Homeಕಥೆಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

ಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

- Advertisement -
- Advertisement -

ಮನೆ ಹಿರಿಯರಾದ ಅಜ್ಜ ಅಜ್ಜಿಯಂದಿರು ಮೊಮ್ಮಕ್ಕಳನ್ನೆಲ್ಲಾ ಕೂರಿಸಿಕೊಂಡು ಕತೆ ಹೇಳುತ್ತಿದ್ದ ಕಾಲವೊಂದಿತ್ತು. ದೂರದ ಬೆಟ್ಟದತ್ರ ಒಂದು ಪುಟ್ಟ ಊರಿತ್ತು. ಆ ಊರಿನಲ್ಲಿ ರಾಜಕುಮಾರಿಯೊಬ್ಬಳಿದ್ದಳು…. ಅಂತ ಕತೆ ಆರಂಭವಾಗುತ್ತಿತ್ತು. ಮಧ್ಯೆ ಮಧ್ಯೆ ಅಬ್ಬಾ ಹೀಗೆಲ್ಲಾ ಇತ್ತಾ? ಎನ್ನುವಷ್ಟು ಆಶ್ಚರ್ಯಪಡುವ ಸಂಗತಿಗಳನ್ನು ಅಜ್ಜಿ ಹೇಳುವಾಗ ಕಣ್ಣರಳಿಸಿ ಕೇಳುತ್ತದ್ದೆವು. ಅಲ್ಲಿ ರಾಜಕುಮಾರಿಯೇ ನಾಯಕಿಯಾಗಬೇಕಿರಲಿಲ್ಲ. ಕಾಗೆ, ಗುಬ್ಬಿ, ಬಡವ, ಕಸ ಗುಡಿಸೊ ಹುಡುಗಿ ಹೀಗೆ ಎಲ್ಲರೂ ಕತಾನಾಯಕರಾಗಿರುತ್ತಿದ್ದರು. ಕತೆಯಲ್ಲೊಂದು ಮೌಲ್ಯವಿರುತ್ತಿತ್ತು.

ಕಾಲ ಬದಲಾದಂತೆ ತಂತ್ರಜ್ಞಾನ ಎಲ್ಲವನ್ನು ತನ್ನದಾಗಿಸಿಕೊಳ್ಳುತ್ತಾ ಬಂದಿದೆ. ಅಜ್ಜಿ ಕತೆ ಹೇಳುವ-ಕೇಳುವ ವ್ಯವಧಾನ ಇಲ್ಲವಾಗಿದೆ. ದಿನವಿಡೀ ಓಡೂ, ಓಡೂ… ಎನ್ನುವಂತಾಗಿದೆ. ಇವತ್ತಿಗೆ ಅಜ್ಜಿ ಕತೆ ಹೇಳುತ್ತಿದ್ದ ಕಾಲವೊಂದಿತ್ತು ಅನ್ನೋದು ಮಾತ್ರ ಅಚ್ಚಳಿಯದ ನೆನಪಾಗಿ ಉಳಿದಿದೆ.

ಕೊರೊನಾ ಪಿಡುಗಿನಿಂದ ಬಿಡುವಿಲ್ಲದ ಕೆಲಸಗಳಿಗೆ ಬ್ರೇಕ್‌ ಹಾಕಿ ಮನೆಯಲ್ಲಿಯೇ ಇರುವಂತಾಗಿದೆ. ಮನೆಯವರೊಂದಿಗೆ ಮಾತನಾಡುತ್ತಾ, ಇಡೀ ಸಮಾಜದ ಆಗೂ ಹೋಗುಗಳ ಬಗ್ಗೆ ತಿಳಿಯುತ್ತಿರುವ ‘ಹೋಮ್‌ ಕ್ವಾರಂಟೈನ್‌’ ಸಂದರ್ಭದಲ್ಲಿ ಅಜ್ಜಿ ಕತೆಗಳ ಹಚ್ಚ ಹಸಿರಾದ ನೆನಪು ಮರುಕಳಿಸಿದ್ದು ‘ಕತೆ ಕೇಳೋಣ ಬನ್ನಿ’ ಕಾರ್ಯಕ್ರಮದಿಂದ. ಇಲ್ಲಿ ಅಜ್ಜಿ ಕತೆ ಹೇಳುವುದಿಲ್ಲ ಬದಲಾಗಿ ಕನ್ನಡದ ಹೆಸರಾಂತ ಕತೆಗಾರರು ತಾವು ಬರೆದ ಕತೆಗಳನ್ನು ಓದುತ್ತಾರೆ.

ಕನ್ನಡ ಸಾಹಿತ್ಯದ ಕುರಿತು ಮಾಹಿತಿ ನೀಡುವ ಇ-ತಾಣ ಬುಕ್‌ ಬ್ರಹ್ಮ ಕತೆ ಕೇಳುವ ಆಸಕ್ತರಿಗಾಗಿ ಕಳೆದ ಹದಿನೈದು ದಿನಗಳಿಂದ ಪ್ರತಿದಿನ ಸಂಜೆ 6.30ಕ್ಕೆ ’ಕತೆ ಕೇಳೋಣ ಬನ್ನಿ’ ಫೇಸ್‌ಬುಕ್‌ ಲೈವ್‌ ಅನ್ನು ನಡೆಸುತ್ತಿದೆ. ಮುವತ್ತು ಮಂದಿ ಕತೆಗಾರರು, ವಿವಿಧ ಭಾಷಾ ಶೈಲಿಯ ಕತೆಗಳನ್ನು ಈ ಲೈವ್‌ನಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ. ಈವರೆಗೂ ವಿಕಾಸ್‌ ನೇಗಿಲೋಣಿ, ಗೀತಾ ವಸಂತ, ಹನುಮಂತ ಹಾಲಗೇರಿ, ದಯಾನಂದ, ಚಿದಾನಂದ ಸಾಲಿ, ಶ್ರೀಧರ ಬಳಗಾರ, ಕಪಿಲ ಹುಮನಬಾದೆ, ಮಹಂತೇಶ ನವಲಕಲ್‌, ಅಮರೇಶ ನುಗಡೋಣಿ ಸೇರಿದಂತೆ ಸುಮಾರು ಹದಿನೈದು ಕತೆಗಾರರು ಕತೆಯನ್ನು ಓದಿದ್ದಾರೆ.

ಮೂರನೇ ವಾರ ಅಂದರೆ ನಾಳೆಯಿಂದ ಕೇಶವ ಮಳಗಿ, ಕಲಿಗಣನಾಥ ಗುಡದೂರು, ಡಿ.ಎಸ್. ಚೌಗಲೆ, ಟಿ.ಎಸ್. ಗೊರವರ, ಶಿವಕುಮಾರ ಮಾವಲಿ, ಪದ್ಮಿನಿ ನಾಗರಾಜು ಅವರು ಕತೆ ಓದಲಿದ್ದಾರೆ. ಓದುಗರು ಕತೆಯೊಳಗೊಕ್ಕು ಪಾತ್ರವಾಗಿ ಓದುವುದು ಈ ಕಾರ್ಯಕ್ರಮದ ವಿಶೇಷ. ಇಲ್ಲಿನ ಪ್ರತಿ ಕತೆಯು ಭಿನ್ನವಾಗಿದೆ. ಚಿದಾನಂದ ಸಾಲಿಯವರ ಕತೆ ಹಳ್ಳಿ ಮುಗ್ದ ಜನರ ಬದುಕಿನ ಕುರಿತು ವಿವರಿಸಿದ್ದರೆ ದಯಾನಂದ ಅವರು ಇಂದಿನ ಕಾರ್ಪೊರೇಟ್‌ ಕಂಪನಿಗಳ ಉದ್ಯೋಗಿಗಳು ಕೆಲಸದ ಮೇಲೆ ಬೇರೆ ಕಡೆ ಹೋದಾಗ ಅಲ್ಲಿನ ಜೀವನ ಹೇಗಿರುತ್ತದೆ ಎಂಬುದರ ಕುರಿತು ಹೆಣೆಯಲಾಗಿದೆ.

ಇನ್ನು ಬರವಣಿಗೆಯ ಮೂಲಕ ನಮ್ಮನ್ನೆಲ್ಲಾ ಆಳವಾಗಿ ಚಿಂತಿಸುವಂತೆ ಮಾಡಿರುವ ಹನುಮಂತ ಹಾಲಗೇರಿಯವರು ಓದಿದ ಕತೆ ಸುಡುಗಾಡು ಸಿದ್ದರ ಬದುಕಿನ ಕುರಿತಾಗಿತ್ತು. ನಗರೀಕರಣ ಪ್ರಕ್ರಿಯೆಯಲ್ಲಿ ಮನುಷ್ಯರ ಕೆಲಸವನ್ನು ಯಂತ್ರಗಳು ಕಸಿದುಕೊಂಡದ್ದೇಗೆ ಎಂಬುದನ್ನು ಈ ಕತೆ ಚಿತ್ರಿಸಿದೆ. ಉತ್ತರ ಕರ್ನಾಟಕ ಶೈಲಿ, ಬಯಲು ಸೀಮೆ, ಪಕ್ಕ ಮಂಡ್ಯ ಭಾಷೆ ಕುಂದಾಪುರ ಕನ್ನಡ ಹೀಗೆ ವಿವಿಧ ಬಗೆಯ ಭಾಷಾ ಶೈಲಿ ಇಲ್ಲಿನ ಕತೆಗಳಲ್ಲಿವೆ.

ಕಾರ್ಯಕ್ರಮದ ಕುರಿತು ವಿವರಣೆ ನೀಡಿರುವ ಬುಕ್‌ ಬ್ರಹ್ಮ ‘ಇಂದು ಎಲ್ಲರಿಗೂ ಸಂಕಷ್ಟದ ದಿನಗಳು. ಒಂಟಿಯಾಗಿ ಕಾಲ ಕಳೆಯಬೇಕಾದ ಪರೀಕ್ಷೆಯ ದಿನಗಳಿವು. ಆತಂಕ ಎದುರಾದಾಗ ಸಾಹಿತ್ಯ ಸಾಂತ್ವನ ಹೇಳುವ ಕೆಲಸ ಮಾಡಬಲ್ಲದು. ಸಾಹಿತ್ಯದ ಸಾಂಗತ್ಯ ಮತ್ತು ಕತೆಯ ಒಡನಾಟವು ಈಗ ಎದುರಿಸುತ್ತಿರುವ ಸವಾಲನ್ನು ಇಲ್ಲವಾಗಿಸುವುದಿಲ್ಲ. ಆದರೆ, ಹತಾಶೆಗೆ ಸಮಾಧಾನ ಹೇಳಬಲ್ಲದು. ಆದ್ದರಿಂದ ’ಬುಕ್‌ ಬ್ರಹ್ಮ ವಾಚನ’ದ ಅಡಿಯಲ್ಲಿ ’ಕತೆ ಕೇಳೋಣ ಬನ್ನಿ’ ಎಂಬ ಕತೆಗಾರರು ಕತೆ ಓದುವ ಸರಣಿ ಆರಂಭಿಸಿದ್ದೇವೆ’ ಎಂದಿದ್ದಾರೆ.

ಪ್ರತಿದಿನ ಇಂಟರ್‌ನೆಟ್‌ ಬಳಸುತ್ತಾ, ಟಿ.ವಿ. ನೋಡುತ್ತಾ, ಆಗೊಮ್ಮೆ ಈಗೊಮ್ಮೆ ಪುಸ್ತಕವನ್ನು ತಿರುವಿ ಹಾಕುವ ಕೆಲಸದ ನಡುವೆಯೂ ಸ್ವಲ್ಪ ಬಿಡುವಿಟ್ಟುಕೊಂಡು ಕತೆ ಕೇಳಿ, ನೋಡಿ. ಅಚ್ಚಳಿಯದೇ ಉಳಿದಿರುವ ಅಜ್ಜಿ ಕತೆಗಳನ್ನು ನೆನಪಿಸಿಕೊಳ್ಳಿ.

ಕತೆ ಕೇಳಲು ಫೇಸ್‌ಬುಕ್‌ನ ಪೇಜ್‌ ನೋಡಿ: Book Brahma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...