Homeಕಥೆಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

ಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

- Advertisement -
- Advertisement -

ಮನೆ ಹಿರಿಯರಾದ ಅಜ್ಜ ಅಜ್ಜಿಯಂದಿರು ಮೊಮ್ಮಕ್ಕಳನ್ನೆಲ್ಲಾ ಕೂರಿಸಿಕೊಂಡು ಕತೆ ಹೇಳುತ್ತಿದ್ದ ಕಾಲವೊಂದಿತ್ತು. ದೂರದ ಬೆಟ್ಟದತ್ರ ಒಂದು ಪುಟ್ಟ ಊರಿತ್ತು. ಆ ಊರಿನಲ್ಲಿ ರಾಜಕುಮಾರಿಯೊಬ್ಬಳಿದ್ದಳು…. ಅಂತ ಕತೆ ಆರಂಭವಾಗುತ್ತಿತ್ತು. ಮಧ್ಯೆ ಮಧ್ಯೆ ಅಬ್ಬಾ ಹೀಗೆಲ್ಲಾ ಇತ್ತಾ? ಎನ್ನುವಷ್ಟು ಆಶ್ಚರ್ಯಪಡುವ ಸಂಗತಿಗಳನ್ನು ಅಜ್ಜಿ ಹೇಳುವಾಗ ಕಣ್ಣರಳಿಸಿ ಕೇಳುತ್ತದ್ದೆವು. ಅಲ್ಲಿ ರಾಜಕುಮಾರಿಯೇ ನಾಯಕಿಯಾಗಬೇಕಿರಲಿಲ್ಲ. ಕಾಗೆ, ಗುಬ್ಬಿ, ಬಡವ, ಕಸ ಗುಡಿಸೊ ಹುಡುಗಿ ಹೀಗೆ ಎಲ್ಲರೂ ಕತಾನಾಯಕರಾಗಿರುತ್ತಿದ್ದರು. ಕತೆಯಲ್ಲೊಂದು ಮೌಲ್ಯವಿರುತ್ತಿತ್ತು.

ಕಾಲ ಬದಲಾದಂತೆ ತಂತ್ರಜ್ಞಾನ ಎಲ್ಲವನ್ನು ತನ್ನದಾಗಿಸಿಕೊಳ್ಳುತ್ತಾ ಬಂದಿದೆ. ಅಜ್ಜಿ ಕತೆ ಹೇಳುವ-ಕೇಳುವ ವ್ಯವಧಾನ ಇಲ್ಲವಾಗಿದೆ. ದಿನವಿಡೀ ಓಡೂ, ಓಡೂ… ಎನ್ನುವಂತಾಗಿದೆ. ಇವತ್ತಿಗೆ ಅಜ್ಜಿ ಕತೆ ಹೇಳುತ್ತಿದ್ದ ಕಾಲವೊಂದಿತ್ತು ಅನ್ನೋದು ಮಾತ್ರ ಅಚ್ಚಳಿಯದ ನೆನಪಾಗಿ ಉಳಿದಿದೆ.

ಕೊರೊನಾ ಪಿಡುಗಿನಿಂದ ಬಿಡುವಿಲ್ಲದ ಕೆಲಸಗಳಿಗೆ ಬ್ರೇಕ್‌ ಹಾಕಿ ಮನೆಯಲ್ಲಿಯೇ ಇರುವಂತಾಗಿದೆ. ಮನೆಯವರೊಂದಿಗೆ ಮಾತನಾಡುತ್ತಾ, ಇಡೀ ಸಮಾಜದ ಆಗೂ ಹೋಗುಗಳ ಬಗ್ಗೆ ತಿಳಿಯುತ್ತಿರುವ ‘ಹೋಮ್‌ ಕ್ವಾರಂಟೈನ್‌’ ಸಂದರ್ಭದಲ್ಲಿ ಅಜ್ಜಿ ಕತೆಗಳ ಹಚ್ಚ ಹಸಿರಾದ ನೆನಪು ಮರುಕಳಿಸಿದ್ದು ‘ಕತೆ ಕೇಳೋಣ ಬನ್ನಿ’ ಕಾರ್ಯಕ್ರಮದಿಂದ. ಇಲ್ಲಿ ಅಜ್ಜಿ ಕತೆ ಹೇಳುವುದಿಲ್ಲ ಬದಲಾಗಿ ಕನ್ನಡದ ಹೆಸರಾಂತ ಕತೆಗಾರರು ತಾವು ಬರೆದ ಕತೆಗಳನ್ನು ಓದುತ್ತಾರೆ.

ಕನ್ನಡ ಸಾಹಿತ್ಯದ ಕುರಿತು ಮಾಹಿತಿ ನೀಡುವ ಇ-ತಾಣ ಬುಕ್‌ ಬ್ರಹ್ಮ ಕತೆ ಕೇಳುವ ಆಸಕ್ತರಿಗಾಗಿ ಕಳೆದ ಹದಿನೈದು ದಿನಗಳಿಂದ ಪ್ರತಿದಿನ ಸಂಜೆ 6.30ಕ್ಕೆ ’ಕತೆ ಕೇಳೋಣ ಬನ್ನಿ’ ಫೇಸ್‌ಬುಕ್‌ ಲೈವ್‌ ಅನ್ನು ನಡೆಸುತ್ತಿದೆ. ಮುವತ್ತು ಮಂದಿ ಕತೆಗಾರರು, ವಿವಿಧ ಭಾಷಾ ಶೈಲಿಯ ಕತೆಗಳನ್ನು ಈ ಲೈವ್‌ನಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ. ಈವರೆಗೂ ವಿಕಾಸ್‌ ನೇಗಿಲೋಣಿ, ಗೀತಾ ವಸಂತ, ಹನುಮಂತ ಹಾಲಗೇರಿ, ದಯಾನಂದ, ಚಿದಾನಂದ ಸಾಲಿ, ಶ್ರೀಧರ ಬಳಗಾರ, ಕಪಿಲ ಹುಮನಬಾದೆ, ಮಹಂತೇಶ ನವಲಕಲ್‌, ಅಮರೇಶ ನುಗಡೋಣಿ ಸೇರಿದಂತೆ ಸುಮಾರು ಹದಿನೈದು ಕತೆಗಾರರು ಕತೆಯನ್ನು ಓದಿದ್ದಾರೆ.

ಮೂರನೇ ವಾರ ಅಂದರೆ ನಾಳೆಯಿಂದ ಕೇಶವ ಮಳಗಿ, ಕಲಿಗಣನಾಥ ಗುಡದೂರು, ಡಿ.ಎಸ್. ಚೌಗಲೆ, ಟಿ.ಎಸ್. ಗೊರವರ, ಶಿವಕುಮಾರ ಮಾವಲಿ, ಪದ್ಮಿನಿ ನಾಗರಾಜು ಅವರು ಕತೆ ಓದಲಿದ್ದಾರೆ. ಓದುಗರು ಕತೆಯೊಳಗೊಕ್ಕು ಪಾತ್ರವಾಗಿ ಓದುವುದು ಈ ಕಾರ್ಯಕ್ರಮದ ವಿಶೇಷ. ಇಲ್ಲಿನ ಪ್ರತಿ ಕತೆಯು ಭಿನ್ನವಾಗಿದೆ. ಚಿದಾನಂದ ಸಾಲಿಯವರ ಕತೆ ಹಳ್ಳಿ ಮುಗ್ದ ಜನರ ಬದುಕಿನ ಕುರಿತು ವಿವರಿಸಿದ್ದರೆ ದಯಾನಂದ ಅವರು ಇಂದಿನ ಕಾರ್ಪೊರೇಟ್‌ ಕಂಪನಿಗಳ ಉದ್ಯೋಗಿಗಳು ಕೆಲಸದ ಮೇಲೆ ಬೇರೆ ಕಡೆ ಹೋದಾಗ ಅಲ್ಲಿನ ಜೀವನ ಹೇಗಿರುತ್ತದೆ ಎಂಬುದರ ಕುರಿತು ಹೆಣೆಯಲಾಗಿದೆ.

ಇನ್ನು ಬರವಣಿಗೆಯ ಮೂಲಕ ನಮ್ಮನ್ನೆಲ್ಲಾ ಆಳವಾಗಿ ಚಿಂತಿಸುವಂತೆ ಮಾಡಿರುವ ಹನುಮಂತ ಹಾಲಗೇರಿಯವರು ಓದಿದ ಕತೆ ಸುಡುಗಾಡು ಸಿದ್ದರ ಬದುಕಿನ ಕುರಿತಾಗಿತ್ತು. ನಗರೀಕರಣ ಪ್ರಕ್ರಿಯೆಯಲ್ಲಿ ಮನುಷ್ಯರ ಕೆಲಸವನ್ನು ಯಂತ್ರಗಳು ಕಸಿದುಕೊಂಡದ್ದೇಗೆ ಎಂಬುದನ್ನು ಈ ಕತೆ ಚಿತ್ರಿಸಿದೆ. ಉತ್ತರ ಕರ್ನಾಟಕ ಶೈಲಿ, ಬಯಲು ಸೀಮೆ, ಪಕ್ಕ ಮಂಡ್ಯ ಭಾಷೆ ಕುಂದಾಪುರ ಕನ್ನಡ ಹೀಗೆ ವಿವಿಧ ಬಗೆಯ ಭಾಷಾ ಶೈಲಿ ಇಲ್ಲಿನ ಕತೆಗಳಲ್ಲಿವೆ.

ಕಾರ್ಯಕ್ರಮದ ಕುರಿತು ವಿವರಣೆ ನೀಡಿರುವ ಬುಕ್‌ ಬ್ರಹ್ಮ ‘ಇಂದು ಎಲ್ಲರಿಗೂ ಸಂಕಷ್ಟದ ದಿನಗಳು. ಒಂಟಿಯಾಗಿ ಕಾಲ ಕಳೆಯಬೇಕಾದ ಪರೀಕ್ಷೆಯ ದಿನಗಳಿವು. ಆತಂಕ ಎದುರಾದಾಗ ಸಾಹಿತ್ಯ ಸಾಂತ್ವನ ಹೇಳುವ ಕೆಲಸ ಮಾಡಬಲ್ಲದು. ಸಾಹಿತ್ಯದ ಸಾಂಗತ್ಯ ಮತ್ತು ಕತೆಯ ಒಡನಾಟವು ಈಗ ಎದುರಿಸುತ್ತಿರುವ ಸವಾಲನ್ನು ಇಲ್ಲವಾಗಿಸುವುದಿಲ್ಲ. ಆದರೆ, ಹತಾಶೆಗೆ ಸಮಾಧಾನ ಹೇಳಬಲ್ಲದು. ಆದ್ದರಿಂದ ’ಬುಕ್‌ ಬ್ರಹ್ಮ ವಾಚನ’ದ ಅಡಿಯಲ್ಲಿ ’ಕತೆ ಕೇಳೋಣ ಬನ್ನಿ’ ಎಂಬ ಕತೆಗಾರರು ಕತೆ ಓದುವ ಸರಣಿ ಆರಂಭಿಸಿದ್ದೇವೆ’ ಎಂದಿದ್ದಾರೆ.

ಪ್ರತಿದಿನ ಇಂಟರ್‌ನೆಟ್‌ ಬಳಸುತ್ತಾ, ಟಿ.ವಿ. ನೋಡುತ್ತಾ, ಆಗೊಮ್ಮೆ ಈಗೊಮ್ಮೆ ಪುಸ್ತಕವನ್ನು ತಿರುವಿ ಹಾಕುವ ಕೆಲಸದ ನಡುವೆಯೂ ಸ್ವಲ್ಪ ಬಿಡುವಿಟ್ಟುಕೊಂಡು ಕತೆ ಕೇಳಿ, ನೋಡಿ. ಅಚ್ಚಳಿಯದೇ ಉಳಿದಿರುವ ಅಜ್ಜಿ ಕತೆಗಳನ್ನು ನೆನಪಿಸಿಕೊಳ್ಳಿ.

ಕತೆ ಕೇಳಲು ಫೇಸ್‌ಬುಕ್‌ನ ಪೇಜ್‌ ನೋಡಿ: Book Brahma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...