನು ಸಾರಿದ ಬುದ್ದ ಮತ್ತು ಗಾಂಧಿ ಹುಟ್ಟಿದ ದೇಶವಿಂದು ದ್ವೇಷ, ಅಸಹಿಷ್ಣುತೆ, ಹಿಂಸಾಚಾರದ ದಳ್ಳುರಿಯಲ್ಲಿ ಸಿಕ್ಕು ನಲುಗುತ್ತಿದೆ. “ಬಿತ್ತಿದನ್ನೇ ಫಸಲಾಗಿ ಪಡೆಯುತ್ತೇವೆ. ಹಾಗಾಗಿ ಬಿತ್ತುವುದಾದರೆ ಮಾನವೀಯತೆ ಮತ್ತು ಸೌಹಾರ್ದತೆಯನ್ನು ಬಿತ್ತೋಣ.” ಎಂಬ ಮಾಜಿ ಸಿಎಂ ಸಿದ್ಧರಾಮಯ್ಯವನರ ಟ್ವೀಟ್ ಸಾವನ್ನು ಸಂಭ್ರನಿಸುವ, ದ್ವೇಷವನ್ನೇ ದಾಳ ಮಾಡಿಕೊಂಡಿರುವವರ ಮನಮುಟ್ಟುವಂತದ್ದು. ಆದರೆ ಅದಕ್ಕೆ ಅವರು ಸತ್ತಾಗ ದೀಪಾವಳಿ ಆಚರಿಸುತ್ತೇವೆ ಎಂದು ಪ್ರತ್ಯುತ್ತರ ಕೊಟ್ಟವರ ಮನಸ್ಥಿತಿಯನ್ನು ತಿದ್ದುವುದಾದರೂ ಹೇಗೆ?

ಮತ್ತೊಂದು ವಿಚಾರವೆಂದರೆ 2008ರಿಂದ ಇಲ್ಲಿಯವರೆಗೆ ಐಸ್‍ಲ್ಯಾಂಡ್ ಜಾಗತಿಕ ಶಾಂತಿ ಸೂಚ್ಯಂಕದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಭಯೋತ್ಪಾದಕ ರಾಷ್ಟ್ರವೆಂದು ಬಿಂಬಿತವಾಗಿರುವ ಪಾಕಿಸ್ಥಾನ 153ನೇ ಸ್ಥಾನದಲ್ಲಿದೆ. ಭಾರತದ 141ನೇ ಸ್ಥಾನಕ್ಕೂ ಪಾಕಿಸ್ತಾನದ ಸ್ಥಾನಕ್ಕೂ ಅಂತಹ ಅಂತರವೇನು ಇಲ್ಲ. ಭಾರತವನ್ನು ಪಾಕಿಸ್ತಾನದೆಡೆಗೆ ಸಾಗಲು ಬಿಡದೆ, ಅದನ್ನು ಐಸ್‍ಲ್ಯಾಂಡಿನೆಡೆಗೆ ಸ್ನೇಹ, ಪ್ರೀತಿ, ಸಹಭಾಳ್ವೆ, ಸೌಹಾದರ್ತೆಯ ಮೂಲಕ ಕೊಂಡೊಯ್ಯುವ ಹೊಣೆ ಪ್ರತಿಯೊಬ್ಬ ಭಾರತೀಯರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...