Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...