Homeಕಥೆಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

ಕ್ವಾರಂಟೈನ್‌ ಸಮಯದಲ್ಲಿ ‘ಕತೆ ಕೇಳೋಣ ಬನ್ನಿ’: ಬುಕ್‌ ಬ್ರಹ್ಮದ ವಿಭಿನ್ನ ಪ್ರಯೋಗ

- Advertisement -
- Advertisement -

ಮನೆ ಹಿರಿಯರಾದ ಅಜ್ಜ ಅಜ್ಜಿಯಂದಿರು ಮೊಮ್ಮಕ್ಕಳನ್ನೆಲ್ಲಾ ಕೂರಿಸಿಕೊಂಡು ಕತೆ ಹೇಳುತ್ತಿದ್ದ ಕಾಲವೊಂದಿತ್ತು. ದೂರದ ಬೆಟ್ಟದತ್ರ ಒಂದು ಪುಟ್ಟ ಊರಿತ್ತು. ಆ ಊರಿನಲ್ಲಿ ರಾಜಕುಮಾರಿಯೊಬ್ಬಳಿದ್ದಳು…. ಅಂತ ಕತೆ ಆರಂಭವಾಗುತ್ತಿತ್ತು. ಮಧ್ಯೆ ಮಧ್ಯೆ ಅಬ್ಬಾ ಹೀಗೆಲ್ಲಾ ಇತ್ತಾ? ಎನ್ನುವಷ್ಟು ಆಶ್ಚರ್ಯಪಡುವ ಸಂಗತಿಗಳನ್ನು ಅಜ್ಜಿ ಹೇಳುವಾಗ ಕಣ್ಣರಳಿಸಿ ಕೇಳುತ್ತದ್ದೆವು. ಅಲ್ಲಿ ರಾಜಕುಮಾರಿಯೇ ನಾಯಕಿಯಾಗಬೇಕಿರಲಿಲ್ಲ. ಕಾಗೆ, ಗುಬ್ಬಿ, ಬಡವ, ಕಸ ಗುಡಿಸೊ ಹುಡುಗಿ ಹೀಗೆ ಎಲ್ಲರೂ ಕತಾನಾಯಕರಾಗಿರುತ್ತಿದ್ದರು. ಕತೆಯಲ್ಲೊಂದು ಮೌಲ್ಯವಿರುತ್ತಿತ್ತು.

ಕಾಲ ಬದಲಾದಂತೆ ತಂತ್ರಜ್ಞಾನ ಎಲ್ಲವನ್ನು ತನ್ನದಾಗಿಸಿಕೊಳ್ಳುತ್ತಾ ಬಂದಿದೆ. ಅಜ್ಜಿ ಕತೆ ಹೇಳುವ-ಕೇಳುವ ವ್ಯವಧಾನ ಇಲ್ಲವಾಗಿದೆ. ದಿನವಿಡೀ ಓಡೂ, ಓಡೂ… ಎನ್ನುವಂತಾಗಿದೆ. ಇವತ್ತಿಗೆ ಅಜ್ಜಿ ಕತೆ ಹೇಳುತ್ತಿದ್ದ ಕಾಲವೊಂದಿತ್ತು ಅನ್ನೋದು ಮಾತ್ರ ಅಚ್ಚಳಿಯದ ನೆನಪಾಗಿ ಉಳಿದಿದೆ.

ಕೊರೊನಾ ಪಿಡುಗಿನಿಂದ ಬಿಡುವಿಲ್ಲದ ಕೆಲಸಗಳಿಗೆ ಬ್ರೇಕ್‌ ಹಾಕಿ ಮನೆಯಲ್ಲಿಯೇ ಇರುವಂತಾಗಿದೆ. ಮನೆಯವರೊಂದಿಗೆ ಮಾತನಾಡುತ್ತಾ, ಇಡೀ ಸಮಾಜದ ಆಗೂ ಹೋಗುಗಳ ಬಗ್ಗೆ ತಿಳಿಯುತ್ತಿರುವ ‘ಹೋಮ್‌ ಕ್ವಾರಂಟೈನ್‌’ ಸಂದರ್ಭದಲ್ಲಿ ಅಜ್ಜಿ ಕತೆಗಳ ಹಚ್ಚ ಹಸಿರಾದ ನೆನಪು ಮರುಕಳಿಸಿದ್ದು ‘ಕತೆ ಕೇಳೋಣ ಬನ್ನಿ’ ಕಾರ್ಯಕ್ರಮದಿಂದ. ಇಲ್ಲಿ ಅಜ್ಜಿ ಕತೆ ಹೇಳುವುದಿಲ್ಲ ಬದಲಾಗಿ ಕನ್ನಡದ ಹೆಸರಾಂತ ಕತೆಗಾರರು ತಾವು ಬರೆದ ಕತೆಗಳನ್ನು ಓದುತ್ತಾರೆ.

ಕನ್ನಡ ಸಾಹಿತ್ಯದ ಕುರಿತು ಮಾಹಿತಿ ನೀಡುವ ಇ-ತಾಣ ಬುಕ್‌ ಬ್ರಹ್ಮ ಕತೆ ಕೇಳುವ ಆಸಕ್ತರಿಗಾಗಿ ಕಳೆದ ಹದಿನೈದು ದಿನಗಳಿಂದ ಪ್ರತಿದಿನ ಸಂಜೆ 6.30ಕ್ಕೆ ’ಕತೆ ಕೇಳೋಣ ಬನ್ನಿ’ ಫೇಸ್‌ಬುಕ್‌ ಲೈವ್‌ ಅನ್ನು ನಡೆಸುತ್ತಿದೆ. ಮುವತ್ತು ಮಂದಿ ಕತೆಗಾರರು, ವಿವಿಧ ಭಾಷಾ ಶೈಲಿಯ ಕತೆಗಳನ್ನು ಈ ಲೈವ್‌ನಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ. ಈವರೆಗೂ ವಿಕಾಸ್‌ ನೇಗಿಲೋಣಿ, ಗೀತಾ ವಸಂತ, ಹನುಮಂತ ಹಾಲಗೇರಿ, ದಯಾನಂದ, ಚಿದಾನಂದ ಸಾಲಿ, ಶ್ರೀಧರ ಬಳಗಾರ, ಕಪಿಲ ಹುಮನಬಾದೆ, ಮಹಂತೇಶ ನವಲಕಲ್‌, ಅಮರೇಶ ನುಗಡೋಣಿ ಸೇರಿದಂತೆ ಸುಮಾರು ಹದಿನೈದು ಕತೆಗಾರರು ಕತೆಯನ್ನು ಓದಿದ್ದಾರೆ.

ಮೂರನೇ ವಾರ ಅಂದರೆ ನಾಳೆಯಿಂದ ಕೇಶವ ಮಳಗಿ, ಕಲಿಗಣನಾಥ ಗುಡದೂರು, ಡಿ.ಎಸ್. ಚೌಗಲೆ, ಟಿ.ಎಸ್. ಗೊರವರ, ಶಿವಕುಮಾರ ಮಾವಲಿ, ಪದ್ಮಿನಿ ನಾಗರಾಜು ಅವರು ಕತೆ ಓದಲಿದ್ದಾರೆ. ಓದುಗರು ಕತೆಯೊಳಗೊಕ್ಕು ಪಾತ್ರವಾಗಿ ಓದುವುದು ಈ ಕಾರ್ಯಕ್ರಮದ ವಿಶೇಷ. ಇಲ್ಲಿನ ಪ್ರತಿ ಕತೆಯು ಭಿನ್ನವಾಗಿದೆ. ಚಿದಾನಂದ ಸಾಲಿಯವರ ಕತೆ ಹಳ್ಳಿ ಮುಗ್ದ ಜನರ ಬದುಕಿನ ಕುರಿತು ವಿವರಿಸಿದ್ದರೆ ದಯಾನಂದ ಅವರು ಇಂದಿನ ಕಾರ್ಪೊರೇಟ್‌ ಕಂಪನಿಗಳ ಉದ್ಯೋಗಿಗಳು ಕೆಲಸದ ಮೇಲೆ ಬೇರೆ ಕಡೆ ಹೋದಾಗ ಅಲ್ಲಿನ ಜೀವನ ಹೇಗಿರುತ್ತದೆ ಎಂಬುದರ ಕುರಿತು ಹೆಣೆಯಲಾಗಿದೆ.

ಇನ್ನು ಬರವಣಿಗೆಯ ಮೂಲಕ ನಮ್ಮನ್ನೆಲ್ಲಾ ಆಳವಾಗಿ ಚಿಂತಿಸುವಂತೆ ಮಾಡಿರುವ ಹನುಮಂತ ಹಾಲಗೇರಿಯವರು ಓದಿದ ಕತೆ ಸುಡುಗಾಡು ಸಿದ್ದರ ಬದುಕಿನ ಕುರಿತಾಗಿತ್ತು. ನಗರೀಕರಣ ಪ್ರಕ್ರಿಯೆಯಲ್ಲಿ ಮನುಷ್ಯರ ಕೆಲಸವನ್ನು ಯಂತ್ರಗಳು ಕಸಿದುಕೊಂಡದ್ದೇಗೆ ಎಂಬುದನ್ನು ಈ ಕತೆ ಚಿತ್ರಿಸಿದೆ. ಉತ್ತರ ಕರ್ನಾಟಕ ಶೈಲಿ, ಬಯಲು ಸೀಮೆ, ಪಕ್ಕ ಮಂಡ್ಯ ಭಾಷೆ ಕುಂದಾಪುರ ಕನ್ನಡ ಹೀಗೆ ವಿವಿಧ ಬಗೆಯ ಭಾಷಾ ಶೈಲಿ ಇಲ್ಲಿನ ಕತೆಗಳಲ್ಲಿವೆ.

ಕಾರ್ಯಕ್ರಮದ ಕುರಿತು ವಿವರಣೆ ನೀಡಿರುವ ಬುಕ್‌ ಬ್ರಹ್ಮ ‘ಇಂದು ಎಲ್ಲರಿಗೂ ಸಂಕಷ್ಟದ ದಿನಗಳು. ಒಂಟಿಯಾಗಿ ಕಾಲ ಕಳೆಯಬೇಕಾದ ಪರೀಕ್ಷೆಯ ದಿನಗಳಿವು. ಆತಂಕ ಎದುರಾದಾಗ ಸಾಹಿತ್ಯ ಸಾಂತ್ವನ ಹೇಳುವ ಕೆಲಸ ಮಾಡಬಲ್ಲದು. ಸಾಹಿತ್ಯದ ಸಾಂಗತ್ಯ ಮತ್ತು ಕತೆಯ ಒಡನಾಟವು ಈಗ ಎದುರಿಸುತ್ತಿರುವ ಸವಾಲನ್ನು ಇಲ್ಲವಾಗಿಸುವುದಿಲ್ಲ. ಆದರೆ, ಹತಾಶೆಗೆ ಸಮಾಧಾನ ಹೇಳಬಲ್ಲದು. ಆದ್ದರಿಂದ ’ಬುಕ್‌ ಬ್ರಹ್ಮ ವಾಚನ’ದ ಅಡಿಯಲ್ಲಿ ’ಕತೆ ಕೇಳೋಣ ಬನ್ನಿ’ ಎಂಬ ಕತೆಗಾರರು ಕತೆ ಓದುವ ಸರಣಿ ಆರಂಭಿಸಿದ್ದೇವೆ’ ಎಂದಿದ್ದಾರೆ.

ಪ್ರತಿದಿನ ಇಂಟರ್‌ನೆಟ್‌ ಬಳಸುತ್ತಾ, ಟಿ.ವಿ. ನೋಡುತ್ತಾ, ಆಗೊಮ್ಮೆ ಈಗೊಮ್ಮೆ ಪುಸ್ತಕವನ್ನು ತಿರುವಿ ಹಾಕುವ ಕೆಲಸದ ನಡುವೆಯೂ ಸ್ವಲ್ಪ ಬಿಡುವಿಟ್ಟುಕೊಂಡು ಕತೆ ಕೇಳಿ, ನೋಡಿ. ಅಚ್ಚಳಿಯದೇ ಉಳಿದಿರುವ ಅಜ್ಜಿ ಕತೆಗಳನ್ನು ನೆನಪಿಸಿಕೊಳ್ಳಿ.

ಕತೆ ಕೇಳಲು ಫೇಸ್‌ಬುಕ್‌ನ ಪೇಜ್‌ ನೋಡಿ: Book Brahma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...