HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...