Homeಕಥೆಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

ಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

- Advertisement -
- Advertisement -

ಮನೆ ಹಿರಿಯರಾದ ಅಜ್ಜ ಅಜ್ಜಿಯಂದಿರು ಮೊಮ್ಮಕ್ಕಳನ್ನೆಲ್ಲಾ ಕೂರಿಸಿಕೊಂಡು ಕತೆ ಹೇಳುತ್ತಿದ್ದ ಕಾಲವೊಂದಿತ್ತು. ದೂರದ ಬೆಟ್ಟದತ್ರ ಒಂದು ಪುಟ್ಟ ಊರಿತ್ತು. ಆ ಊರಿನಲ್ಲಿ ರಾಜಕುಮಾರಿಯೊಬ್ಬಳಿದ್ದಳು…. ಅಂತ ಕತೆ ಆರಂಭವಾಗುತ್ತಿತ್ತು. ಮಧ್ಯೆ ಮಧ್ಯೆ ಅಬ್ಬಾ ಹೀಗೆಲ್ಲಾ ಇತ್ತಾ? ಎನ್ನುವಷ್ಟು ಆಶ್ಚರ್ಯಪಡುವ ಸಂಗತಿಗಳನ್ನು ಅಜ್ಜಿ ಹೇಳುವಾಗ ಕಣ್ಣರಳಿಸಿ ಕೇಳುತ್ತದ್ದೆವು. ಅಲ್ಲಿ ರಾಜಕುಮಾರಿಯೇ ನಾಯಕಿಯಾಗಬೇಕಿರಲಿಲ್ಲ. ಕಾಗೆ, ಗುಬ್ಬಿ, ಬಡವ, ಕಸ ಗುಡಿಸೊ ಹುಡುಗಿ ಹೀಗೆ ಎಲ್ಲರೂ ಕತಾನಾಯಕರಾಗಿರುತ್ತಿದ್ದರು. ಕತೆಯಲ್ಲೊಂದು ಮೌಲ್ಯವಿರುತ್ತಿತ್ತು.

ಕಾಲ ಬದಲಾದಂತೆ ತಂತ್ರಜ್ಞಾನ ಎಲ್ಲವನ್ನು ತನ್ನದಾಗಿಸಿಕೊಳ್ಳುತ್ತಾ ಬಂದಿದೆ. ಅಜ್ಜಿ ಕತೆ ಹೇಳುವ-ಕೇಳುವ ವ್ಯವಧಾನ ಇಲ್ಲವಾಗಿದೆ. ದಿನವಿಡೀ ಓಡೂ, ಓಡೂ… ಎನ್ನುವಂತಾಗಿದೆ. ಇವತ್ತಿಗೆ ಅಜ್ಜಿ ಕತೆ ಹೇಳುತ್ತಿದ್ದ ಕಾಲವೊಂದಿತ್ತು ಅನ್ನೋದು ಮಾತ್ರ ಅಚ್ಚಳಿಯದ ನೆನಪಾಗಿ ಉಳಿದಿದೆ.

ಕೊರೊನಾ ಪಿಡುಗಿನಿಂದ ಬಿಡುವಿಲ್ಲದ ಕೆಲಸಗಳಿಗೆ ಬ್ರೇಕ್‌ ಹಾಕಿ ಮನೆಯಲ್ಲಿಯೇ ಇರುವಂತಾಗಿದೆ. ಮನೆಯವರೊಂದಿಗೆ ಮಾತನಾಡುತ್ತಾ, ಇಡೀ ಸಮಾಜದ ಆಗೂ ಹೋಗುಗಳ ಬಗ್ಗೆ ತಿಳಿಯುತ್ತಿರುವ ‘ಹೋಮ್‌ ಕ್ವಾರಂಟೈನ್‌’ ಸಂದರ್ಭದಲ್ಲಿ ಅಜ್ಜಿ ಕತೆಗಳ ಹಚ್ಚ ಹಸಿರಾದ ನೆನಪು ಮರುಕಳಿಸಿದ್ದು ‘ಕತೆ ಕೇಳೋಣ ಬನ್ನಿ’ ಕಾರ್ಯಕ್ರಮದಿಂದ. ಇಲ್ಲಿ ಅಜ್ಜಿ ಕತೆ ಹೇಳುವುದಿಲ್ಲ ಬದಲಾಗಿ ಕನ್ನಡದ ಹೆಸರಾಂತ ಕತೆಗಾರರು ತಾವು ಬರೆದ ಕತೆಗಳನ್ನು ಓದುತ್ತಾರೆ.

ಕನ್ನಡ ಸಾಹಿತ್ಯದ ಕುರಿತು ಮಾಹಿತಿ ನೀಡುವ ಇ-ತಾಣ ಬುಕ್‌ ಬ್ರಹ್ಮ ಕತೆ ಕೇಳುವ ಆಸಕ್ತರಿಗಾಗಿ ಕಳೆದ ಹದಿನೈದು ದಿನಗಳಿಂದ ಪ್ರತಿದಿನ ಸಂಜೆ 6.30ಕ್ಕೆ ’ಕತೆ ಕೇಳೋಣ ಬನ್ನಿ’ ಫೇಸ್‌ಬುಕ್‌ ಲೈವ್‌ ಅನ್ನು ನಡೆಸುತ್ತಿದೆ. ಮುವತ್ತು ಮಂದಿ ಕತೆಗಾರರು, ವಿವಿಧ ಭಾಷಾ ಶೈಲಿಯ ಕತೆಗಳನ್ನು ಈ ಲೈವ್‌ನಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ. ಈವರೆಗೂ ವಿಕಾಸ್‌ ನೇಗಿಲೋಣಿ, ಗೀತಾ ವಸಂತ, ಹನುಮಂತ ಹಾಲಗೇರಿ, ದಯಾನಂದ, ಚಿದಾನಂದ ಸಾಲಿ, ಶ್ರೀಧರ ಬಳಗಾರ, ಕಪಿಲ ಹುಮನಬಾದೆ, ಮಹಂತೇಶ ನವಲಕಲ್‌, ಅಮರೇಶ ನುಗಡೋಣಿ ಸೇರಿದಂತೆ ಸುಮಾರು ಹದಿನೈದು ಕತೆಗಾರರು ಕತೆಯನ್ನು ಓದಿದ್ದಾರೆ.

ಮೂರನೇ ವಾರ ಅಂದರೆ ನಾಳೆಯಿಂದ ಕೇಶವ ಮಳಗಿ, ಕಲಿಗಣನಾಥ ಗುಡದೂರು, ಡಿ.ಎಸ್. ಚೌಗಲೆ, ಟಿ.ಎಸ್. ಗೊರವರ, ಶಿವಕುಮಾರ ಮಾವಲಿ, ಪದ್ಮಿನಿ ನಾಗರಾಜು ಅವರು ಕತೆ ಓದಲಿದ್ದಾರೆ. ಓದುಗರು ಕತೆಯೊಳಗೊಕ್ಕು ಪಾತ್ರವಾಗಿ ಓದುವುದು ಈ ಕಾರ್ಯಕ್ರಮದ ವಿಶೇಷ. ಇಲ್ಲಿನ ಪ್ರತಿ ಕತೆಯು ಭಿನ್ನವಾಗಿದೆ. ಚಿದಾನಂದ ಸಾಲಿಯವರ ಕತೆ ಹಳ್ಳಿ ಮುಗ್ದ ಜನರ ಬದುಕಿನ ಕುರಿತು ವಿವರಿಸಿದ್ದರೆ ದಯಾನಂದ ಅವರು ಇಂದಿನ ಕಾರ್ಪೊರೇಟ್‌ ಕಂಪನಿಗಳ ಉದ್ಯೋಗಿಗಳು ಕೆಲಸದ ಮೇಲೆ ಬೇರೆ ಕಡೆ ಹೋದಾಗ ಅಲ್ಲಿನ ಜೀವನ ಹೇಗಿರುತ್ತದೆ ಎಂಬುದರ ಕುರಿತು ಹೆಣೆಯಲಾಗಿದೆ.

ಇನ್ನು ಬರವಣಿಗೆಯ ಮೂಲಕ ನಮ್ಮನ್ನೆಲ್ಲಾ ಆಳವಾಗಿ ಚಿಂತಿಸುವಂತೆ ಮಾಡಿರುವ ಹನುಮಂತ ಹಾಲಗೇರಿಯವರು ಓದಿದ ಕತೆ ಸುಡುಗಾಡು ಸಿದ್ದರ ಬದುಕಿನ ಕುರಿತಾಗಿತ್ತು. ನಗರೀಕರಣ ಪ್ರಕ್ರಿಯೆಯಲ್ಲಿ ಮನುಷ್ಯರ ಕೆಲಸವನ್ನು ಯಂತ್ರಗಳು ಕಸಿದುಕೊಂಡದ್ದೇಗೆ ಎಂಬುದನ್ನು ಈ ಕತೆ ಚಿತ್ರಿಸಿದೆ. ಉತ್ತರ ಕರ್ನಾಟಕ ಶೈಲಿ, ಬಯಲು ಸೀಮೆ, ಪಕ್ಕ ಮಂಡ್ಯ ಭಾಷೆ ಕುಂದಾಪುರ ಕನ್ನಡ ಹೀಗೆ ವಿವಿಧ ಬಗೆಯ ಭಾಷಾ ಶೈಲಿ ಇಲ್ಲಿನ ಕತೆಗಳಲ್ಲಿವೆ.

ಕಾರ್ಯಕ್ರಮದ ಕುರಿತು ವಿವರಣೆ ನೀಡಿರುವ ಬುಕ್‌ ಬ್ರಹ್ಮ ‘ಇಂದು ಎಲ್ಲರಿಗೂ ಸಂಕಷ್ಟದ ದಿನಗಳು. ಒಂಟಿಯಾಗಿ ಕಾಲ ಕಳೆಯಬೇಕಾದ ಪರೀಕ್ಷೆಯ ದಿನಗಳಿವು. ಆತಂಕ ಎದುರಾದಾಗ ಸಾಹಿತ್ಯ ಸಾಂತ್ವನ ಹೇಳುವ ಕೆಲಸ ಮಾಡಬಲ್ಲದು. ಸಾಹಿತ್ಯದ ಸಾಂಗತ್ಯ ಮತ್ತು ಕತೆಯ ಒಡನಾಟವು ಈಗ ಎದುರಿಸುತ್ತಿರುವ ಸವಾಲನ್ನು ಇಲ್ಲವಾಗಿಸುವುದಿಲ್ಲ. ಆದರೆ, ಹತಾಶೆಗೆ ಸಮಾಧಾನ ಹೇಳಬಲ್ಲದು. ಆದ್ದರಿಂದ ’ಬುಕ್‌ ಬ್ರಹ್ಮ ವಾಚನ’ದ ಅಡಿಯಲ್ಲಿ ’ಕತೆ ಕೇಳೋಣ ಬನ್ನಿ’ ಎಂಬ ಕತೆಗಾರರು ಕತೆ ಓದುವ ಸರಣಿ ಆರಂಭಿಸಿದ್ದೇವೆ’ ಎಂದಿದ್ದಾರೆ.

ಪ್ರತಿದಿನ ಇಂಟರ್‌ನೆಟ್‌ ಬಳಸುತ್ತಾ, ಟಿ.ವಿ. ನೋಡುತ್ತಾ, ಆಗೊಮ್ಮೆ ಈಗೊಮ್ಮೆ ಪುಸ್ತಕವನ್ನು ತಿರುವಿ ಹಾಕುವ ಕೆಲಸದ ನಡುವೆಯೂ ಸ್ವಲ್ಪ ಬಿಡುವಿಟ್ಟುಕೊಂಡು ಕತೆ ಕೇಳಿ, ನೋಡಿ. ಅಚ್ಚಳಿಯದೇ ಉಳಿದಿರುವ ಅಜ್ಜಿ ಕತೆಗಳನ್ನು ನೆನಪಿಸಿಕೊಳ್ಳಿ.

ಕತೆ ಕೇಳಲು ಫೇಸ್‌ಬುಕ್‌ನ ಪೇಜ್‌ ನೋಡಿ: Book Brahma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...