Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...