HomeUncategorizedಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ...

ಆರ್‌ಎಸ್‌ಎಸ್‌, ಸಂಘ ಪರಿವಾರವನ್ನು ದ್ವೇಷ ಹರಡುವ ಗುಂಪುಗಳ ಪಟ್ಟಿಗೆ ಸೇರಿಸಿ : ದಕ್ಷಿಣ ಏಷ್ಯಾ ಸಮುದಾಯಗಳಿಂದ ಕೆನಡಾ ಪ್ರಧಾನಿಗೆ ಬಹಿರಂಗ ಪತ್ರ

- Advertisement -
- Advertisement -

ಕೆನಡಾದಲ್ಲಿರುವ ದಕ್ಷಿಣ ಏಷ್ಯಾದ 25 ಸಮುದಾಯಗಳ ಸದಸ್ಯರು ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಕೆನಡಾದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಸಂಘಟನೆಗಳ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಖಲಿಸ್ತಾನ್ ಪ್ರತ್ಯೇಖವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅನ್ನು 2023ರಲ್ಲಿ ಹತ್ಯೆಗೈದ ವಿಚಾರ ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಸಿರುವ ನಡುವೆ ಆರ್‌ಎಸ್ಎಸ್‌ ವಿರೋಧಿ ಕೂಗು ಕೇಳಿ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಕೆನಡಾದಲ್ಲಿ ಸಿಖ್ ವಿರೋಧಿ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಪಾತ್ರವಿದೆ ಎಂದು ಕೆನಡಾದ ಮುಸ್ಲಿಮರ ರಾಷ್ಟ್ರೀಯ ಮಂಡಳಿಯು ಪ್ರಕಟಿಸಿದ 2023ರ ವರದಿಯನ್ನು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ಉಲ್ಲೇಖಿಸಿದೆ.

ಕೆನಡಾದಲ್ಲಿ ಸಂಘಪರಿವಾರ ಮತ್ತು ಆರ್‌ಎಸ್‌ಎಸ್‌ ಸಂಬಂಧಿತ ಗುಂಪುಗಳು ಹಿಂದೂ ಪ್ರಾಬಲ್ಯದ ಕೃತ್ಯಗಳ ಹಿಂದೆ ಇದೆ ಎಂದು 2023ರ ವರದಿ ಹೇಳಿತ್ತು.

“ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಅಂಗವಾಗಿದೆ. ಇದು ಯುರೋಪಿಯನ್ ಫ್ಯಾಸಿಸಂನಿಂದ ಪ್ರೇರಿತವಾದ “ಹಿಂದುತ್ವ” ಅಥವಾ ಹಿಂದೂ ರಾಷ್ಟ್ರೀಯತೆಯನ್ನು ಉತ್ತೇಜಿಸುವ ಅರೆಸೈನಿಕ ಸಂಘಟನೆಯಾಗಿದೆ” ಎಂದು ದಕ್ಷಿಣ ಏಷ್ಯಾದ ಸಮುದಾಯಗಳ ಸದಸ್ಯರ ಹೇಳಿಕೆ ತಿಳಿಸಿದೆ.

“ಆರ್‌ಎಸ್‌ಎಸ್‌ನ ಸಂಸ್ಥಾಪಕರು ಸ್ಪಷ್ಟವಾಗಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ಬಿಜೆಪಿಯ ಹತ್ತು ವರ್ಷಗಳ ಆಡಳಿತದಲ್ಲಿ ನಾವು ಇದರ ಜ್ವಲಂತ ಉದಾಹರಣೆಗಳನ್ನು ನೋಡಿದ್ದೇವೆ. 200 ಮಿಲಿಯನ್ ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವನ್ನು ಹಿಂದೂ ಜನಾಂಗೀಯ-ರಾಷ್ಟ್ರೀಯ ರಾಜ್ಯವನ್ನಾಗಿ ಮಾಡುವ ಗುರಿಯತ್ತ ಭಾರತದ ಸರ್ಕಾರ ಕೊಂಡೊಯ್ಯುತ್ತಿದೆ ಮತ್ತು ಇತರ ಅಲ್ಪಸಂಖ್ಯಾತ ಜನಸಂಖ್ಯೆಗಳಾದ ಸಿಖ್, ದಲಿತ, ಆದಿವಾಸಿ (ಸ್ಥಳೀಯ ಜನರು) ಹಾಗೂ ಕ್ರಿಶ್ಚಿಯನ್ನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಮಾಡಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್‌, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್ (ಸಿಸಿಐಎಂ) ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಮಾಂಟ್ರಿಯಲ್, ಕೆನಡಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಅಂಡ್ ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ಸ್ ಅಗೇನ್ಸ್ಟ್ ಒಪ್ರೆಶನ್ ಅಂಡ್ ಪರ್ಸಿಕ್ಯೂಶನ್ (ಸಿಎಒಪಿ), ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ (ಸಿಐಡಿ) ಮತ್ತು ಪ್ಯಾಲೆಸ್ತೀನಿಯನ್ ಅಂಡ್ ಜ್ಯೂವಿಶ್ ಯೂನಿಟಿ (ಪಿಎಜೆಯು) ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

“ಹಿಂದೂ ರಾಷ್ಟ್ರೀಯತಾವಾದಿ ಸರ್ಕಾರದ ಅಡಿಯಲ್ಲಿ, ಭಾರತದಲ್ಲಿ ಆಗಾಗ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳನ್ನು ನಿರ್ಭಯದಿಂದ ಮತ್ತು ಸಹಭಾಗಿತ್ವದಿಂದ ನಡೆಸಲಾಗಿದೆ. ಇತ್ತೀಚಿನ ವರದಿಗಳಲ್ಲಿನ ಪುರಾವೆಗಳು ಈ ಉಗ್ರಗಾಮಿ ಗುಂಪುಗಳ ಜಾಲವು ಸಿಖ್ಖರು, ಕೆನಡಾ ಮತ್ತು ಯುಎಸ್‌ನಲ್ಲಿರುವ ಇತರ ವಲಸೆ ಭಾರತೀಯ ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ ಎಂದು ಖಚಿತಪಡಿಸುತ್ತದೆ. ಕೆನಡಾ ಮತ್ತು ವಿಶ್ವದಾದ್ಯಂತ ಹಿಂದೂ ರಾಷ್ಟ್ರೀಯತಾವಾದಿಗಳು ಮತ್ತು ಅವರ ಅಂಗ ಸಂಸ್ಥೆಗಳ ವ್ಯಾಪಕವಾದ ಜಾಲ ಹಬ್ಬಿದೆ. ಈಗ ಕೆನಡಾದಲ್ಲಿ ಈ ಜಾಲವು ಗೊಂದಲದ ಮಾದರಿಯ ಬಲಾತ್ಕಾರ, ಸಂಘಟಿತ ಅಪರಾಧ ಮತ್ತು ಮಾರಣಾಂತಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದೆ” ಎಂದು ಬಹಿರಂಗ ಪತ್ರದಲ್ಲಿ ಹೇಳಲಾಗಿದೆ.

ಕೆನಡಾ ಸರ್ಕಾರವು ದಕ್ಷಿಣ ಏಷ್ಯನ್ನರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ರಕ್ಷಣೆ ಒದಗಿಸಲು ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪ್ರಭಾವವನ್ನು ತನಿಖೆ ಮಾಡಬೇಕು. ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಅಂಗ ಸಂಸ್ಥೆಗಳನ್ನು ದ್ವೇಷದ ಗುಂಪುಗಳು ಅಥವಾ ತೀವ್ರ ಬಲಪಂಥೀಯ ಉಗ್ರಗಾಮಿ ಗುಂಪುಗಳಾಗಿ ಪಟ್ಟಿ ಮಾಡುವಂತೆ ಬಹಿರಂಗ ಪತ್ರವು ಒತ್ತಾಯಿಸಿದೆ.

ಸೌಜನ್ಯ : thewire.in

ಇದನ್ನೂ ಓದಿ : ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...