HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...