HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...