Homeಮುಖಪುಟಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

ಈ ತಿಂಗಳು ಒಟಿಟಿಯಲ್ಲಿ ದೊರಕುವ ಕೆಲ ಸಿನಿಮಾ ಮತ್ತು ವೆಬ್‌ ಸರಣಿಗಳಿವು

- Advertisement -
- Advertisement -

ಒಟಿಟಿ ವೇದಿಕೆ ಜನಪ್ರಿಯಗೊಳ್ಳುತ್ತಿದ್ದು, ಪ್ರತಿನಿತ್ಯ ಹೊಸತನಕ್ಕೆ ಕಾರಣವಾಗುತ್ತಿದೆ. ಅಂಗೈನಲ್ಲಿಯೇ ಸಿಗುವ ಸಿನಿಮಾ, ವೆಬ್ ಸರಣಿಗಳಲ್ಲಿ ವೀಕ್ಷಕರು ಮುಳುಗಿದ್ದಾರೆ. ಇದಕ್ಕೆ ತಕ್ಕಂತೆ ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee 5, ಆಹಾ, MX ಪ್ಲೇಯರ್‌, Nee-stream, soni LIV ವೇದಿಕೆಗಳು ವಿಭಿನ್ನವಾದ ವಿಷಯಗಳನ್ನು ನೀಡಲು ಪ್ರಯತ್ನಿಸುತ್ತಿವೆ.

ಜುಲೈ 2021 ರಲ್ಲಿ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಮುಂಬರುವ ವೆಬ್ ಸರಣಿಗಳು, ಸಿನಿಮಾಗಳ ಪಟ್ಟಿ ಹೀಗಿದೆ.

೧. ಮಾಲಿಕ್ – ಮಲಯಾಲಂ ಚಿತ್ರ

ಫಹಾದ್ ಫಾಸಿಲ್, ನಿಮಿಷಾ ಸಜಯನ್ ತಾರಾಂಗಣದಲ್ಲಿದ್ದು, ಕೇರಳದಲ್ಲಿ ನಡೆದ ಗಲಭೆಯೊಂದರ ಸುತ್ತ ನಡೆಯುವ ರಾಜಕೀಯದ ಕಥಾ ಹಂದರವನ್ನು ಹೊಂದಿದೆ. ಜುಲೈ 15 ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ.

 

೨. ನಾರಪ್ಪ (ತೆಲುಗು ಸಿನಿಮಾ) 

ತಮಿಳಿನ ಅಸುರನ್ ಸಿನಿಮಾದ ರಿಮೇಕ್ ನಾರಪ್ಪನಾಗಿ ತೆಲುಗಿನಲ್ಲಿ ಬರುತ್ತಿದೆ. ವಿಕ್ಟರಿ ವೆಂಕಟೇಶ್, ಧನುಷ್ ನಿರ್ವಹಿಸಿದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪ್ರಿಯಾಮಣಿ ಇದ್ದಾರೆ. ಜುಲೈ 24 ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ನಾರಪ್ಪ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

೩. ಕುಡಿ ಎಡಮೈತೆ (ತೆಲುಗು ವೆಬ್ ಸರಣಿ)

ಕನ್ನಡದ ನಿರ್ದೇಶಕ ಪವನ್‌ ಕುಮಾರ್‌ ನಿರ್ದೇಶಿಸಿರುವ ‘ಕುಡಿ ಎಡಮೈತೆ’ ತೆಲುಗು ವೆಬ್‌ ಸರಣಿಯು ಆಹಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಜುಲೈ 16 ರಿಂದ (ಶುಕ್ರವಾರ) ಪ್ರಸಾರವಾಗಲಿದೆ. ಈ ಕ್ರೈಂ ಥ್ರಿಲ್ಲರ್‌ ಸರಣಿಯಲ್ಲಿ  ಅಮಲಾ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

೪. ಖುದ್ಸಪಾ (Chutzpah) (ಹಿಂದಿ ವೆಬ್ ಸರಣಿ)

ಸೋನಿಲೈವ್ ಒಟಿಟಿಯಲ್ಲಿ ಜುಲೈ 23 ಕ್ಕೆ ಬಿಡುಗಡೆಯಾಗಲಿದೆ. ವರುಣ್ ಶರ್ಮಾ, ಮಂಜೋತ್ ಸಿಂಗ್, ಎಲಾನಝ್ ನೋರೌಜಿ, ಗೌತಮ್ ಮೆಹ್ರಾ ಸರಣಿಯಲ್ಲಿದ್ದು, ಸಿಮಾರ್‌ಪ್ರೀತ್ ಸಿಂಗ್ ನಿರ್ದೇಶನವಿದೆ. ಇಂದಿನ ಯುಗದಲ್ಲಿ ಮಾನವನ ಡಿಜಿಟಲ್ ರೂಪಾಂತರದ ಬಗ್ಗೆ ಸೂಕ್ಷ್ಮ ನೋಟವನ್ನು ನೀಡುತ್ತದೆ. 5 ವಿಭಿನ್ನ  ಕಥೆಗಳನ್ನು ಹೊಂದಿದೆ.

೫. ಒಕ ಚಿನ್ನ ವಿರಾಮಂ – ತೆಲುಗು ಚಿತ್ರ

ಒಕ ಚಿನ್ನ ವಿರಾಮಂ ಆಹಾ ಒಟಿಟಿಯಲ್ಲಿ ಜುಲೈ 9ಕ್ಕೆ ಬಿಡುಗಡೆಯಾಗಿದೆ. ಒಬ್ಬ ಉದ್ಯಮಿ ಮತ್ತು ಆತನ ಗರ್ಭಿಣಿ ಪತ್ನಿಯ ಜೀವನದಲ್ಲಾಗುವ ಕಥಾಹಂದರವನ್ನು ಹೊಂದಿದೆ.

Watch Oka Chinna Viramam | Prime Video

೬. ತೂಫಾನ್- ಹಿಂದಿ ಚಿತ್ರ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ  ಜುಲೈ 16 ಬಿಡುಗಡೆಯಾಗಿರುವ ಫರ್ಹಾನ್ ಅಖ್ತರ್ ಅವರ ಬಹುನಿರೀಕ್ಷಿತ ಚಿತ್ರ ತೂಫಾನ್. ಮೃನಾಲ್ ಠಾಕೂರ್ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿದ್ದಾರೆ. ಬೀದಿ ಬಾಕ್ಸರ್ ಚಾಂಪಿಯನ್ ಆಗುವುದನ್ನು ಆಧರಿಸಿದ ಕಥೆ ಇದಾಗಿದ್ದು, ಪರೇಶ್ ರಾವಲ್ ಅವರು ಫರ್ಹಾನ್ ಪಾತ್ರದ ತರಬೇತುದಾರರಾಗಿ ಕಾಣಿಸಿಕೊಂಡಿದ್ದಾರೆ.

೭. ಸರ್ಪಟ್ಟ ಪರಂಬರೈ – ತಮಿಳು ಸಿನಿಮಾ

ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಜುಲೈ 22 ಬಿಡುಗೆಯಾಗಲಿರುವ ಸರ್ಪಟ್ಟ ಪರಂಬರೈ ಪ್ರೇಕ್ಷಕರು ಅತಿ ಹೆಚ್ಚು ಕಾತುರದಿಂದ ಕಾಯುತ್ತಿರುವ ಚಿತ್ರವಾಗಿದೆ. ಪಾ.ರಂಜಿತ್ ನಿರ್ದೇಶನದಲ್ಲಿ ಆರ್ಯ ನಟಿಸಿರುವ ಈ ಚಿತ್ರ 1970 ರ ದಶಕದ ಸರ್ಪಟ್ಟ ಪರಂಬರೈನ ಕಥಾ ಹಂದರವನ್ನು ಹೊಂದಿದೆ.

8. ಫೀಲ್ಸ್ ಲೈಕ್ ಇಶ್ಕ್- ಹಿಂದಿ ವೆಬ್ ಸರಣಿ

ಜುಲೈ 23 ಕ್ಕೆ ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ, ಅನೇಕ ವಿಭಿನ್ನ ಕಥೆಗಳ ಗುಚ್ಚ ಫೀಲ್ಸ್ ಲೈಕ್ ಇಶ್ಕ್.  ಈ ಕಥೆಗಳಲ್ಲಿ ಒಂದು ಕಥೆ ಆಯುಷ್ಮಾನ್ ಖುರಾನಾ ಅವರ ಪತ್ನಿ ತಾಹಿರಾ ಕಶ್ಯಪ್ ನಿರ್ದೇಶಿಸಿದ್ದಾರೆ. ಇದು ತಾಹಿರಾ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

Feels Like Ishq (Netflix) Web Series Cast, Story, Real Name, Wiki & More

೯. ಡಾಕ್ಟರ್ – ತಮಿಳು ಚಲನಚಿತ್ರ

ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿರುವ ಈ ತಿಂಗಳ ಮತ್ತೊಂದು ಕುತೂಹಲಕಾರಿ ಚಿತ್ರ  ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರ ಡಾಕ್ಟರ್. ಚಲನಚಿತ್ರವು ಆಕ್ಷನ್, ಅಪರಾಧ ಮತ್ತು ಹಾಸ್ಯದ ಮಿಶ್ರಣವಾಗಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಪ್ರಿಯಾಂಕಾ ಅರುಲ್ ಮುಖ್ಯ ಪಾತ್ರದಲ್ಲಿದ್ದಾರೆ.

Doctor - Tamil movie

 

೧೦. ನರಗಸೂರನ್ – ತಮಿಳು ಚಿತ್ರ

Soni LIV ನಲ್ಲಿ ಬಿಡುಗಡೆಯಾಗಲಿರುವ ಜುಲೈ ತಿಂಗಳ ಚಿತ್ರಗಳಲ್ಲಿ ಥ್ರಿಲ್ಲರ್ ಕಥೆಯ ನರಗಸೂರನ್ ಕೂಡ ಒಂದು. ಕಳೆದ ವರ್ಷ ಇದೇ ಸಮಯದಲ್ಲಿ ಬಿಡುಗಡೆಯಾಗಬೇಕಿತ್ತು. ಕಾರ್ತಿಕ್ ನರೇನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಅರವಿಂದ್ ಸ್ವಾಮಿ, ಶ್ರಿಯಾ ಶರನ್, ಸುಂದೀಪ್ ಕಿಶನ್, ಇಂದ್ರಜಿತ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...