Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...