Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...